ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 26 ಮಂದಿ ಸಾವು
ಆಡೆನ್, ಡಿಸೆಂಬರ್ 31: ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟವಾಗಿದ್ದು, 26 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ,ಯೆಮೆನ್ ನ ಅಡೆನ್ ವಿಮಾನ ನಿಲ್ದಾಣದಲ್ಲಿಸ ಈ ಘಟನೆ ನಡೆದಿದ್ದು, ನೂತನವಾಗಿ ರಚನೆಯಾದ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನವೊಂದು ಇಳಿದ ಕೆಲವೇ ಕ್ಷಣಗಳ ನಂತರ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಕನಿಷ್ಟ 26 ಮಂದಿ ಸಾವನ್ನಪ್ಪಿದ್ದಾರೆ.
ಸೌದಿ ಅರೇಬಿಯಾದಲ್ಲಿ ಯೆಮನ್ನ ರಾಷ್ಟ್ರಪತಿ ಅಬೆದ್ರಬ್ಬೊ ಮನ್ಸೂರ್ ಹಾದಿ ಅವರಿಂದ ಕೆಲ ದಿನಗಳ ಹಿಂದೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದ ಸಚಿವರು, ಏಡನ್ಗೆ ಆಗಮಿಸಿದ್ದರು.

ಇರಾನ್ ಬೆಂಬಲಿತ ಹುತಿ ಬಂಡುಕೋರರು ಈ ಹೇಡಿ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಸಚಿವರೆಲ್ಲರೂ ಸುರಕ್ಷಿತವಾಗಿದ್ದಾರೆ, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಸರ್ಕಾರಿ ಮೂಲಗಳು ತಿಳಿಸಿವೆ. ಅಂತೆಯೇ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎನ್ನಲಾಗಿದೆ.
ಸ್ಫೋಟದ ವೇಳೆ ವಿಮಾನದಿಂದ ಇಳಿದಿದ್ದ ಸರ್ಕಾರದ ಎಲ್ಲ ಸದಸ್ಯರೂ ಸುರಕ್ಷಿತವಾಗಿದ್ದಾರೆ' ಎಂದೂ ಮಾಹಿತಿ ನೀಡಿದರು.ಯೆಮನ್ನ ಪ್ರಧಾನಿ ಮೊಯೀನ್ ಅಬ್ದುಲ್ಮಲಿಕ್ ಸಯೀದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಬಾಂಬ್ ಸ್ಫೋಟ ಹೇಡಿತನ ಕೃತ್ಯವಾಗಿದೆ.
ಹಿಂಸಾಚಾರವನ್ನು ಒಪ್ಪುವುದಿಲ್ಲ,. ಭಯೋತ್ಪಾದಕ ದಾಳಿ ಯೆಮೆನ್ ಮತ್ತು ಅದರ ಜನರ ವಿರುದ್ಧ ನಡೆಸಿದ ಯುದ್ಧದ ಒಂದು ಭಾಗವಾಗಿದೆ.
ತನಿಖೆ ಪ್ರಗತಿಯಲ್ಲಿದ್ದು, ಸ್ಫೋಟದ ಹಿಂದಿನ ಕೈವಾಡದ ಕುರಿತು ಶೀಘ್ರ ಬಹಿರಂಗವಾಗಲಿದೆ. ಹಾಗೆಯೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications