ಬಿಲ್ ಕ್ಲಿಂಟನ್ ವಿರುದ್ಧ ಲಂಚದ ಆರೋಪ ಹೊರಿಸಿದ ನವಾಜ್ ಷರೀಫ್
ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ವಿರುದ್ಧ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಲಂಚದ ಆರೋಪ. ಕ್ಲಿಂಟನ್ ಅವರು, 1998ರಲ್ಲಿ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ನಡೆಸದಂತೆ ತಾಕೀತು ಮಾಡಿದ್ದರು. ತಮ್ಮ ಮಾತು ಕೇಳಿದರೆ, 5 ಬಿಲಿಯನ್ ಅಮೆರಿಕನ
ಇಸ್ಲಾಮಾಬಾದ್, ಜುಲೈ 20: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ವಿರುದ್ಧ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಲಂಚದ ಆಮಿಷ ಒಡ್ಡಿದ ಆರೋಪ ಹೊರಿಸಿದ್ದಾರೆ.
1998ರಲ್ಲಿ ಪಾಕಿಸ್ತಾನ ಸರ್ಕಾರವು ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಲು ಸಜ್ಜಾಗಿದ್ದ ವೇಳೆಯಲ್ಲಿ, ತಮಗೆ ಅಂದಿನ ಅಮೆರಿಕ ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು, ಆ ಪರೀಕ್ಷೆ ನಡೆಸದಂತೆ ತಾಕೀತು ಮಾಡಿದ್ದರು. ಅದಕ್ಕಾಗಿ, 5 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತವನ್ನು ಲಂಚವಾಗಿ ನೀಡುವುದಾಗಿಯೂ ತಿಳಿಸಿದ್ದರು. ಆದರೆ, ಪಾಕಿಸ್ತಾನದ ಜನತೆಯ ಸುರಕ್ಷೆಯನ್ನು ನಾನು ಗಮನದಲ್ಲಿಟ್ಟುಕೊಂಡು ಆ ಆಮಿಷವನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದಾರೆ.

1998ರಲ್ಲಿ ಭಾರತವು ಅಂದಿನ ಪ್ರಧಾನಿ ವಾಜಪೇಯಿ ನೇತೃತ್ವದಲ್ಲಿ ರಾಜಸ್ಥಾನ ಪೊಖ್ರಾನ್ ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಿತ್ತು. ಇದರಿಂದ ಪ್ರೇರಣೆಗೊಂಡ ಪಾಕಿಸ್ತಾನವೂ, ಕೆಲವೇ ದಿನಗಳಲ್ಲಿ ತನ್ನಲ್ಲಿದ್ದ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆ ನಡೆಸಿತ್ತು.
ಭಾರತ ನಡೆಸಿದ್ದ ಈ ಅಣ್ವಸ್ತ್ರ ಪರೀಕ್ಷೆಯು ಅಂತಾರಾಷ್ಟ್ರೀಯ ಸಮುದಾಯವನ್ನು ಬೆಚ್ಚಿಬೀಳಿಸಿತ್ತಲ್ಲದೆ, ಭಾರೀ ದೊಡ್ಡ ಸುದ್ದಿ ಹಾಗೂ ವಿವಾದಕ್ಕೆ ಕಾರಣವಾಗಿತ್ತು. ಅಭಿವೃದ್ಧಿಶೀಲ ರಾಷ್ಟ್ರವೊಂದು ಅಣ್ವಸ್ತ್ರಗಳನ್ನು ಹೊಂದುವುದನ್ನು ಕಂಡು ಕರುಬಿಕೊಂಡ ಅಮೆರಿಕ, ಭಾರತದ ಮೇಲೆ ಹಲವಾರು ಆರ್ಥಿಕ ದಿಗ್ಬಂಧನಗಳನ್ನು ಹೇರಿತ್ತು. ಆದರೆ, ಇದಕ್ಕೆ ಅಂದಿನ ಪ್ರಧಾನಿ ವಾಜಪೇಯಿ ಸೊಪ್ಪು ಹಾಕಿರಲಿಲ್ಲ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications