ಬ್ಯಾಂಕಾಕಿನಲ್ಲಿ ವಾಯು ಮಾಲಿನ್ಯ, ಜನರ ಕಣ್ಣು, ಮೂಗಲ್ಲಿ ರಕ್ತಸ್ರಾವ
ಬ್ಯಾಂಕಾಕ್, ಫೆಬ್ರವರಿ 04: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟ ಮೀರಿದ್ದು, ಜನರ ಕಣ್ಣು, ಮೂಗಲ್ಲಿ, ಬಾಯಲ್ಲಿ ರಕ್ತಸ್ರಾವವಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿವೆ.
ಕೆಲ ಜನರ ಮೂಗಿನಿಂದ ರಕ್ತ ಒಸರುತ್ತಿದ್ದರೆ,ಕೆಲ ಜನರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತಿವೆ. ಕೆಲವರು ತಮ್ಮ ಮೂಗಿನಿಂದ ರಕ್ತ ಜಿನುಗುತ್ತಿದೆ ಎಂದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಗಾಳಿಯಲ್ಲಿರುವ ವಿಷಕಾರಿ ಧೂಳಿನ ಕಣಗಳ ಪ್ರಮಾಣ PM 2.5 ಅಪಾಯ ಮಟ್ಟ ಮುಟ್ಟಿದೆ. ಬ್ಯಾಂಕಾಕಿನ 41ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಮಟ್ಟ ಸುರಕ್ಷಿತ ಮಟ್ಟ ಮೀರಿರುವುದು ಜನರಿಗೆ ತೊಂದರೆ ಉಂಟಾಗಲು ಕಾರಣ ಎಂದು ಥಾಯ್ಲೆಂಡ್ನ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. PM 2.5ನಲ್ಲಿ ಧೂಳು, ಹೊಗೆ, ಮಾಲಿನ್ಯಯುಕ್ತ ದ್ರವ ಪದಾರ್ಥಗಳನ್ನು ಹೊಂದಿದ್ದು ವಾಯು ಗುಣಮಟ್ಟ ಇಂಡೆಕ್ಸ್ (ಎಕ್ಯೂಐ) ಪ್ರಮಾಣವನ್ನು ಅಧಿಕಾರಿಗಳು ಗಮನಿಸುತ್ತಿದ್ದಾರೆ.

ವಿಶ್ವದೆಲ್ಲೆಡೆ ನಗರ ಪ್ರದೇಶಗಳ ಮಾಲಿನ್ಯ ಪ್ರಮಾಣವನ್ನು ತಿಳಿಸುವ ಏರ್ ವಿಶ್ಯುವಲ್ ವೆಬ್ ತಾಣದ ಅಂಕಿ ಅಂಶದ ಪ್ರಕಾರ ಅತ್ಯಂತ ಮಾಲಿನ್ಯಯುಕ್ತ ನಗರಗಳ ಪಟ್ಟಿಯಲ್ಲಿ ನವದೆಹಲಿ ಮುಂದಿದ್ದರೆ, ಬ್ಯಾಂಕಾಕ್ 5ನೇ ಸ್ಥಾನದಲ್ಲಿದೆ.
ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ವಿರೋಧಿ ಅಭಿಯಾನ ಆರಂಭವಾಗಿದೆ. ಮಾಲಿನ್ಯದ ದುಷ್ಪರಿಣಾಮದಿಂದ ಪಾರಾಗಲು ಯಾವೆಲ್ಲ ರೀತಿಯ ಮಾಸ್ಕ್ಗಳನ್ನು ಧರಿಸುವುದು ಸುರಕ್ಷಿತ ಎಂಬ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರಲು ಥಾಯ್ಲೆಂಡ್ ಸರ್ಕಾರವು ಮೋಡ ಬಿತ್ತನೆ ಮಾಡಿ ಕೃತಕ ಮಳೆ ಉಂಟು ಮಾದಲು ಯತ್ನಿಸಿತ್ತು. ಈ ಮೂಲಕದ ಮಾಲಿನ್ಯಕ್ಕೆ ಕಾರಣವಾದ ಸೂಕ್ಷ್ಮ ಮಾಲಿನ್ಯಕಾರಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ, ಮೋಡ ಬಿತ್ತನೆ ಯತ್ನ ವಿಫಲವಾಗಿದೆ. ಟ್ಯಾಂಕರ್ಗಳನ್ನು ಬಳಸಿ ಮುಗಿಲೆತ್ತರಕ್ಕೆ ನೀರು ಸಿಡಿಸುವ ಪ್ರಯತ್ನವೂ ಕೈಕೊಟ್ಟಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡುವುದು ಅನಿವಾರ್ಯವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications