ಯುದ್ಧಕ್ಕೆ ಹೊಡಿ ಗೋಲಿ.. ಹಿಂಸಾಚಾರದ ಆರ್ಭಟಕ್ಕೆ ಬೀಳಲಿ ಬೇಲಿ..
2023ರ ಅಕ್ಟೋಬರ್ ತಿಂಗಳಲ್ಲಿ ಆರಂಭ ಆಗಿದ್ದ ಹಮಾಸ್ & ಇಸ್ರೇಲ್ ಯುದ್ಧ ಇದೀಗ ಒಂದು ಹಂತಕ್ಕೆ ಬಂದು ನಿಂತಂತೆ ಕಾಣುತ್ತಿದೆ. ಈಗಾಗಲೇ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಕಳೆದ 10 ತಿಂಗಳಲ್ಲಿ ಯುದ್ಧಕ್ಕೆ ಬಲಿಯಾಗಿದ್ದಾರೆ ಎಂಬ ಆರೋಪಗಳ ನಡುವೆ, ಯುದ್ಧಕ್ಕೆ ಬ್ರೇಕ್ ಹಾಕಲು ಖುದ್ದು ದೊಡ್ಡಣ್ಣ ಅಮೆರಿಕ ಎಂಟ್ರಿ ಕೊಟ್ಟಿದೆ. ಅಲ್ಲದೆ ಯುದ್ಧ ನಿಲ್ಲಿಸುವ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಹತ್ವದ ಮಾಹಿತಿಯನ್ನ ಇಡೀ ಜಗತ್ತಿನ ಎದುರು ತೆರೆದಿಟ್ಟಿದ್ದಾರೆ.
ಇಸ್ರೇಲ್ & ಹಮಾಸ್ ನಡುವೆ ನಡೆಯುತ್ತಿರುವ ಯುದ್ಧ ಜಗತ್ತಿನ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ. ಯಾಕಂದ್ರೆ ಈ ಯುದ್ಧದ ಪರಿಣಾಮ ಮಧ್ಯಪ್ರಾಚ್ಯ ಪರಿಸ್ಥಿತಿ ಕೈಮೀರಿ ಹೋಗ್ತಿದೆ. ಅಲ್ಲದೆ ಮತ್ತೊಂದು ಕಡೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಹಲವು ಸರಕುಗಳಿಗೂ ಈ ಯುದ್ಧ ಪೆಟ್ಟು ನೀಡುವ ಭಯ ಆವರಿಸಿದೆ. ಇಂತಹ ಸಮಯದಲ್ಲೇ ಅಲರ್ಟ್ ಆಗಿರುವ ಅಮೆರಿಕ ಇದೀಗ ನೇರವಾಗಿ ಇಸ್ರೇಲ್ಗೆ ತೆರಳಿ ಮಾತುಕತೆ ನಡೆಸಿ, ಯುದ್ಧ ನಿಲ್ಲಿಸುವ ಬಗ್ಗೆ ತಯಾರಿ ಆರಂಭ ಮಾಡಿದೆ. ಈ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೇಳಿರುವ ಮಾತು ಏನು ಗೊತ್ತಾ?

ಯುದ್ಧ ನಿಲ್ಲಿಸಲು ಇಸ್ರೇಲ್ ರೆಡಿ?
ಈಗಿನ ಪರಿಸ್ಥಿತಿಯಲ್ಲಿ ಕದನ ವಿರಾಮ ಘೋಷಣೆ ಮತ್ತು ಗಾಜಾದ ಒತ್ತೆಯಾಳುಗಳನ್ನ ರಿಲೀಸ್ ಮಾಡುವ ಬಗ್ಗೆ ಇಸ್ರೇಲ್ ಒಪ್ಪಿಗೆಯನ್ನ ಸೂಚಿಸಿದೆ. ಹೀಗೆ ಇಸ್ರೇಲ್ ಶಾಂತಿ ಒಪ್ಪಂದದ ಬಗ್ಗೆ ಒಪ್ಪಿಗೆ ಸೂಚಿಸಿದ ರೀತಿಯಲ್ಲೇ ಹಮಾಸ್ ಕೂಡ ಒಪ್ಪಿಕೊಳ್ಳಬೇಕು ಅಂತಿದೆ ಅಮೆರಿಕ. ಇದರ ಮಾಹಿತಿ ಇದೀಗ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗೇ ಯುದ್ಧದ ಬಗ್ಗೆ ಸುದೀರ್ಘವಾಗಿ ಇಸ್ರೇಲ್ ಪ್ರಧಾನಿ ಜೊತೆಗೆ ಮಾತುಕತೆ ನಡೆಸಿದ್ದಾರೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ.
ಕೊತ ಕೊತ ಕುದಿಯುತ್ತಿದೆ ಇರಾನ್!
ಒಂದು ಕಡೆ ಇಸ್ರೇಲ್ & ಗಾಜಾ ಯುದ್ಧ ನಿಲ್ಲಿಸುವ ಪ್ರಯತ್ನ ಆರಂಭವಾಗಿದೆ. ಆದರೆ ಇದೇ ಸಮಯದಲ್ಲಿ ಇರಾನ್ & ಇಸ್ರೇಲ್ ನಡುವೆ ಯುದ್ಧದ ವಾತಾವರಣ ಶುರುವಾಗಿದೆ. ಈಗಾಗಲೇ ಇಸ್ರೇಲ್ ಸೈನಿಕರನ್ನ ಗುರಿಯಾಗಿಸಿ ಇರಾನ್ ದಾಳಿ ಮಾಡುತ್ತಿದೆ ಎಂಬ ಆರೋಪ ಇದೆ. ಈ ಸಮಯದಲ್ಲಿ ಮತ್ತಷ್ಟು ಅಲರ್ಟ್ ಆಗಿರುವ ಇರಾನ್ ಪಡೆಗಳು, ಯಾವ ಕ್ಷಣದಲ್ಲಿ ಬೇಕಾದ್ರು ಇಸ್ರೇಲ್ ವಿರುದ್ಧ ಯುದ್ಧ ಸಾರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಮಧ್ಯಪ್ರಾಚ್ಯ ಇದೀಗ ಮತ್ತೊಮ್ಮೆ ಬೆಂಕಿಯಲ್ಲಿ ಬಿದ್ದ ಬಟ್ಟೆಯಂತೆ ಆಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications