ಬಾಂಗ್ಲಾದಲ್ಲಿ ನೂತನ ಪ್ರಧಾನಿ ಪದಗ್ರಹಣಕ್ಕೆ ಕ್ಷಣಗಣನೆ, ಗಡಿಯಲ್ಲಿ ಬಿಗಿ ಬಂದೋಬಸ್ತ್ | Bangladesh Election
ಬಾಂಗ್ಲಾದೇಶ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಇಷ್ಟು ದಿನಗಳ ಕಾಲ ಇದ್ದ ಕಿರಿಕ್ ಇದೀಗ ಮಾಯವಾಗುವ ನಿರೀಕ್ಷೆ ಮೂಡಿದೆ. ಭಾರತದ ಜೊತೆಗೆ ಸಂಬಂಧ ಹಾಳು ಮಾಡಿಕೊಂಡಿದ್ದ ಸರ್ಕಾರ ಇದೀಗ ಬಾಂಗ್ಲಾ ಬಿಟ್ಟು ತೊಲಗಲಿದ್ದು, ಹೊಸ ಸರ್ಕಾರ ಬಾಂಗ್ಲಾದೇಶದ ಆಡಳಿತ ನೋಡಿಕೊಳ್ಳಲಿದೆ. ಜನರಿಂದ ಬಹುಮತ ಪಡೆದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ಮುಖ್ಯಸ್ಥ, ತಾರಿಕ್ ರಹ್ಮಾನ್ಗೆ ಬಾಂಗ್ಲಾದೇಶದ ಪ್ರಧಾನಿ ಪಟ್ಟ ಸಿಗುವುದು ಬಹುತೇಕ ಖಚಿತವಾಗಿದೆ. ಇಂತಹ ಸಮಯದಲ್ಲೇ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ, ಮತ್ತೊಂದು ಕಡೆ ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳ ಕಣ್ಣು ಇದೀಗ ಬಾಂಗ್ಲಾ ಮೇಲೆ ನೆಟ್ಟಿದೆ.
ಬಿಎನ್ಪಿ ಎಂದರೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಗೆ ಬಾಂಗ್ಲಾದಲ್ಲಿ ಸಂಪೂರ್ಣ ಬಹುಮತ ಸಿಕ್ಕಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ತಾರಿಕ್ ರಹ್ಮಾನ್ಗೆ ಬಾಂಗ್ಲಾ ಪ್ರಧಾನಿ ಪಟ್ಟ ಗ್ಯಾರಂಟಿಯೂ ಆಗಿದೆ. ಭಾರತದ ಜೊತೆಗೆ ತಾರಿಕ್ ರಹ್ಮಾನ್ ಉತ್ತಮ ಸ್ನೇಹ ಹೊಂದಿರುವುದು ಮತ್ತೊಂದು ಗಮನ ಸೆಳೆಯುವ ಅಂಶವಾಗಿದೆ. ಹಾಗೆಯೇ 291 ಅಭ್ಯರ್ಥಿಗಳ ಪೈಕಿ ಈಗಾಗಲೇ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ 209 ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. 2 ವರ್ಷ ತಿಕ್ಕಾಟದ ನಂತರ ಬಾಂಗ್ಲಾದ ನೆಲದಲ್ಲಿ ಚುನಾವಣೆ ನಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿ ಇದೀಗ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಸಂಬಂಧ ಸುಧಾರಣೆಗೆ ಒತ್ತು ನೀಡುತ್ತಾರಾ?
ಭಾರತ ಮಾಡಿರುವ ಬಹುದೊಡ್ಡ ಸಹಾಯವನ್ನು ಬಾಂಗ್ಲಾದೇಶವು ಎಂದೆಂದಿಗೂ ಮರೆಯಬಾರದು. ಬಾಂಗ್ಲಾದೇಶ 1971ರ ಸಮಯದಲ್ಲಿ ಹೋರಾಡಿ, ಪಾಕಿಸ್ತಾನದ ಹಿಡಿತದಿಂದ ತಪ್ಪಿಸಿಕೊಂಡು ಹೊಸ ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಲು ಭಾರತವೇ ಕಾರಣ. ಹೀಗೆ ಬಾಂಗ್ಲಾದೇಶ ಎಂದೆಂದಿಗೂ ಈ ಸಹಾಯವನ್ನು ಮತ್ತು ಭಾರತ ಕೊಟ್ಟಿದ್ದ ಬೆಂಬಲವನ್ನು ಮರೆಯಬಾರದು ಕೂಡ. ಹೀಗಿದ್ದರೂ ಎಲ್ಲಾ ಸಹಾಯವನ್ನು ಮರೆತವರ ರೀತಿ ಬಾಂಗ್ಲಾದೇಶ ಇತ್ತೀಚೆಗೆ ವರ್ತಿಸಿತ್ತು. ಅದರಲ್ಲೂ ಬಾಂಗ್ಲಾ ಹಂಗಾಮಿ ಸರ್ಕಾರ ಭಾರತದ ಜೊತೆಗೆ ಕಿರಿಕ್ ಮಾಡಿಕೊಳ್ಳುವುದನ್ನೇ ಕೆಲಸ ಮಾಡಿಕೊಂಡಿತ್ತು, ಜಾಗತಿಕವಾಗೂ ಭಾರತದ ಜೊತೆಗೆ ತಿಕ್ಕಾಟ ನಡೆಸುತ್ತಾ ಬಂದಿತ್ತು ಹಂಗಾಮಿ ಸರ್ಕಾರ.
ಹಿಂದೂಗಳ ಮೇಲೆ ನಿರಂತರ ದಾಳಿ
ಇದೂ ಅಲ್ಲದೆ ಬಾಂಗ್ಲಾದೇಶ ನೆಲದಲ್ಲಿ ಇರುವ ಶೇಕಡಾ 7.94ರಷ್ಟು ಹಿಂದೂ ಧರ್ಮಿಯರನ್ನ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದ ಆರೋಪವೂ ಕೇಳಿಬಂದಿತ್ತು. ಹೀಗೆ ತನ್ನ ನೆಲದಲ್ಲಿ ಹಿಂಸಾಚಾರ ನಡೆದರೂ ಇದರ ಬಗ್ಗೆ ಬಾಂಗ್ಲಾ ಹಂಗಾಮಿ ಸರ್ಕಾರ ಕ್ರಮ ಕೈಗೊಂಡು, ಹಿಂಸೆ ನಿಲ್ಲಿಸುವ ಯತ್ನ ಮಾಡುತ್ತಿರಲಿಲ್ಲ ಎಂಬ ಗಂಭೀರ ಆರೋಪ ಕೂಡ ಇದೆ. ಆದರೆ ಇದೀಗ ಹಂಗಾಮಿ ಸರ್ಕಾರ ತೊಲಗಿದ್ದು, ಬಾಂಗ್ಲಾ ಪ್ರಜೆಗಳು ಹೊಸ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಬಾಂಗ್ಲಾದೇಶ ಶಾಂತವಾಗಿ ಜೀವನ ನಡೆಸುವ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ನೂತನ ಪ್ರಧಾನಿ ಆಗುವ ನಿರೀಕ್ಷೆಯಲ್ಲಿ ಇರುವ ತಾರಿಕ್ ರಹ್ಮಾನ್ ಎದುರು ಬೆಟ್ಟದಷ್ಟು ಸವಾಲುಗಳು ಕೂಡ ಕಾಯುತ್ತಿವೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications