ಬೆಂಗಳೂರಿನ ರಾಜಲಕ್ಷ್ಮಿಗೆ ಮಿಸ್ ಪಾಪ್ಯುಲಾರಿಟಿ ಕಿರೀಟ
ಪೋಲೆಂಡ್ ನ ವಾರ್ಸಾದಲ್ಲಿ ಶನಿವಾರ ನಡೆದ ಮಿಸ್ ವ್ಹೀಲ್ ಚೇರ್ ವರ್ಲ್ಡ್ -2017 ಸ್ಪರ್ಧೆಯಲ್ಲಿ ಬೆಂಗಳೂರಿನ ದಂತವೈದ್ಯೆ ರಾಜಲಕ್ಷ್ಮಿ ಅವರು ಭಾರತವನ್ನು ಪ್ರತಿನಿಧಿಸಿ, ಮಿಸ್ ಪಾಪ್ಯುಲಾರಿಟಿ 2017 ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಬೆಲಾರಸ್ ನ ಮನಶ್ಶಾಸ್ತ್ರದ ವಿದ್ಯಾರ್ಥಿನಿ ಅಲೆಕ್ಸಾಂಡ್ರಾ ಚಿಚಿಕೊವಾ ಮಿಸ್ ವ್ಹೀಲ್ ಚೇರ್ ವರ್ಲ್ಡ್ -2017 ಆಗಿ ಆಯ್ಕೆಯಾದರು. ಈ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಚಿಕೊವಾ, ನಿಮ್ಮ ಆತಂಕ ಹಾಗೂ ಭಯದ ವಿರುದ್ಧ ಹೋರಾಡಿ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದ ಲೆಬೊಹಾಂಗ್ ಮೊನಿಟ್ಸಿ ರನ್ನರ್ ಅಪ್ ಆಗಿದ್ದಾರೆ. ಈ ಹತ್ತೊಂಬತ್ತು ದೇಶಗಳ ಇಪ್ಪತ್ನಾಲ್ಕು ಸುಂದರಿಯರು ಭಾಗವಹಿಸಿದ್ದರು. ವ್ಹೀಲ್ ಚೇರ್ ಮೇಲೆ ದಿನ ಕಳೆಯುವ ಮಹಿಳೆಯರ ಬಗ್ಗೆ ಇರುವ ಸಮಾಜದ ಧೋರಣೆಯನ್ನು ಬದಲಾಯಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಈ ಸ್ಪರ್ದೆಯಲ್ಲಿ ಸೌಂದರ್ಯವೊಂದೇ ಮಾನದಂಡವಾಗಿರಲಿಲ್ಲ. ನಾವು ಸ್ಪರ್ಧಿಗಳ ವ್ಯಕ್ತಿತ್ವವನ್ನೂ ಗಣನೆಗೆ ತೆಗೆದುಕೊಂಡಿದ್ದೆವು. ಅವರ ನಿತ್ಯದ ಚಟುವಟಿಕೆ, ಪಾಲ್ಗೊಳ್ಳುವಿಕೆ, ಸಾಮಾಜಿಕ ಜೀವನ ಹಾಗೂ ಯೋಜನೆಗಳನ್ನು ಕೂಡ ಗಮನಿಸಿದ್ದೆವು ಎಂದು ಸ್ಪರ್ಧೆಯ ತೀಪುಗಾರ್ತಿಯಲ್ಲಿ ಒಬ್ಬರು ತಿಳಿಸಿದ್ದಾರೆ.
ಸ್ಪರ್ಧಿಗಳು ಪೋಲೆಂಡ್ ನ ರಾಜಧಾನಿಯಲ್ಲಿ ಎಂಟು ದಿನ ಇದ್ದರು. ತಾಲೀಮು, ಫೋಟೋ ಸೆಷನ್ ಹಾಗೂ ಸಮಾರಂಭಗಳಲ್ಲಿ ತೊಡಗಿಕೊಂಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications