ಅಮೆರಿಕದಲ್ಲೂ ಊಬರ್ ಕಂಪನಿ ಚಾಲಕನಿಂದ ಅತ್ಯಾಚಾರ
ಬಾಸ್ಟನ್, ಡಿ. 19: ಅಮೆರಿಕ ಮೂಲದ ಊಬರ್ ಟ್ಯಾಕ್ಸಿ ಸಂಸ್ಥೆ ಚಾಲಕರನ್ನು ನೇಮಿಸಿಕೊಳ್ಳುವಾಗ ಅವರ ಪೂರ್ವಾಪರ ವಿಚಾರಿಸುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕದ ಬಾಸ್ಟನ್ ನಗರದಲ್ಲಿ ಕೂಡ ಊಬರ್ ಟ್ಯಾಕ್ಸಿ ಚಾಲಕನೋರ್ವನನ್ನು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಊಬರ್ ಸಂಸ್ಥೆಯ ಅಲೆಜಾಂಡ್ರೊ ಟ್ಯಾಕ್ಸಿ (46) ಎಂಬ ಚಾಲಕ ಓರ್ವ ಕೇಂಬ್ರಿಡ್ಜ್ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಟ್ರೆಮೊಂಟ್ ಸ್ಟ್ರೀಟ್ನಿಂದ ಮನೆಗೆ ಟ್ಯಾಕ್ಸಿ ಮೂಲಕ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಅಪಹರಣಕ್ಕೆ ಯತ್ನಿಸಿದ್ದಾನೆಂದು ಮಿಡಲ್ಸೆಕ್ಸ್ ಡಿಸ್ಟ್ರಿಕ್ಟ್ ಅಟಾರ್ನಿ ಅವರ ಕಚೇರಿ ಮೂಲಗಳು ತಿಳಿಸಿವೆ.

ಟ್ಯಾಕ್ಸಿ ಮೂಲಕ ಸಾಗುತ್ತಿದ್ದ ಮಹಿಳೆ ಎಟಿಎಂ ಯಂತ್ರದ ಎದುರು ನಿಂತು ಹಣ ಪಡೆದು ವಾಪಸ್ ಟ್ಯಾಕ್ಸಿ ಹತ್ತಿದ್ದಳು. ಆಗ ಟ್ಯಾಕ್ಸಿಯನ್ನು ಚಾಲಕನು ಅಪರಿಚಿತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಕಾರ್ ನಿಲ್ಲಿಸಿ ಹಿಂದಿನ ಸೀಟ್ಗೆ ನೆಗೆದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಮಹಿಳೆ ದೂರು ನೀಡಿದ್ದಾಳೆ. [ದೇಶಾದ್ಯಂತ ಊಬರ್ ಸೇವೆ ನಿಷೇಧಿಸಿ ಕೇಂದ್ರ ಆದೇಶ]
ತನಿಖೆಯಲ್ಲಿ ಅತ್ಯಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆದ್ದರಿಂದ ಚಾಲಕನ ಮೇಲೆ ಅತ್ಯಾಚಾರ, ಅಪಹರಣ ಹಾಗೂ ದೈಹಿಕ ದಾಳಿ ನಡೆಸಿದ ಪ್ರಕರಣ ದಾಖಲಿಸಲಾಗಿದೆ.
ಇದೇ ವರ್ಷದ ಆರಂಭದಲ್ಲಿ ಲಾಸ್ ಏಂಜೆಲೀಸ್ ನಗರದಲ್ಲಿ ಊಬರ್ ಕಂಪನಿಯ ಚಾಲಕನು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ. ನಂತರ ದೆಹಲಿಯಲ್ಲಿ ಇದೇ ಸಂಸ್ಥೆಯ ಚಾಲಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ. ಆಗ ನಡೆದ ತನಿಖೆಯಲ್ಲಿ ಊಬರ್ ಕಂಪನಿಯು ಅನೇಕ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿತ್ತು. [ದೆಹಲಿ ಅತ್ಯಾಚಾರಕ್ಕೆ ಊಬರ್ ಕಂಪನಿಯೇ ಹೊಣೆ]
ಈಗ ಬಾಸ್ಟನ್ ನಗರದಲ್ಲಿ ಕೂಡ ಮತ್ತೋರ್ವ ಚಾಲಕ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಉಗ್ರನೋರ್ವ ಕಾಫಿ ಶಾಪ್ನಲ್ಲಿ ಜನರನ್ನು ಒತ್ತೆಯಿಟ್ಟುಕೊಂಡಿದ್ದಾಗ ಊಬರ್ ಕಂಪನಿಯ ಟ್ಯಾಕ್ಸಿಗಳಲ್ಲಿ ಎಂದಿಗಿಂತ ಹೆಚ್ಚಿನ ಬಾಡಿಗೆ ಪಡೆಯಲು ಯತ್ನಿಸಲಾಗಿತ್ತು. ಇದು ವ್ಯಾಪಕ ಟೀಕೆಗೊಳಗಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications