ಬಾಂಗ್ಲಾದೇಶದಲ್ಲಿ ಹಿಂಸಾಚಾರ: 2024ರ ವಿಶ್ವಕಪ್ ಆತಿಥ್ಯಕ್ಕೆ ಕುತ್ತು?
ಭಾರತದ ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಹಲವು ದಿನಗಳಿಂದ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯಿಂದಾಗಿ ಗಲಭೆಗಳು ಆರಂಭವಾಗಿವೆ. ಈ ಎಲ್ಲ ಪರಿಸ್ಥಿತಿಗಳನ್ನು ಅವಲೋಕಿಸಿದಾಗ ಬಾಂಗ್ಲಾದಲ್ಲಿ ನಡೆಯಲಿರುವ 2024ರ ವಿಶ್ವಕಪ್ ಗತಿ ಏನು ಎಂಬ ಚಿಂತೆ ಕಾಡದೇ ಇರದು.
2024 ರ ಮಹಿಳಾ ಟಿ 20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ಆಯೋಜಿಸಲಾಗುತ್ತಿದೆ. ಬಾಂಗ್ಲಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶೀಘ್ರದಲ್ಲೇ ವಿಶ್ವಕಪ್ ಆಯೋಜನೆಯ ಬಗ್ಗೆ ದೊಡ್ಡ ನಿರ್ಧಾರವನ್ನು ಕೈ ಗೊಳ್ಳಲಿದೆ. ಈ ವರ್ಷ ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ ಬಾಂಗ್ಲಾದೇಶದಲ್ಲಿ ಮಹಿಳಾ ಟಿ 20 ವಿಶ್ವಕಪ್ ನಡೆಯಲಿದೆ. ಕ್ರಿಕ್ಬಜ್ ಪ್ರಕಾರ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಗಳ ಮೇಲೆ ಐಸಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಕ್ರಿಕ್ಬಜ್ ಪ್ರಕಾರ, ಐಸಿಸಿ ಮೂಲವೊಂದು, "ಬಾಂಗ್ಲಾದೇಶದ ಗಲಭೆಗಳ ಮೇಲೆ ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಆದರೆ ಪಂದ್ಯಾವಳಿ ನಡೆಯಲು ಇನ್ನೂ ಸಾಕಷ್ಟು ಸಮಯವಿದೆ. ಕಳೆದ 24 ಗಂಟೆಗಳಲ್ಲಿ ಅಲ್ಲಿನ ಪರಿಸ್ಥಿತಿ ಸುಧಾರಿಸಿದೆ ಎಂದು ತಿಳಿದು ಬಂದಿದೆ ಎಂದು ವಿವರಿಸಿದ್ದಾರೆ.
ಇತ್ತೀಚೆಗೆ ಕೊಲಂಬೊದಲ್ಲಿ ಐಸಿಸಿ ಸಭೆಯನ್ನು ಕರೆಯಲಾಗಿತ್ತು. ಅದರಲ್ಲಿ ಮಹಿಳಾ ಟಿ20 ವಿಶ್ವಕಪ್ ಬಗ್ಗೆ ಪ್ರಸ್ತಾಪಿಸಲಾಗಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಪರಿಸ್ಥಿತಿಯನ್ನು ಅರಿತುಕೊಂಡಿದೆ. ಅಲ್ಲದೆ ಅಗತ್ಯ ತೀರ್ಮಾನ ಹಾಗೂ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ವಿಶ್ವಕಪ್ ಯಾವಾಗ ?
ಮಹಿಳೆಯರ ಟಿ20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ ನಡೆಯಲಿದೆ. ಆತಿಥೇಯ ಬಾಂಗ್ಲಾದೇಶದ ಹೊರತಾಗಿ ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 10 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಇದನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ ತಂಡ ಸ್ಥಾನ ಪಡೆದಿದೆ. ಆಯಾ ಗುಂಪಿನಲ್ಲಿ ಅಗ್ರ-2 ತಂಡಗಳು ಸೆಮಿಫೈನಲ್ಗೆ ಪ್ರವೇಶಿಸಲಿವೆ ಮತ್ತು ಪಂದ್ಯಾವಳಿಯ ಫೈನಲ್ ಅಕ್ಟೋಬರ್ 20 ರಂದು ನಡೆಯಲಿದೆ. 2026 ರ ವಿಶ್ವಕಪ್ನಲ್ಲಿ 12 ತಂಡಗಳ ನಿಬಂಧನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಬಾಂಗ್ಲಾದೇಶದ ಗಲಭೆಗೆ ಕಾರಣವೇನು?
1971 ರ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ಹೋರಾಟಗಾರರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತ ಮೀಸಲಾತಿಯನ್ನು ಒದಗಿಸಲಾಗಿದೆ. ಈ ಮೀಸಲಾತಿಯ ವಿರೋಧದಿಂದಾಗಿ ಬಾಂಗ್ಲಾದೇಶ ಗಲಭೆಯಿಂದ ತತ್ತರಿಸಿದೆ. ಹಿಂಸಾಚಾರದಿಂದಾಗಿ ಇದುವರೆಗೆ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಸದ್ಯ ಇಂಟರ್ನೆಟ್ ಸೇವೆಗಳನ್ನು ನಿಲ್ಲಿಸಲಾಗಿದೆ ಮತ್ತು ಪ್ರಸ್ತುತ ದೇಶಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications