Bangladesh Election: ಬಾಂಗ್ಲಾದೇಶ ಚುನಾವಣೆಯಲ್ಲಿ ಸೋಲು, ಗೆಲುವಿನ ಲೆಕ್ಕಾಚಾರ ಶುರು
ಬಾಂಗ್ಲಾದೇಶ ಮತ್ತು ಭಾರತದ ನಡುವೆ ಸಂಬಂಧ ಕೆಟ್ಟು ಹೋಗಿದ್ದು, ಬಾಂಗ್ಲಾದೇಶದ ಕಿತಾಪತಿ ಇದೀಗ ಎರಡೂ ದೇಶಗಳ ನಡುವೆ ದೊಡ್ಡ ಅಂತರ ತಂದಿದೆ. ಅದರಲ್ಲೂ ಬಾಂಗ್ಲಾದೇಶದ ರಾಜಕಾರಣಿಗಳು ಮತ್ತು ಅಲ್ಲಿನ ಅಧಿಕಾರಿಗಳು ಮಾಡುತ್ತಿರುವ ಕಿರಿಕ್ ಒಂದು ಕಾಲದ ಆತ್ಮೀಯ ದೇಶಗಳನ್ನು ದೂರವಾಗುವ ರೀತಿ ಮಾಡಿದೆ. ಅಲ್ಲದೆ ಬಾಂಗ್ಲಾ ನೆಲದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹಿಂಸಾಚಾರ ನಡೆಸುತ್ತಿರುವ & ಗಲಭೆಗೆ ಪ್ರಚೋದನೆ ನೀಡುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಮಯದಲ್ಲೇ ಈಗ ಬಾಂಗ್ಲಾ ನೆಲದಲ್ಲಿ ಚುನಾವಣೆ ನಡೆದಿದ್ದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕೌಂಟ್ಡೌನ್ ಕೂಡ ಶುರು ಆಗಿದೆ.
ಬಾಂಗ್ಲಾದೇಶ 2 ವರ್ಷದ ಹಿಂದೆ ಹೊತ್ತಿ ಉರಿದಿತ್ತು. 2024 ಆಗಸ್ಟ್ ತಿಂಗಳಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳು ಆರಂಭ ಆಗಿ, ಅಂದಿನ ಪ್ರಧಾನಿ ಶೇಖ್ ಹಸೀನಾ ಅಧಿಕಾರ ಬಿಟ್ಟು ಕೆಳಗಿಳಿಯುವ ರೀತಿ ಆಗಿತ್ತು. ಅಲ್ಲದೆ ಶೇಖ್ ಹಸೀನಾ ಭಾರತಕ್ಕೆ ಬಂದು ಆಶ್ರಯ ಕೂಡ ಪಡೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶೇಖ್ ಹಸೀನಾ ಅಧಿಕಾರದಿಂದ ನಿರ್ಗಮಿಸಿದ ನಂತರ ಮೊದಲ ಬಾರಿ ಎಲೆಕ್ಷನ್ ನಡೆದಿದೆ. ಬಾಂಗ್ಲಾ ಸಂಸತ್ ಚುನಾವಣೆಯ ಹಿನ್ನೆಲೆ ಇಡೀ ಜಗತ್ತಿನ ಕಣ್ಣು ಇಲ್ಲೇ ನೆಟ್ಟಿದೆ. ಮತದಾನ ಗುರುವಾರ ಬೆಳಗ್ಗೆಯೇ ಆರಂಭ ಆಗಿತ್ತು, ಈಗ ಚುನಾವಣೆ ಫಲಿತಾಂಶದ ಕಡೆಗೆ ಎಲ್ಲರ ಗಮನ ನೆಟ್ಟಿದೆ. ಹಾಗಾದರೆ, ಬಾಂಗ್ಲಾದೇಶ ಆಳುವ ಹೊಸ ಪಕ್ಷ ಯಾವುದು? ಬನ್ನಿ ತಿಳಿಯೋಣ.

ಚುನಾವಣೆಯಲ್ಲಿ 1,755 ಅಭ್ಯರ್ಥಿಗಳ ಸ್ಪರ್ಧೆ
ಬಾಂಗ್ಲಾದೇಶ ಒಟ್ಟಾರೆ 300 ಸಂಸತ್ ಕ್ಷೇತ್ರಗಳನ್ನು ಹೊಂದಿದ್ದು, ಇದೀಗ ಈ 300 ಸಂಸತ್ ಕ್ಷೇತ್ರಗಳ ಪೈಕಿ ಒಟ್ಟು 299 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಗುರುವಾರ ಬೆಳಗ್ಗೆ 7.30ಕ್ಕೆ ಆರಂಭ ಆಗಿದ್ದ ಮತದಾನವು ಬಹುತೇಕ ಶಾಂತಿಯುತವಾಗಿ ಮುಕ್ತಾಯ ಆಗಿದ್ದು, ಒಂದು ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಸಾವು ಹಿನ್ನೆಲೆ ಮತದಾನ ರದ್ದು ಮಾಡಲಾಗಿತ್ತು. ಇದೀಗ ಚುನಾವಣೆ ನಡೆದಿರುವ 300 ಸಂಸತ್ ಕ್ಷೇತ್ರಗಳಲ್ಲಿ ಸೋಲು & ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಒಟ್ಟು 51 ರಾಜಕೀಯ ಪಕ್ಷಗಳು ಈ ಬಾರಿಯ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರೆ ಒಟ್ಟಾರೆ 1,755 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಈ ಪೈಕಿ, 273 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರೆಲ್ಲರ ಭವಿಷ್ಯ ಇನ್ನು ಕೆಲವೇ ಗಂಟೆಗಳಲ್ಲಿ ನಿರ್ಧಾರ ಆಗಲಿದೆ.
Bangladeshis lined up outside polling booths as voting began for a pivotal election for the South Asian nation, marking a return to democracy after the 2024 ouster of long-time premier Sheikh Hasina in a Gen Z driven uprising https://t.co/rPX3SMSsWq pic.twitter.com/QAAEPlKdAs
— Reuters (@Reuters) February 12, 2026
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications