ಮುಟ್ಟಿನ ಹೊಟ್ಟೆ ನೋವಿಗೆ ಮಾತ್ರೆ ಸೇವಿಸಿ ಕೋಮಾಗೆ ಜಾರಿದ ಯುವತಿ
ಮುಟ್ಟಿನ ಸಮಯ ಹೆಣ್ಣು ಮಕ್ಕಳಿಗೆ ಸವಾಲಿನ ಕ್ಷಣಗಳು. ಈ ಸಮಯದಲ್ಲಿ ಹೆಣ್ಣು ಮಕ್ಕಳಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಒಂದಿಷ್ಟು ಬದಲಾವಣೆಗಳು ಹಾಗೂ ನೋವು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಮುಟ್ಟಿನ ಈ ಸಮಯದಲ್ಲಿ ಹೆಣ್ಣು ಕುಗ್ಗುತ್ತಾಳೆ. ಅದರಲ್ಲೂ ಹೊಟ್ಟೆ ಹಾಗೂ ಸೊಂಟ ನೋವು ವಿಪರೀತ ಕಾಣಿಸಿಕೊಳ್ಳುತ್ತದೆ. ಕೆಲವರು ಇದನ್ನು ತಡೆದರೆ, ಇನ್ನೂ ಕೆಲವರಿಗೆ ತಡೆಯಲಾರದಷ್ಟು ನೋವು ಬರುತ್ತದೆ.
ನೋವು ಸಹಿಸಿಕೊಳ್ಳಲಾಗದೇ ಕಡಿಮೆಯಾಗಲಿ ಎಂದು ಹೆಣ್ಣು ಮಕ್ಕಳು ಅನೇಕ ಪ್ರಯತ್ನ ಮಾಡುತ್ತಾರೆ. ಕೆಲವರು ಮನೆಯಲ್ಲೇ ತಯಾರಿಸುವ ಮನೆ ಮದ್ದುಗಳನ್ನು ಸೇವಿಸಿದರೆ, ಇನ್ನೂ ಕೆಲವರು ಬೇಗ ನೋವು ಕಡಿಮೆಯಾಗಲಿ ಎಂದು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಇದು ಆರೋಗ್ಯಕ್ಕೆ ಕುತ್ತು. ಮುಟ್ಟಿನ ನೋವು ಕಡಿಮೆಯಾಗಲು ಸೇವಿಸುವ ಮಾತ್ರೆಗಳು ನೇರವಾಗಿ ಆರೋಗ್ಯ ಅಥವಾ ಜೀವದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ಬ್ರೆಜಿಲ್ನ ಯುವತಿಯೊಬ್ಬಳು ಮುಟ್ಟಿನ ನೋವು ತಾಳಲಾರದೇ ನೋವಿನ ಮಾತ್ರೆ ಸೇವಿಸಿದ ಪರಿಣಾಮ ಆರೋಗ್ಯ ತೀವ್ರ ಹದಗೆಟ್ಟಿದ್ದು, ಕೋಮಾಗೆ ಜಾರಿದ್ದಾಳೆ. ಜಾಕ್ವೆಲಿನ್ ಗಮಾಕ್ ಎಂಬ ಯುವತಿ ಮುಟ್ಟಿನ ನೋವಿಗೆ ಮಾತ್ರೆಯೊಂದನ್ನು ಸೇವಿಸಿದ್ದಾಳೆ. ಮಾತ್ರೆ ಸೇವಿಸಿದ ಬಳಿಕ ಆಕೆಗೆ ಅತಿಯಾದ ಕಣ್ಣು ನೋವು ಹಾಗೂ ಮೈ ಮೇಲೆ ಗುಳ್ಳೆ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಪೋಷಕರು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಿದ ಕೆಲ ಹೊತ್ತಿನಲ್ಲೇ ಯುವತಿ ಕೋಮಾಗೆ ಜಾರಿದ್ದಾಳೆ. ಈ ಬಗ್ಗೆ ವೈದ್ಯರು ಅಧೀಕೃತವಾಗಿ ಪೋಷಕರಿಗೆ ತಿಳಿಸಿದ್ದಾರೆ. ಸದ್ಯ 17 ದಿನಗಳ ಸತತ ಚಿಕಿತ್ಸೆ ಬಳಿಕ ಜಾಕ್ವೆಲಿನ್ ಕೋಮಾದಿಂದ ಹೊರಬಂದಿದ್ದು, ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ ಎಂದು ವರದಿಯಾಗಿದೆ. ಹೀಗಾಗಿ ಮುಟ್ಟಿನ ಹೊಟ್ಟೆ ನೋವಿಗೆ ಮಾತ್ರೆಗಳನ್ನು ತೆಗೆದುಕೊಳ್ಳುವ ಮುನ್ನ ಎಚ್ಚರವಹಿಸಬೇಕು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications