Breaking News: ಕಾಬೂಲ್ ಗುರುದ್ವಾರದಲ್ಲಿ ಸ್ಫೋಟ: ದಾಳಿಯಲ್ಲಿ ಐಸಿಸ್ ಕೈವಾಡ
ಕಾಬೂಲ್ ಜೂನ್ 18: ಅಫ್ಘಾನಿಸ್ತಾನದ ಕಾಬೂಲ್ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುರುದ್ವಾರ ಸಾಹಿಬ್ ಆವರಣದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ. ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.
ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು, ಗುರುದ್ವಾರ ಕರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿ ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ.
ಘಟನೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), "ಕಾಬೂಲ್ನ ಪವಿತ್ರ ಗುರುದ್ವಾರದ ಮೇಲೆ ದಾಳಿಯ ಕುರಿತು ಹೊರಹೊಮ್ಮಿದ ವರದಿಗಳ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ಬೆಳವಣಿಗೆಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ" ಎಂದು ಹೇಳಿದೆ.
#WATCH | Explosions heard in Karte Parwan area of Kabul city in Afghanistan.
— ANI (@ANI) June 18, 2022
(Video Source: Locals) pic.twitter.com/jsiv2wVGe8
ಇಂದು ಗುರುದ್ವಾರಕ್ಕೆ ಅಪರಿಚಿತ ಶಸ್ತ್ರಧಾರಿ ದಾಳಿಕೋರನೊಬ್ಬ ಪ್ರವೇಶಿಸಿದ್ದಾನೆ ಎಂದು ಇಂಡಿಯನ್ ವರ್ಲ್ಡ್ ಫೋರಂ ಮುಖ್ಯಸ್ಥ ಪುನೀತ್ ಸಿಂಗ್ ಚಾಂಧೋಕ್ ಹೇಳಿದ್ದಾರೆ. "ನಾನು ಗುರುದ್ವಾರ ಕಾರ್ಟೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಅಳುತ್ತಿದ್ದರು. ಗುರುದ್ವಾರದೊಳಗೆ ವಾಸಿಸುವ ಎಲ್ಲರೂ ಕೊಲ್ಲಲ್ಪಟ್ಟರು ಎಂದು ಹೇಳಲಾಗುತ್ತಿದೆ'' ಎಂದು ಹೇಳಿದರು. ಪುನೀತ್ ಪ್ರಕಾರ ದಾಳಿಕೋರ ಉಗ್ರರು ಐಸಿಸ್ ಸೇರಿದ್ದಾರೆ.
ಯಾವುದೇ ವಿಳಂಬ ಮಾಡದೆ ತಕ್ಷಣವೇ ಆಫ್ಘನ್ ಅಲ್ಪಸಂಖ್ಯಾತರನ್ನು ಅಲ್ಲಿಂದ ವಾಪಸ್ ಕಳುಹಿಸುವಂತೆ ಪುನೀತ್ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಳೆದ ಆರು ತಿಂಗಳಿಂದ ಇ-ವೀಸಾಕ್ಕಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದರು.
Recommended Video