ಬಾಂಗ್ಲಾದೇಶದ ಕಂಟೇನರ್ ಡಿಪೋದಲ್ಲಿ ಭಾರೀ ಸ್ಫೋಟ: 40ಕ್ಕೂ ಹೆಚ್ಚು ಸಾವು
ಢಾಕಾ, ಜೂನ್ 5: ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಶಿಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿದುರಂತ ಸಂಭವಿಸಿ 40ಕ್ಕೂ ಹೆಚ್ಚು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಶನಿವಾರ ಸಂಭವಿಸಿದ ಈ ದುರಂತದಲ್ಲಿ 450 ಮಂದಿಗೆ ಗಾಯವಾಗಿದೆ. ಅನೇಕ ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ರಾಸಾಯನಿಕ ಪದಾರ್ಥಗಳಿಂದಾಗಿ ಬೆಂಕಿ ಹೊತ್ತಿಕೊಂಡಿತು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಫೋಟಗೊಂಡ ಬಳಿಕ ಬೆಂಕಿ ಹೆಚ್ಚು ವೇಗವಾಗಿ ವ್ಯಾಪಿಸಿತು. ಪಕ್ಕ ಪಕ್ಕದಲ್ಲಿದ್ದ ಕಂಟೇನರ್ಗಳಿಗೆ ಬೆಂಕಿ ಬಹಳ ಬೇಗ ಹೊತ್ತಿಕೊಳ್ಳುತ್ತಾ ಹೋಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚಿತ್ತಗಾಂಗ್ನ ಪೊಲೀಸ್ ಅಧಿಕಾರಿ ನೂರುಲ್ ಅಲಂ ನೀಡಿರುವ ಮಾಹಿತಿ ಪ್ರಕಾರ, ಶನಿವಾರ ರಾತ್ರಿ 9 ಗಂಟೆಗೆ ಕಂಟೇನರ್ ಡಿಪೋದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಧ್ಯರಾತ್ರಿಯ ಸುಮಾರಿಗೆ ಸ್ಫೋಟವಾಗಿದೆ. ಅದಾದ ಬಳಿಕ ಬೆಂಕಿ ವಾಯುವೇಗದಲ್ಲಿ ವ್ಯಾಪಿಸಿದೆ. ಮೂಲಗಳ ಪ್ರಕಾರ ಸ್ಫೋಟದ ತೀವ್ರತೆಗೆ ಘಟನಾ ಸ್ಥಳದ ಸಮೀಪದ ಮನೆಗಳ ಕಿಟಕಿ ಗಾಜುಗಳು ಹೊಡೆದುಹೋಗಿವೆ ಎನ್ನಲಾಗಿದೆ.

ರೆಡ್ ಕ್ರೆಸೆಂಟ್ ಯೂತ್ ಎಂಬ ಸ್ವಯಂಸೇವಾ ಸಂಸ್ಥೆಯ ಉನ್ನತ ಅಧಿಕಾರಿ ಇಸ್ತಾಕುಲ್ ಇಸ್ಲಾಮ್ ಪ್ರಕಾರ, "ಈ ದುರ್ಘಟನೆಯಲ್ಲಿ 450 ಮಂದಿಗೆ ಗಾಯವಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಅಪಾಯ ಇದೆ."
ಬೆಂಕಿಯನ್ನು ನಂದಿಸಲು 19 ಅಗ್ನಿಶಾಮಕ ತಂಡಗಳು ಪ್ರಯತ್ನಿಸುತ್ತಿವೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಆರು ಆಂಬುಲೆನ್ಸ್ ವಾಹನಗಳನ್ನೂ ಬಳಲಾಗುತ್ತಿದೆ. ಎಎನ್ಐ ವರದಿ ಪ್ರಕಾರ, ಬೆಂಕಿ ಮೊದಲು ಕಾಣಿಸಿಕೊಂಡಿದ್ದು ರಾತ್ರಿ 9 ಗಂಟೆಗೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವಾಗಲೇ 11:45ರ ಸುಮಾರಿಗೆ ದೊಡ್ಡ ಸ್ಫೋಟವಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆಯೇ ಈ ಸ್ಪೋಟಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ರಾಜಧಾನಿ ಢಾಕಾ ಬಿಟ್ಟರೆ ಚಿತ್ತಗಾಂಗ್ ಅಥವಾ ಚಟಗಾಂವ್ ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರವಾಗಿದೆ. ಇದು ಸಾವಿರಾರು ವರ್ಷಗಳ ಹಿಂದಿನಿಂದಲೂ ವಿಶ್ವದ ಪ್ರಮುಖ ಬಂದು ಸ್ಥಳವಾಗಿ ಗುರುತಿಸಿಕೊಂಡಿದೆ. ಇದೇ ನಗರದ ಸೀತಾಕುಂಡ ಎಂಬ ಪ್ರದೇಶದಲ್ಲಿ ಹಡಗುಗಳ ಕಂಟೇನರ್ಗಳನ್ನು ಇರಿಸುವ ಉಗ್ರಾಣವೊಂದರೊಳಗೆ ಶನಿವಾರ ಸ್ಫೋಟ ಸಂಭವಿಸಿರುವುದು.
(ಒನ್ಇಂಡಿಯಾ ಸುದ್ದಿ)
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications