ಉಗ್ರರ ನಂಟು: ಭಟ್ಕಳ ಮೂಲದ ವ್ಯಕ್ತಿ ದುಬೈಯಲ್ಲಿ ಬಂಧನ
ದುಬೈ, ನ.22: ಇರಾಕಿ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಭಟ್ಕಳ ಮೂಲದ ವ್ಯಕ್ತಿಯಲ್ಲಿ ದುಬೈನಲ್ಲಿ ಬಂಧಿಸಲಾಗಿದೆ. ಕರ್ನಾಟಕದ ಭಟ್ಕಳ ಮೂಲದ ಅದ್ನಾನ್ ದಮುಡಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ದುಬೈ ಪೊಲೀಸರು ಹೇಳಿದ್ದಾರೆ.
2012ರಲ್ಲಿ ದುಬೈ ಬಂದು ನೆಲೆಸಿರುವ ಅದ್ನಾನ್ ಅವರು ವೃತ್ತಿಯಿಂದ ಅಕೌಂಟೆಟ್ ಆಗಿದ್ದಾರೆ. ಇತ್ತೀಚೆಗೆ ಆತನ ಚಲನವಲನ ಮೇಲೆ ಅನುಮಾನ ಬಂದ ಕಾರಣ ಆತನ ಮೇಲೆ ನಿಗಾವಹಿಸಲಾಗಿತ್ತು. ಇಸೀಸ್ ಗೆ ಯುವಕರನ್ನು ಸೇರಿಸುವ ಕಾರ್ಯವನ್ನು ಅದ್ನಾನ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. [ಇರಾಕಿ ಉಗ್ರರ ವಿರುದ್ಧ ಕರ್ನಾಟಕ ಮಸೀದಿಗಳ ಯುದ್ಧ]

ಅನೇಕ ಭಾರತೀಯ ಮೂಲದ ಯುವಕರ ಮೇಲೆ ಪ್ರಭಾವ ಬೀರಿ ಇರಾಕಿ ಉಗ್ರ ಸಂಘಟನೆಯತ್ತ ಸೆಳೆಯುವಲ್ಲಿ ಅದ್ನಾನ್ ಯಶಸ್ವಿಯಾಗಿದ್ದ. [ಪ್ಯಾರಿಸ್ ಉಗ್ರರ ದಾಳಿಯ ಹೊಣೆಹೊತ್ತ ಐಎಸ್ಐಎಸ್]
ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ @adnandamudi ಎಂಬ ಖಾತೆ ಮೂಲಕ ಆತ ಕಾರ್ಯ ನಿರ್ವಹಿಸುತ್ತಿದ್ದಾನೆ. ಈ ಮೂಲಕ ಐಎಸ್ಐಎಸ್ ಗೆ ಯುವಕರನ್ನು ಸೇರಿಸುತ್ತಿದ್ದತೆಲಂಗಾಣ ಮೂಲದ ಯುವಕರನ್ನು ಹೆಚ್ಚಾಗಿ ಸೆಳೆಯಲು ಯತ್ನಿಸಿದ್ದ ಎಂದು ತಿಳಿದು ಬಂದಿದೆ.
ಭಾರತೀಯ ತನಿಖಾ ಸಂಸ್ಥೆಗಳು ಈಗ ದುಬೈನ ಪೊಲೀಸರ ಸಂಪರ್ಕದಲ್ಲಿದ್ದು, ಅದ್ನಾನ್ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಿದ್ದಾರೆ. ಅದರೆ, ಅದ್ನಾನ್ ಬಂಧನ ನಂತರ ಹೆಚ್ಚಿನ ವಿಷಯ ಇನ್ನೂ ಸ್ಪಷ್ಟವಾಗಿಲ್ಲ. ಅದ್ನಾನ್ ನನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಭಾರತೀಯ ತನಿಖಾ ಸಂಸ್ಥೆ ಮುಂದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications