ಈ ಗಜಗಾತ್ರದ ರಂಗೋಲಿ ಬರೆಯಲು ಬೇಕಾಗಿದ್ದು 3 ದಿನ, 12 ಜನ!
ಕೊಲ್ಲಿ ದೇಶಗಳಲ್ಲಿ ದೇಪಾವಳಿ ಆಚರಿಸುವುದು ಹೊಸತೇನಲ್ಲ, ಆದರೆ ಕತಾರ್ ಎಂಬ ದೇಶದಲ್ಲಿ ಭಾರತೀಯರು ಈ ಬಾರಿ ದೀಪಾವಳಿ ಆಚರಿಸುತ್ತ ಒಂದು ದಾಖಲೆಯನ್ನೇ ಸೃಷ್ಟಿಸಿದ್ದಾರೆ. ಸುಮಾರು 12 ಜನರ ತಂಡವು ಸತತವಾಗಿ 3 ದಿನಗಳ ಕಾಲ ಶ್ರಮಪಟ್ಟು, ಒಂದು ಬೃಹತ್ ಗಾತ್ರದ ರಂಗೋಲಿಯನ್ನು ರಚಿಸಿದ್ದಾರೆ. ಸ್ಥಳೀಯ ಆಕಾಶವಾಣಿ 'ರೇಡಿಯೋ ಆಲಿವ್ 106.3' ಸಂಸ್ಥೆಯವರೊಂದಿಗೆ ಸೇರಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಈ ದೊಡ್ಡ ರಂಗೋಲಿ ಹಾಗು ಇತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕತಾರಿನಲ್ಲಿ ವಾಸವಾಗಿರುವ ಭಾರತೀಯರಿಗೆ ಹಾಗು ಇತರೆ ದೇಶದವರ ಸಲುವಾಗಿ ಆಯೋಜಿಸಿದ್ದಾರೆ.
ಭಾರತೀಯ ಸಂಸ್ಕೃತಿ ಹಾಗು ಪರಂಪರೆಯನ್ನು ಪ್ರತಿಬಿಂಬಿಸಲು ಹಬ್ಬಗಳ ಆಚರಣೆ ಅತ್ಯಗತ್ಯ. ದಿನಾಂಕ ಅಕ್ಟೋಬರ್ 25 ರಿಂದ 27 ರ ತನಕ ದೊಹಾದಲ್ಲಿನ ಮಿರ್ಕಾಬ್ ಮಾಲ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಳು, ಮಿಟಾಯಿ ಮಳಿಗೆಗಳು, ಜಾದೂ ಪ್ರದರ್ಶನ ಹಾಗೂ ಉಲ್ಲಾಸಭರಿತ ಚಟುವಟಿಕೆಗಳು ಸೇರಿ ಭಾಗವಹಿಸಿದವರಿಗೆ ವಿಶೇಷ ಬಹುಮಾನಗಳನ್ನು ವಿತರಿಸಲಾಗುತ್ತದೆ.

ಕನ್ನಡಿಗರ ಪ್ರತಿನಿಧಿಯಾಗಿ ಹಾಗೂ 'ಭಾರತೀಯ ಸಮುದಾಯ ಹಿತನಿಧಿ (ಐ.ಸಿ.ಬಿ.ಎಫ್.)' ಸಂಘದ ಜಂಟಿ-ಕಾರ್ಯದರ್ಶಿಯಾಗಿರುವ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಕ್ರಿಯವಾಗಿ ಸೇವೆ ಸಲ್ಲಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಿದ್ದಾರೆ. ಭಾರತೀಯ ಮೌಲ್ಯಗಳನ್ನು ಹೊರದೇಶದಲ್ಲಿ ಎತ್ತಿ ಹಿಡಿಯುವಲ್ಲಿ ಶ್ರೀಯುತ ಸುಬ್ರಮಣ್ಯರವರು ಶ್ರಮವಹಿಸಿ, ತಮ್ಮ ಕ್ರಿಯಾಶಿಲತೆಯಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications