ಮುಂಬೈನ ದೀಪಾವಳಿ ಆಚರಣೆ ಎಂದಿಗೂ ಮರೆಯಲಾರೆ
ವಾಷಿಂಗ್ ಟನ್, ಅ. 23 : ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ದೀಪಾವಳಿ ಶುಭಾಷಯ ಕೋರಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶವೊಂದರಲ್ಲಿ ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಬೆಳಕಿನ ಹಬ್ಬ ಆಚರಿಸುವ ಎಲ್ಲರಿಗೂ ಹಾರೈಕೆ ತಿಳಿಸಿದ್ದಾರೆ.
2009ರಲ್ಲಿ ಅಮೆರಿಕದ ಅಧ್ಯಕ್ಷರಾಗಿ ಗದ್ದುಗೆ ಏರಿದ್ದ ಒಮಾಬಾ ಶ್ವೇತ ಭವನದಲ್ಲಿ ಮೊದಲ ಬಾರಿ ದೀಪಾವಳಿ ಆಚರಿಸಿದ್ದರು. ನಂತರ 2010ರಲ್ಲಿ ಭಾರತಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿದ್ದ ಒಬಾಮಾ ಮುಂಬೈನಲ್ಲಿ ಬೆಳಕಿನ ಹಬ್ಬ ಆಚರಿಸಿದ್ದರು.[ದೀಪಾವಳಿː ಬೆಂಗಳೂರಲ್ಲಿ ಎಲ್ಲೆಲ್ಲಿ ಪಟಾಕಿ ಸಿಗುತ್ತೆ?]

2009ರಲ್ಲಿ ದೀಪಾವಳಿ ಆಚರಿಸಿದ್ದು ನನ್ನ ಜೀವನದ ಮರೆಯಲಾಗದ ಘಟನೆಗಳಲ್ಲಿ ಒಂದು. ಇದರ ನಂತರ ಪ್ರತಿವರ್ಷ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ನಾನು ಮತ್ತು ಹೆಂಡತಿ ಮಿಚೆಲ್ ಮುಂಬೈನಲ್ಲಿ ಆಚರಿಸಿದ ದೀಪಾವಳಿಯನ್ನು ಇಂದಿಗೂ ನೆನಪು ಮಾಡಿಕೊಳ್ಳುತ್ತೇವೆ. ಆ ದಿನದ ವಿಶೇಷ ಆಹಾರ, ನೃತ್ಯ, ಸ್ನೇಹಿತರೊಂದಿಗೆ ಕಳೆದ ಕ್ಷಣಗಳು ಇಂದಿಗೂ ಹಸಿರಾಗಿವೆ ಎಂದು ಒಬಾಮಾ ಹೇಳಿದ್ದಾರೆ.[ಸಮೃದ್ಧಿ ಸಂಪ್ರೀತಿ ಸಮಾನತೆಯ ದೀಪಾವಳಿ]
ಇದು ಕತ್ತಲೆಯೆಡಿಂದ ಬೆಳಕಿಗೆ ಸಾಗುವ ಹಬ್ಬವಾಗಿದ್ದು ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಕುಟುಂಬದವರೆಲ್ಲ ಸೇರಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರೆ ಮತ್ತಷ್ಟು ಸುಂದರವಾಗುತ್ತದೆ. ನಮ್ಮ ಗುರಿ ಉದ್ದೇಶಗಳನ್ನು ದಾಖಲಿಸಲಿ ಮತ್ತು ಅದನ್ನು ಸಾಧಿಸಲು ಈ ಹಬ್ಬ ಒಂದು ಆಧಾರವಾಗಬಲ್ಲದು. ಎಲ್ಲಕ್ಕಿಂತ ಹೆಚ್ಚಾಗಿ ಮಾನವೀಯತೆ ಪ್ರಪಂಚದಲ್ಲಿ ನೆಲೆಗೊಳ್ಳುವಂತೆ ಹಬ್ಬ ಮಾಡಲಿ. ಎಲ್ಲ ಹಬ್ಬಗಳ ಸಂದೇಶವೂ ಇದನ್ನೇ ಸಾರುತ್ತದೆ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಆಶಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications