ಇಸ್ರೇಲ್: ನೇತನ್ಯಾಹು ಅಧಿಕಾರ ಅಂತ್ಯ, ನಫ್ತಾಲಿ ನೂತನ ಪ್ರಧಾನಿ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.
ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.

ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.
ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications