Breaking News: ಅಫ್ಘಾನ್ ಶಿಯಾ ಮಸೀದಿಯಲ್ಲಿ ಸ್ಫೋಟಕ್ಕೆ 7 ಸಾವು, 15 ಮಂದಿ ಗಾಯ
ಕಂದಹಾರ್, ಅಕ್ಟೋಬರ್ 15: ಅಫ್ಘಾನಿಸ್ತಾನದ ಕಂದಹಾರ್ ನಗರದ ಶಿಯಾ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 7 ಮಂದಿ ಪ್ರಾಣ ಬಿಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ಗೊತ್ತಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರದಲ್ಲಿ ಮಸೀದಿ ಮೇಲೆ ನಡೆದ ಎರಡನೇ ದಾಳಿಯಿದೆ ಎಂದು ವೈದ್ಯರೊಬ್ಬರು ಎಎಫ್ ಪಿಗೆ ತಿಳಿಸಿದ್ದಾರೆ ಎಂದು ವರದಿ ಬಂದಿದೆ.
"ಬಾಂಬ್ ಸ್ಫೋಟದಲ್ಲಿ ಈವರೆಗೂ ಏಳು ಮಂದಿ ಮೃತಪಟ್ಟಿದ್ದು, ಗಾಯಗೊಂಡ 13 ಜನರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ," ಎಂದು ದಕ್ಷಿಣ ನಗರದ ಕೇಂದ್ರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಶಿಯಾ ಮಸೀದಿಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ಪತ್ತೆ ಮಾಡಲಾಗುವುದು ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ. ಅಧಿಕಾರಿಗಳು ಸ್ಫೋಟದ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಕರಿ ಸಯೀದ್ ಖೋಸ್ತಿ ಹೇಳಿದರು. ಈ ಮಧ್ಯೆ ಇಮಾಮ್ ಬರ್ಗಾ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಭಾರಿ ಸಂಖ್ಯೆಯ ಸಾವು-ನೋವು ಆಗಿದ್ದು, ಅಂಕಿ ಸಂಖ್ಯೆ ಬಗ್ಗೆ ಈಗಲೇ ದೃಢವಾಗಿ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಾಂತೀಯ ಮಂಡಳಿಯ ಮಾಜಿ ಸದಸ್ಯ ನೆಮತುಲ್ಲಾ ವಫಾ ಹೇಳಿದ್ದಾರೆ.

ಯಾವುದೇ ಸಂಘಟನೆ ದಾಳಿ ಹೊಣೆ ಹೊತ್ತಿಲ್ಲ:
ಕಂದಹಾರ್ ನಗರದ ಶಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ದಿನವೇ ನಡೆಸಿದ ಬಾಂಬ್ ಸ್ಫೋಟದ ಘಟನೆ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದೇ ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ ಎಂದು ತಿಳಿದು ಬಂದಿದೆ.
ಈ ಹಿಂದೆ ಅಕ್ಟೋಬರ್ 8 ರಂದು, ಉತ್ತರ ಅಫ್ಘಾನಿಸ್ತಾನದಲ್ಲಿ ಮಸೀದಿ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡಿದ್ದರು. ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದ ಶಂಕೆ ವ್ಯಕ್ತವಾಗಿತ್ತು. ಆತ್ಮಹತ್ಯಾ ಬಾಂಬರ್ ಅನ್ನು ಬಳಸಿಕೊಂಡು ಈ ದಾಳಿ ನಡೆಸಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications