ವಿವಸ್ತ್ರಗೊಳಿಸಿ ಬೆಂಗಳೂರು ಮಹಿಳೆಯ ಶೋಧ ನಡೆಸಿದ ಏರ್ಪೋರ್ಟ್ ಸಿಬ್ಬಂದಿ
ಬೆಂಗಳೂರಿನಿಂದ ಐಸ್ ಲ್ಯಾಂಡಿಗೆ ಪ್ರಯಾಣಿಸುತ್ತಿದ್ದ ದಂಪತಿಗಳ ಜತೆ ಫ್ರಾಂಕ್ ಫರ್ಟ್ ಏರ್ಪೋರ್ಟ್ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಘಟನೆ ನಡೆದಿದೆ.
ಬೆಂಗಳೂರು, ಏಪ್ರಿಲ್ 2: ಬೆಂಗಳೂರಿನಿಂದ ಐಸ್ ಲ್ಯಾಂಡಿಗೆ ಪ್ರಯಾಣಿಸುತ್ತಿದ್ದ ದಂಪತಿಗಳ ಜತೆ ಫ್ರಾಂಕ್ ಫರ್ಟ್ ಏರ್ಪೋರ್ಟ್ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಘಟನೆ ನಡೆದಿದೆ.
ಶ್ರುತಿ ಬಸಪ್ಪ ದಂಪತಿಗಳು 4 ವರ್ಷದ ಮಗಳ ಜತೆ ಬೆಂಗಳೂರಿನಿಂದ ಐಸ್ ಲ್ಯಾಂಡ್ ಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬರ್ಲಿನ್ ಗೆ ವಿಮಾನ ಹತ್ತಲು ಇಳಿದಿದ್ದರು. ಈ ವೇಳೆ ಅಲ್ಲಿನ ಭದ್ರತಾ ಸಿಬ್ಬಂದಿ ಲೋಹ ಶೋಧಕ ಯಂತ್ರದಿಂದ ತಪಾಸಣೆ ಮಾಡಿಯೂ ಅಮಾನವೀಯವಾಗಿ ವರ್ತಿಸಿದ್ದಾರೆ.[ದಲೈ ಲಾಮಾ ವಿಚಾರದಲ್ಲಿ ಭಾರತ ಸರ್ಕಾರಕ್ಕೆ ಚೀನಾ ವಾರ್ನಿಂಗ್]

ಲೋಹ ಶೋಧಕದಿಂದ ತಪಾಸಣೆ ಮಾಡಿ ನಂತರ "ಹೆಚ್ಚಿನ ತಪಾಸಣೆ ಹೆಸರಿನಲ್ಲಿ ಮಹಿಳಾ ಅಧಿಕಾರಿ ನನ್ನನ್ನು ಕೊಠಡಿಗೆ ಕರೆದುಕೊಂಡು ಹೋದರು. ಜತೆಗೆ ನನ್ನ ಮಗಳೂ ಇದ್ದಳು. ಅಧಿಕಾರಿಗಳು ಮಗಳ ಎದುರಿನಲ್ಲೇ ಬಟ್ಟೆ ಬಿಚ್ಚಿಸಿದರು. ಒಳ ಉಡುಪು ಸಹಿತ ಬಟ್ಟೆಯನ್ನೆಲ್ಲಾ ಬಿಚ್ಚಿಸಿದರು," ಎಂದು ಶ್ರುತಿ ಬಸಪ್ಪ ಫೇಸ್ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದಾರೆ.
"ಹೊಟ್ಟೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದೇನೆ ಎಂದು ಪ್ರಮಾಣ ಪತ್ರ ತೋರಿಸಿ ಗೋಗರೆದರೂ ಬಿಡಲಿಲ್ಲ," ಎಂದು ಶ್ರುತಿ ಮಾಹಿತಿ ಹಂಚಿಕೊಂಡಿದ್ದಾರೆ.[ಹಳೇನೋಟು ಬದಲಿಸಲು ಅನಿವಾಸಿ ಭಾರತೀಯರಿಗೆ ಬಾಗಿಲು ತೆರೆದಿದೆ]
'ಆರಂಭದಲ್ಲಿ ಲೋಹ ಶೋಧಕ ಯಂತ್ರದಿಂದ ತಪಾಸಣೆ ಮಾಡಿ ಮತ್ತೆ ಕೊಠಡಿಗೆ ಕರೆದುಕೊಂಡು ಹೋಗಿ ಬಟ್ಟೆ ಬಿಚ್ಚಿಸಿದ್ದಾರೆ. ನಾನು ಭಾರತೀಯಳು ಬಟ್ಟೆ ಬಿಚ್ಚಲು ಸಾಧ್ಯವಿಲ್ಲ. ಯಾವುದೇ ಆಧುನಿಕ ಸಾಧನದಿಂದ ತಪಾಸಣೆ ಮಾಡಿ ಎಂದು ಹೇಳಿದರೂ ಕೇಳಲಿಲ್ಲ. ಇದೊಂದು ಅಮಾನವೀಯ, ಅಸಹ್ಯಕರ,' ಎಂದು ಶ್ರುತಿ ಕಿಡಿಕಾರಿದ್ದಾರೆ.
ಶ್ರುತಿ ಬಳಿ ಭಾರತೀಯ ಪಾಸ್ಪೋರ್ಟ್ ಇದ್ದು, ಪತಿ ಐಸ್ ಲ್ಯಾಂಡ್ ಪ್ರಜೆಯಾಗಿದ್ದಾರೆ. 'ಇತ್ತೀಚೆಗೆ ಭಾರತಕ್ಕೆ ಬಂದಿದ್ದ ನಾವು ಐಸ್ ಲ್ಯಾಂಡಿಗೆ ವಾಪಸ್ ಹೋಗುತ್ತಿದ್ದೆವು,' ಎಂದು ಶ್ರುತಿ ತಮ್ಮ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications