ಕಾಬೂಲ್ನಲ್ಲಿ ಮಸೀದಿ ಬಳಿ ಬಾಂಬ್ ಸ್ಪೋಟ: 'ನಾಗರಿಕರು ಸಾವನ್ನಪ್ಪಿದ್ದಾರೆ' ಎಂದ ತಾಲಿಬಾನ್
ಕಾಬೂಲ್, ಅಕ್ಟೋಬರ್ 03: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾನುವಾರ ಬಾಂಬ್ ಸ್ಪೋಟವಾಗಿದ್ದು, ಕೆಲವು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ವಕ್ತಾರುರು ಹೇಳಿದ್ದಾರೆ.
ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಗುರಿಯಾಗಿಸಿಕೊಂಡು ಈ ಬಾಂಬ್ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಝಬಿಯುಲ್ಲಾ ಮುಜಾಹಿದ್, "ಈ ಬಾಂಬ್ ದಾಳಿ ನಡೆದ ಸಂದರ್ಭದಲ್ಲಿ ಮಸೀದಿಯಲ್ಲಿ ಪ್ರಾರ್ಥನೆಯ ಸೇವೆಯೊಂದು ನಡೆಯುತ್ತಿತ್ತು," ಎಂದು ತಿಳಿಸಿದ್ದಾರೆ.
"ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ," ಎಂದು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯ್ಯದ್ ಖೋಸ್ತಿ ತಿಳಿಸಿದ್ದಾರೆ ಎಂದು ಎಎಫ್ಪಿ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಇನ್ನು ಸ್ಥಳಕ್ಕೆ ಆಂಬುಲೆನ್ಸ್ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದೆ.

ಇನ್ನು ತಾಲಿಬಾನ್ ವಕ್ತಾರರು, "ಈವರೆಗೆ ಈ ಸ್ಪೋಟದ ಹೊಣೆಯನ್ನು ಯಾವುದೇ ಭಯೋತ್ಪಾದಕ ಸಂಘಟನೆಗಳು ಹೊತ್ತುಕೊಂಡಿಲ್ಲ. ಈಗ ಮಸೀದಿಯ ಸುತ್ತ ಜನರ ಸಂಚಾರವನ್ನು ನಿಷೇಧ ಮಾಡಲಾಗಿದೆ," ಎಂದು ಹೇಳಿದ್ದಾರೆ.
ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದ ಬಳಿಕ ತಾಲಿಬಾನ್ ವಿರುದ್ಧ ಇಸ್ಲಾಮಿಕ್ ಸ್ಟೇಟ್ ಗುಂಪು ಉಗ್ರರ ದಾಳಿಗಳು ಹೆಚ್ಚಾಗಿದೆ ಎಂದು ವರದಿಯಾಗಿದೆ. ಈ ಎರಡು ಉಗ್ರವಾಗಿ ಸಂಘಟನೆಗಳ ನಡುವೆ ದಾಳಿಯು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಸ್ಲಾಮಿಕ್ ಸ್ಟೇಟ್ ಗುಂಪು ತಾಲಿಬಾನ್ ತನ್ನ ವಿರೋಧಿ ಎಂದು ಹೇಳಿದೆ. ಈ ಹಿಂದೆ ಕೆಲವು ದಾಳಿಗಳ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.
ಇನ್ನು ಭಾನುವಾರ ಮಧ್ಯಾಹ್ನ ಬಾಂಬ್ಸ್ಫೋಟದಿಂದ ಸಾವುನೋವು ಸಂಭವಿಸಿದೆ ಎಂದು ತಾಲಿಬಾನ್ ಸರ್ಕಾರದ ಮಾಹಿತಿ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಮುಜಾಹಿದ್ ಉರ್ದುವಿನಲ್ಲಿ ಟ್ವೀಟ್ ಮಾಡಿದ್ದರು.
ಆಗಸ್ಟ್ ತಿಂಗಳಿನಲ್ಲಿ ಕಾಬೂಲ್ನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು, ಅಮೆರಿಕ ಭದ್ರತಾಪಡೆಗೆ ಸೇರಿದ 12 ಮದಿಯ ಜೊತೆಗೆ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಐಸಿಸ್-ಕೆ ಹೊತ್ತುಕೊಂಡಿತ್ತು.
(ಒನ್ಇಂಡಿಯಾ ಸುದ್ದಿ)
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications