ಯುವಕನ ಮೆದುಳು ತಿಂದು ಹಾಕಿದ ಭಯಾನಕ ‘ಹುಳು’!
ಕರಾಚಿ: ಅದೊಂದು ಭಯಾನಕ 'ಹುಳು'.. ಹಂಗಂತಾ ಅದನ್ನ 'ಹುಳು' ಅನ್ನೊದಕ್ಕೂ ಆಗೋದಿಲ್ಲ. ಅದು ಏಕಕೋಶ ಜೀವಿಯಾದರೂ ಮನುಷ್ಯನ ದೇಹಕ್ಕೆ ಎಂಟ್ರಿ ಕೊಟ್ಟರೆ ಕೆಲವೇ ದಿನದಲ್ಲಿ ಮೆದುಳನ್ನ ತಿಂದು ಬಿಸಾಡುತ್ತೆ. ಇಂತಹದ್ದೇ ಭಯಾನಕ ವೈರಸ್ ಇದೀಗ ಓರ್ವ ಯುವಕನನ್ನ ಬಲಿ ಪಡೆದಿದೆ. ಜ್ವರದಿಂದ ನರಳುತ್ತಿದ್ದ ಯುವಕನ ಮೆದುಳು ತಿಂದು ಹಾಕಿರುವ 'ಹುಳು' ಆತನ ಉಸಿರು ನಿಲ್ಲಿಸಿದೆ.
ಅಮೆರಿಕದಲ್ಲಿ ಹೆಚ್ಚಾಗಿ ಕಂಡುಬರುವ 'ನಾಗ್ಲೆರಿಯಾ ಫೌಲೆರಿ' ಅಥವಾ ಮೆದುಳು ತಿನ್ನುವ ಅಮೀಬಾ ಪಾಕಿಸ್ತಾನದಲ್ಲೂ ಜೀವ ತೆಗೆಯುತ್ತಿದೆ. ಕರಾಚಿ ಯುವಕನೊಬ್ಬ ವಿಪರೀತ ಜ್ವರ ಅಂತಾ ಆಸ್ಪತ್ರೆಗೆ ಸೇರಿದ್ದ. ಆ ಹುಡುಗನ ಮೆದುಳಿಗೆ ನುಗ್ಗಿತ್ತು ಅಮೀಬಾ. ಹೀಗಾಗಿ ಆತ ವಿಪರೀತ ವಾಂತಿ & ಜ್ವರದಿಂದ ನರಳುತ್ತಿದ್ದ. ಹುಡುಗನನ್ನ ಬದುಕಿಸಿಕೊಳ್ಳಲು ಎಷ್ಟೇ ಪ್ರಯತ್ನ ಮಾಡಿದರೂ ಕೊನೆಗೂ ಉಳಿಸಿಕೊಳ್ಳಲು ಆಗಲೇ ಇಲ್ಲ ಎಂದಿದ್ದಾರೆ ಪಾಕಿಸ್ತಾನದ ವೈದ್ಯರು. ಹಾಗಾದ್ರೆ ಹೇಗೆಲ್ಲಾ ಹರಡುತ್ತೆ ಈ ಮೆದುಳು ತಿನ್ನುವ ಅಮೀಬಾ (Brain Eating Amoeba)? ತಿಳಿಯೋಣ ಬನ್ನಿ.

ಮೊದಲು ಮೂಗು.. ನಂತರ ಮೆದುಳು!
ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ವೈರಸ್ ಒಂದು ಏಕಕೋಶ ಜೀವಿ, ಅಂದ್ರೆ ಇದು ಅಮೀಬಾ. ಮೊದಲು ಮನುಷ್ಯನ ಮೂಗಿನ ಒಳಗೆ ಪ್ರವೇಶ ಮಾಡುವ ವೈರಸ್, ಅಲ್ಲಿಂದ ನೇರ ಮೆದುಳು ಸೇರಿ ನಂತರ ಬೆನ್ನುಹುರಿಗೂ ನುಸುಳುತ್ತದೆ. ಹೀಗೆ ಮೆದುಳು ಸೇರಿದ ವೈರಸ್ ಮನುಷ್ಯನ ಮೆದುಳನ್ನ ತಿನ್ನಲು ಪ್ರಾರಂಭಿಸಿ, ಕೊನೆಗೆ ಜೀವ ತೆಗೆಯುತ್ತದೆ. ಹೀಗಾಗಿ 'ನಾಗ್ಲೆರಿಯಾ ಫೌಲೆರಿ' ಡೆಡ್ಲಿ ವೈರಸ್ ಆಗಿದ್ದು, ಅಮೆರಿಕದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದೀಗ ಪಾಕಿಸ್ತಾನಕ್ಕೂ ಎಂಟ್ರಿ ಕೊಟ್ಟು ಬೆಚ್ಚಿಬೀಳಿಸಿದೆ.
ಮನೆ ಟ್ಯಾಂಕರ್ನಲ್ಲೂ ಮೆದುಳು ತಿನ್ನುವ ವೈರಸ್!
ಉತ್ತರ ಅಮೆರಿಕ ಹಾಗೂ ದಕ್ಷಿಣ ಅಮೆರಿಕದಲ್ಲಿ ಹಲವು ಕಡೆ ವ್ಯಾಪಕವಾಗಿ ಈ ಮೆದುಳು ತಿನ್ನುವ ವೈರಸ್ ಹರಡುತ್ತಿದೆ. ಇದೀಗ ಏಷ್ಯಾಗೂ ಕಾಲಿಟ್ಟು ಭಾರತದಲ್ಲೂ ತಲ್ಲಣ ಸೃಷ್ಟಿಸುತ್ತಿದೆ. ಈ ವೈರಸ್ ಬದುಕಿ ಉಳಿಯಲು ಬೆಚ್ಚಗಿನ ನೀರು ಅಗತ್ಯ. ಮಣ್ಣು & ಬೆಚ್ಚಗಿನ ಶುದ್ಧ ನೀರಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚಾಗಿ ಕಂಡುಬರುತ್ತಿದೆ. ಇದರ ಜೊತೆಗೆ ಮನೆ ನೀರಿನ ಟ್ಯಾಂಕರ್ ಮತ್ತು ಹೀಟರ್ ಅಥವಾ ಪೈಪ್ಗಳಲ್ಲೂ ಮೆದುಳು ತಿನ್ನುವ ವೈರಸ್ ಕಂಡುಬರುತ್ತದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ತಜ್ಞರು ಮೊದಲಿನಿಂದಲೂ ಸಲಹೆ ನೀಡುತ್ತಾ ಬಂದಿದ್ದಾರೆ.

1 ವಾರದಲ್ಲಿ ಜೀವ ಹೋಗುತ್ತೆ ಹುಷಾರ್!
ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ಅಮೀಬಾ ಅದೆಷ್ಟು ಡೇಂಜರಸ್ ಅಂದ್ರೆ, ಸೋಂಕಿಗೆ ಸರಿಯಾದ ಔಷಧ ಲಭ್ಯವಿಲ್ಲ. ಅಕಸ್ಮಾತ್ ನಾಗ್ಲೆರಿಯಾ ಫೌಲೆರಿ ಮನುಷ್ಯನ ಮೆದುಳು ಸೇರಿದರೆ ಆ ಕ್ಷಣದಿಂದಲೇ ಮೆದುಳಿನ ಮೇಲೆ ದಾಳಿ ಮಾಡಿ ತಿನ್ನಲು ಆರಂಭಿಸುತ್ತದೆ. 1 ವಾರದಲ್ಲಿ ಆತನ ಜೀವವನ್ನೇ ತೆಗೆದುಬಿಡುತ್ತದೆ. ಇದ್ಯಾವುದೂ ಸೋಂಕಿತನ ಗಮನಕ್ಕೆ ಬರುವುದೇ ಇಲ್ಲ. ಅಷ್ಟರಮಟ್ಟಿಗೆ ಖತರ್ನಾಕ್ ನಾಗ್ಲೆರಿಯಾ ಫೌಲೆರಿ ಸೂಕ್ಷ್ಮಾಣು ಜೀವಿ. ಇದೇ ಕಾರಣಕ್ಕೆ ಮೆದುಳು ತಿನ್ನುವ ಅಮೀಬಾ ಬಗ್ಗೆ ಎಲ್ಲರಿಗೂ ಭಯ ಭಯ.
ಜ್ವರ, ವಾಂತಿ, ತಲೆನೋವು ಲಕ್ಷಣ
ಮೆದುಳು ತಿನ್ನುವ ಅಮೀಬಾ ದೇಹ ಪ್ರವೇಶಿಸಿದರೆ ಮೆಲ್ಲಗೆ ತನ್ನ ಕೆಲಸ ಆರಂಭಿಸುತ್ತದೆ. ಸೂಕ್ಷ್ಮಾಣು ಜೀವಿ ಕೆಲಸ ಆರಂಭಿಸಿದ ಒಂದೆರಡು ದಿನದಲ್ಲಿ ಜ್ವರ & ತಲೆನೋವು ಶುರು ಆಗುತ್ತದೆ. ಹೀಗೆ ಆರಂಭವಾಗುವ ಸೋಂಕಿನ ಲಕ್ಷಣ ಭಾರಿ ವಾಂತಿಯಾಗುವಂತೆ ಮಾಡುತ್ತೆ. ಮನುಷ್ಯನ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿ, 1 ವಾರದ ಒಳಗಾಗಿ ಸೋಂಕಿತ ವ್ಯಕ್ತಿ ಮೃತಪಡುತ್ತಾನೆ. ಅಷ್ಟರೊಳಗೆ ಅಮಿಬಾ ವಂಶಕ್ಕೆ ಸೇರಿದ ಈ ನಾಗ್ಲೆರಿಯಾ ಫೌಲೆರಿ ಸೂಕ್ಷ್ಮಾಣು ಜೀವಿ ಮೆದುಳನ್ನು ತಿಂದು ಮುಗಿಸಿರುತ್ತದೆ.

ಮೂಗಿನ ಒಳಗೆ ನೀರು ಹಾಕಬೇಡಿ!
ಮೆದುಳು ತಿನ್ನುವ ಸೂಕ್ಷ್ಮಾಣು ಜೀವಿ ಅಮೆರಿಕದ ಹಲವು ಕೆರೆಗಳಲ್ಲಿ ಕಂಡುಬಂದಿದೆ. ಹೀಗಾಗಿ ಅಲ್ಲಿನ ಅಧಿಕಾರಿಗಳು ಜನರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹಲವು ನಗರಗಳ ನೇರವಾಗಿ ಕೆರೆ ಅಥವಾ ನಲ್ಲಿ ನೀರನ್ನು ಮೂಗಿನ ಒಳಗೆ ಸೇರಿಸಬೇಡಿ ಎಂದಿದ್ದಾರೆ. ಏಕೆಂದರೆ ಮೂಗಿಗೆ ನೀರು ಹೋದರೆ, ವೈರಸ್ ಮೆದುಳು ಸೇರುವುದು ಸುಲಭ. ಮೆದುಳು ಸೇರುವ ಸೂಕ್ಷ್ಮಾಣು ಜೀವಿ ನಾಗ್ಲೆರಿಯಾ ಫೌಲೆರಿ ತಕ್ಷಣ ಮೆದುಳನ್ನ ತಿನ್ನಲು ಶುರುಮಾಡುತ್ತದೆ. ಕಡೆಗೆ ಸೋಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೆ ಆತ ನರಳಿ ಪ್ರಾಣಬಿಡುತ್ತಾನೆ. ಹೀಗಾಗಿ ಮೂಗಿನ ಒಳಗೆ ನೀರು ಸೇರಿಸಬೇಡಿ ಎಂದು ಅಮೆರಿಕದಲ್ಲಿ ಎಚ್ಚರಿಕೆ ನೀಡಲಾಗಿದ್ದು, ಜೊತೆಗೆ ಪಾಕಿಸ್ತಾನದಲ್ಲೂ ಅಲರ್ಟ್ ಘೋಷಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications