ಭೂತಾನ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕ ಆರಂಭಿಸಲು ಆಹ್ವಾನ
ಥಿಂಪು, ಡಿಸೆಂಬರ್ 26: ಭೂತಾನ್ ದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕ ಆರಂಭಿಸಿ. ಕರ್ನಾಟಕದಿಂದ ಬರುವ ಪ್ರವಾಸಿಗರಿಗೆ ಹಾಗೂ ಉದ್ಯೋಗಕ್ಕಾಗಿ ಇಲ್ಲಿಗೆ ಬರುವವರಿಗೆ ಅದರಿಂದ ಅನುಕೂಲವಾಗಲಿ. ಸಹಕಾರ-ಸಂಪರ್ಕದ ಕೊಂಡಿಯಾಗಲಿ ಎಮ್ದು ಭೂತಾನ್ ನ ಖ್ಯಾತ ಛಾಯಾಗ್ರಾಹಕ ಮತ್ತು ರೋಟರಿ ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಯಶಿ ದೋರ್ಜಿ ಹೇಳಿದ್ದಾರೆ.
ಭೂತಾನ್ ದೇಶದ ರಾಜಧಾನಿ ಥಿಂಪುವಿನಲ್ಲಿ ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದ ನಂತರ ಅವರು ಮಾತನಾಡಿ, ಭೂತಾನ್ ದೇಶ ಆಧುನಿಕತೆಯತ್ತ ಮುಖ ಮಾಡಿರುವುದೇ ಇತ್ತೀಚೆಗೆ. ಆದರೂ ಮೂಲ ಸ ಸಂಸ್ಕೃತಿ, ಆಚಾರ, ಸಂಪ್ರದಾಯಗಳನ್ನು ಉಳಿಸಿಕೊಂಡಿದೆ ಎಂದರು.[ಭೂತಾನ್ ಮಕ್ಕಳ ಮುಗ್ಧತೆ, ಪ್ರೀತಿ ಮತ್ತು ಬಿಡಿ ಚಿತ್ರಗಳು]

ಪ್ರಕೃತಿ ಸೌಂದರ್ಯ, ಮಾಲಿನ್ಯರಹಿತ ಪರಿಸರ ಮತ್ತು ಸಂತುಷ್ಟ ಜನರಿರುವ ದೇಶ ಭೂತಾನ್ ಎಂದು ಜಗತ್ತಿನಾದ್ಯಂತ ಇರುವ ಜನರು ಇಲ್ಲಿಗೆ ಬರುತ್ತಾರೆ. ಕನ್ನಡಿಗರೂ ಬಹಳಷ್ಟು ಮಂದಿ ಬಂದಿದ್ದಾರೆ, ಬರುತ್ತಾರೆ. ಭಾರತದ ಐಟಿ ಉದ್ಯಮ ಭೂತಾನ್ ನಲ್ಲೂ ತೊಡಗಿಸಿಕೊಂಡಿದೆ.. ಅಲ್ಲಿನ ಉದ್ಯೋಗಿಗಳು ಅದರಲ್ಲೂ ಕನ್ನಡಿಗ ಉದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ.
ಅದ್ದರಿಂದ ಕನ್ನಡ ಭಾಷೆ, ಸಾಹಿತ್ಯ-ಸಂಸ್ಕೃತಿಯನ್ನು ನಮ್ಮ ದೇಶದ ಜನರಿಗೆ ಪರಿಚಯಿಸಿ. ಕನ್ನಡ ನಾಡಿನವರಿಗೆ ಅನುಕೂಲವಾಗುವಂತೆ ಕನ್ನಡ ಸಾಹಿತ್ಯ ಪರಿಷತ್ ಘಟಕ ಶುರು ಮಾಡಿ ಎಂದು ಸಲಹೆ ಮಾಡಿದರು. ಇನ್ನು ಶಿಡ್ಲಘಟ್ಟದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಭೂತಾನ್ ನ ಬರ್ಡ್ ಮ್ಯಾನ್ ಎಂದೇ ಖ್ಯಾತರಾದ ಯಶಿ ದೋರ್ಜಿ ಅವರನ್ನು ಸನ್ಮಾನಿಸಲಾಯಿತು.[ರಾಜ್ಯೋತ್ಸವಕ್ಕೆ 'ಸ್ವಲ್ಪ ಕನ್ನಡ ಬರುತ್ತೆ' ವಾಟ್ಸ್ ಅಪ್ ಗ್ರೂಪ್]
ಕಸಾಪ ಶಿಡ್ಲಘಟ್ಟ ತಾಲ್ಲೂಕು ಘಟಕದ ಉಪಾಧ್ಯಕ್ಷ ಸಿ.ಪಿ.ಈ.ಕರಗಪ್ಪ, ಪತ್ರಿಕಾ ಪ್ರತಿನಿಧಿಗಳಾದ ಎ.ಶಶಿಕುಮಾರ್, ರಮೇಶ್, ಜಂಗಮಕೋಟೆ ಹೋಬಳಿ ಸಂಚಾಲಕ ಜಗದೀಶ್ ಬಾಬು, ಕಸಬಾ ಹೋಬಳಿ ಪತ್ರಿಕಾ ಪ್ರತಿನಿಧಿ ನರಸಿಂಹಗೌಡ, ತಾಲ್ಲೂಕು ಮಾಜಿ ಅಧ್ಯಕ್ಷ ರೂಪಸಿ ರಮೇಶ್, ವಿಜಯಪುರ ಕಸಾಪ ಘಟಕದ ಉಪಾಧ್ಯಕ್ಷ ಮುನಿನಾರಾಯಣ, ಸದಸ್ಯರಾದ ಮಲ್ಲಿಕಾರ್ಜುನ, ಮಂಜುನಾಥ, ಛಾಯಾ ರಮೇಶ್, ಮುನೇಗೌಡ, ರಾಜೇಶ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications