ಬಾಂಗ್ಲಾದಲ್ಲಿ ಬಾಂಬ್ ಎಸೆದವರ ಮೇಲೆ ಪೊಲೀಸರ ಗುಂಡಿನ ದಾಳಿ
ಢಾಕಾ, ಜುಲೈ 07: ಬಾಂಗ್ಲಾದೇಶದ ಕಿಶೋರ್ ಗಂಜ್ ಜಿಲ್ಲೆಯಲ್ಲಿ ಈದ್ ಪ್ರಾರ್ಥನೆ ವೇಳೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಆದರೆ, ಇದು ಉಗ್ರರ ದಾಳಿಯಲ್ಲ, ರಾಜಕೀಯ ಪ್ರೇರಿತ ದಾಳಿ,ಪೊಲೀಸರನ್ನು ಗುರಿಯನ್ನಾಗಿಸಿ ದಾಳಿ ನಡೆಸಲಾಗಿದೆ ಎಂದು ಬಾಂಗ್ಲಾದೇಶ ಸರ್ಕಾರ ಘೋಷಿಸಿದೆ.
ಇತ್ತೀಚಿನ ಅಪ್ಡೇಟ್ಸ್:
* ಪೊಲೀಸ್ ದಾಳಿಗೆ ಒಬ್ಬ ಉಗ್ರ ಹತ. ಆರೇಳು ಮಂದಿ ಇನ್ನೂ ಶಾಲೆಯಲ್ಲಿ ಅಡಗಿರುವ ಶಂಕೆ.
* ಕೈಯಲ್ಲಿದ್ದ ಬಾಂಬ್ ಖಾಲಿಯಾದ ಮೇಲೆ ಚಾಕು, ಚೂರಿ ಹಿಡಿದುಕೊಂಡು ನಿಂತಿರುವ ಉಗ್ರರು.
* ದಾಳಿ ನಡೆಸಿದವರು ಅಜಿಮುದ್ದೀನ್ ಶಾಲೆಯಲ್ಲಿ ಅಡಗಿ ಕುಳಿತ್ತಿದ್ದು, ಅವರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
* ಬಾಂಬ್ ಸ್ಫೋಟದಲ್ಲಿ ಮೃತರಾದ ಪೊಲೀಸ್ ಸಿಬ್ಬಂದಿಯನ್ನು ಝಾಹಿರುಲ್ ಇಸ್ಲಾಮ್ ಎಂದು ಗುರುತಿಸಲಾಗಿದೆ.

ಸುಮಾರು 3 ಲಕ್ಷಕ್ಕೂ ಅಧಿಕ ಮಂದಿ ಇಲ್ಲಿನ ಶೋಲ್ಕಿಯಾ ಮೈದಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು 3 ಮಂದಿ ಸಾವನ್ನಪ್ಪಿದ ವರದಿಗಳು ಬಂದಿವೆ. ಸುಮಾರು 12ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. [ಕಹಿ ನೆನಪು : ರಂಜಾನ್ ಮುನ್ನಾದಿನ ಇರಾಕಿನಲ್ಲಿ ಭೀಕರ ಹತ್ಯಾಕಾಂಡ]

ದಾಳಿ ನಡೆಸಿದ ದುಷ್ಕರ್ಮಿಗಳು ಸಮೀಪದ ಮನೆಯೊಂದರಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದೆ.ವಾರದೊಳಗೆ ಎರಡನೇ ಬಾರಿ ಬಾಂಗ್ಲಾದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಆದರೆ, ಕಿಶೋರ್ ಗಂಜ್ ನಲ್ಲಿನ ಸ್ಫೋಟವನ್ನು ರಾಜಕೀಯ ಪ್ರೇರಿತ ದಾಳಿ ಎಂದು ಬಾಂಗ್ಲಾದೇಶದ ವಾರ್ತಾ ಸಚಿವರು ಹೇಳಿದ್ದಾರೆ. [ಕಹಿ ನೆನಪು : ಸೌದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ]
ಇತ್ತೀಚಿನ ಬಾಂಬ್ ಸ್ಫೋಟದಲ್ಲಿ 20 ಮಂದಿ ಸಾವನ್ನಪ್ಪಿದ್ದರು. ಈ ದಾಳಿ ಹಿಂದೆ ಉಗ್ರರ ಕೈವಾಡ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಆದರೆ, ಐಎಸ್ ಐಎಸ್ ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ಹೆಚ್ಚೆಚ್ಚು ದಾಳಿ ನಡೆಸುವುದಾಗಿ ಘೋಷಿಸಿತ್ತು. ಆದರೆ, ಈ ಎಚ್ಚರಿಕೆ ಗಂಟೆಯನ್ನು ಬಾಂಗ್ಲಾದೇಶ ಸರ್ಕಾರ ಲಘುವಾಗಿ ತೆಗೆದುಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications