ಭಾರತದಲ್ಲಿನ ಐಟಿ ಕಂಪನಿಗಳಿಗೆ ಶೀಘ್ರವೇ ಹೆಚ್-1ಬಿ ವೀಸಾ ಶಾಕ್!
ಅಮೆರಿಕದಲ್ಲಿ ಉದ್ಯೋಗ ನಿಮಿತ್ತ ಹಾರುವ ಭಾರತೀಯರ ಟೆಕಿಗಳಿಗೆ ನೀಡಲಾಗುವ ಹೆಚ್-1ಬಿ ವೀಸಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ಅಮೆರಿಕದ ಸೆನೆಟರ್ ಗಳು ಸಜ್ಜಾಗಿದ್ದಾರೆ.
ವಾಷಿಂಗ್ಟನ್, ಜನವರಿ 20: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷೀಯ ಪ್ರಮಾಣ ವಚನ ಅದ್ಧೂರಿ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ, ಅತ್ತ ಅಮೆರಿಕ ಸರ್ಕಾರ ಅಧಿಕಾರಿಗಳು ಟ್ರಂಪ್ ಅವರು ಅಧ್ಯಕ್ಷೀಯ ಚುನಾವಣೆಯ ವೇಳೆ ಮಾಡಿದ್ದ ಘೋಷಣೆಗಳ ಅನುಷ್ಠಾನಕ್ಕೆ ವೇದಿಕೆ ಸಜ್ಜುಗೊಳಿಸುತ್ತಿದ್ದಾರೆ.
ಅಮೆರಿಕದ ಸಂಸದರಾದ ಚುಕ್ ಗ್ರಾಸ್ಲೆ ಹಾಗೂ ಡಿಕ್ ಡರ್ಬನ್ ಅವರು ಟ್ರಂಪ್ ಅವರು ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶುರುವಾಗುವ ಸಂಸತ್ ಅಧಿವೇಶನದಲ್ಲಿ ಈ ಕರಡು ಪ್ರತಿಯನ್ನು ಮಂಡಿಸಲು ಸಿದ್ಧರಾಗಿದ್ದಾರೆ.[ಏನಿದು ಎಚ್1ಬಿ ವೀಸಾ ತಿದ್ದುಪಡಿ ಕಾಯ್ದೆ? ಇದ್ಹೇಗೆ ಟೆಕ್ಕಿಗಳಿಗೆ ಮಾರಕ?]

ಕರಡು ಪ್ರತಿಯಲ್ಲಿ, ವಿದೇಶಿ ಟೆಕ್ಕಿಗಳಿಗೆ ನೀಡಲಾಗುವ ಎಚ್-1ಬಿ ವೀಸಾ ಕಾಯ್ದೆಗೆ ತಿದ್ದುಪಡಿ ತರಲು ಕರಡು ಪ್ರತಿಯನ್ನು ಸಿದ್ಧಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರ ಜತೆಯಲ್ಲೇ, ಅಮೆರಿಕದ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಹೊಸ ಕರಡು ಪ್ರತಿಯಲ್ಲಿ ಹೊಸ ಅಂಶಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.[ಎಚ್1 ಬಿ ವೀಸಾ ಮಸೂದೆ ತಿದ್ದುಪಡಿ ಮತ್ತೆ ಜಾರಿಗೆ]
ಅಮೆರಿಕ ಸಂಸತ್ತಿನಲ್ಲಿ ಈ ಕರಡು ಪ್ರತಿಗೆ ಒಪ್ಪಿಗೆ ಸಿಕ್ಕಲ್ಲಿ ಅದು ಭಾರತೀಯ ಐಟಿ ವಲಯಕ್ಕೆ ದೊಡ್ಡ ಹೊಡೆತ ಕೊಟ್ಟಂತಾಗುತ್ತದೆಂದು ಭಾರತೀಯ ವಿತ್ತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications