ಮಧ್ಯ ನೈಜೀರಿಯಾದಲ್ಲಿ ಬಾಂಬ್ ಸ್ಫೋಟ: 50 ಮಂದಿ ಸಾವು!
ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಿಗೆ ಕುಖ್ಯಾತಿ ಪಡೆದ ಮಧ್ಯ ನೈಜೀರಿಯಾದಲ್ಲಿ ಬಾಂಬ್ ಸ್ಪೋಟಗೊಂಡಿದೆ. ಅನೇಕ ಕುರಿಗಾಹಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ನೈಜೀರಿಯಾದ ಉತ್ತರ-ಮಧ್ಯ ಪ್ರದೇಶದಲ್ಲಿ ಶಂಕಿತ ಬಾಂಬ್ ಸ್ಫೋಟದಿಂದ ಜಾನುವಾರು ಸೇರಿದಂತೆ 50 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ನಸರವಾ ಪೊಲೀಸ್ ಕಮಿಷನರ್ ಮೈಯಾಕಿ ಮಹಮ್ಮದ್ ಬಾಬಾ ಮಾಹಿತಿ ನೀಡಿದ್ದಾರೆ. ಉತ್ತರ ಮಧ್ಯ ನೈಜೀರಿಯಾದ ನಸರವಾ ಮತ್ತು ಬೆನ್ಯೂ ರಾಜ್ಯಗಳ ನಡುವೆ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ನೈಜೀರಿಯಾದ ಮಿಯೆಟ್ಟಿ ಅಲ್ಲಾ ಕ್ಯಾಟಲ್ ಬ್ರೀಡರ್ಸ್ ಅಸೋಸಿಯೇಶನ್ನ ವಕ್ತಾರ ತಸಿಯು ಸುಲೇಮಾನ್, ಫುಲಾನಿ ಕುರಿಗಾರರ ಗುಂಪು ತಮ್ಮ ಜಾನುವಾರುಗಳನ್ನು ಬೆನ್ಯೂದಿಂದ ನಸರಾವಾಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಬಾಂಬ್ ಸ್ಪೋಟಗೊಂಡಿದೆ. 54 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೆಕ್ಕವಿಲ್ಲದಷ್ಟು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. ಆದರೆ ನಸರಾವಾ ಗವರ್ನರ್ ಅಬ್ದುಲ್ಲಾಹಿ ಸುಲೆ ಈ ಘಟನೆಯಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆನ್ನುವ ಬಗ್ಗೆ ಮಾಹಿತಿಯನ್ನು ನೀಡಿಲ್ಲ. ಸ್ಫೋಟದ ಹಿಂದೆ ಯಾರಿದ್ದಾರೆ ಎಂಬ ಮಾಹಿತಿಯನ್ನು ಈವರೆಗೂ ನೀಡಲಾಗಿಲ್ಲ.

ಮಿಲಿಟರಿ ಸ್ಟ್ರೈಕ್ನಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ದನಗಾಹಿಗಳನ್ನು ಪ್ರತಿನಿಧಿಸುವ ಗುಂಪಿನ ಸದಸ್ಯರೊಬ್ಬರು ಮಾಹಿತಿ ನೀಡಿದ್ದರೆ. ಘಟನೆ ಸಂಬಂಧ ನೈಜೀರಿಯಾದ ವಾಯುಪಡೆಯ ವಕ್ತಾರರಿಗೆ ಮಾಹಿತಿ ಕೇಳಲಾಗಿದ್ದು ಅವರ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
Twenty-seven herders were killed while several others were injured in a bomb explosion in central Nigeria, a region known for ethnic and religious tensions, AFP reported
— ANI (@ANI) January 25, 2023
ಮಧ್ಯ ನೈಜೀರಿಯಾ ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಿಗೆ ಕುಖ್ಯಾತಿ ಪಡೆದಿದೆ. ಮಧ್ಯ ಬೆಲ್ಟ್ ಎಂದೂ ಕರೆಯಲ್ಪಡುವ ಉತ್ತರ ಮಧ್ಯ ನೈಜೀರಿಯಾ ಆಗಾಗ ಫುಲಾನಿ ಪಶುಪಾಲಕರು ಮತ್ತು ಮುಖ್ಯವಾಗಿ ಕ್ರಿಶ್ಚಿಯನ್ನರಾದ ರೈತರ ನಡುವಿನ ಘರ್ಷಣೆಗಳಿಂದಾಗಿ ಹಿಂಸಾಚಾರಕ್ಕೆ ಗುರಿಯಾಗುತ್ತದೆ. ಇದನ್ನು ಹೆಚ್ಚಾಗಿ ಜನಾಂಗೀಯ-ಧಾರ್ಮಿಕ ಸಂಘರ್ಷ ಎಂದು ಕರೆಯಲಾಗುತ್ತದೆ.
ಆದರೆ ತಜ್ಞರು ಹೇಳುವಂತೆ ಜನಸಂಖ್ಯೆಯ ಬೆಳವಣಿಗೆ ಮತ್ತು ಹವಾಮಾನ ಬದಲಾವಣೆಯು ಬೇಸಾಯಕ್ಕೆ ಮೀಸಲಾದ ಪ್ರದೇಶದ ವಿಸ್ತರಣೆಗೆ ಕಾರಣವಾಗಿದೆ. ಅಲೆಮಾರಿಗಳ ಜಾನುವಾರುಗಳನ್ನು ಮೇಯಿಸಲು ಕಡಿಮೆ ಭೂಮಿ ಲಭ್ಯವಿದೆ. ಹೀಗಾಗಿ ಇಲ್ಲಿ ಸಂಘರ್ಷಗಳು ನಡೆಯುತ್ತವೆ ಎಂದು ಹೇಳುತ್ತಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications