ವಿಮಾನ ದುರಂತ : ಗಣಿ ಉದ್ಯಮಿ ಸೇರಿದಂತೆ 7 ಜನ ಬಲಿ
ಸಾವೋ ಪಾಲೋ(ಬ್ರೆಜಿಲ್), ಮಾರ್ಚ್ 20: ಉತ್ತರ ಸಾವೋ ಪಾಲೋದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ವೆಲ್ ಕಂಪನಿಯ ಮಾಜಿ ಸಿಇಒ, ಗಣಿ ಉದ್ಯಮಿ ರೊಜರ್ ಅಗ್ನೇಲಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ.
56 ವರ್ಷ ವಯಸ್ಸಿನ ರೊಜರ್ ಅಗ್ನೇಲಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಪ್ರಯಾಣ ಬೆಳೆಸಿದ್ದರು. ಈ ದುರಂತದಲ್ಲಿ ರೊಜರ್ ಕುಟುಂಬದ ಎಲ್ಲಾ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. [ದುಬೈ ವಿಮಾನ ಪತನ: ಇಬ್ಬರು ಭಾರತೀಯರು ಸೇರಿ 62 ಸಾವು]

ಉದ್ಯಮಿ ರೋಜರ್ ಅವರು, ರಿಯೋ ಡಿ ಜೆನೈರೋದಲ್ಲಿ ವಿವಾಹ ಸಮಾರಂಭವೊಂದಕ್ಕೆ ಪತ್ನಿ ಆಂಡ್ರಿಯಾ, ಪುತ್ರ ಜೋಆವೊ ಹಾಗೂ ಪುತ್ರಿ ಅನ್ನಾ ಕರೋಲಿನಾ ಮತ್ತು ಅವರ ಸಂಬಂಧಿಕರೊಂದಿಗೆ ತೆರಳುತ್ತಿದ್ದರು. ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ರೋಗರ್ ಕೊನೆಗೆ ವೇಲ್ ಕಂಪನಿ ಸಿಇಒ ಆಗಿದ್ದರು. ನಂತರ ಬ್ಯಾಂಕರ್ ಆಗಿ ಗಣಿ ಉದ್ಯಮಿಯಾಗಿ ಜಗತ್ತಿನಾದ್ಯಂತ ಮನ್ನಣೆ ಗಳಿಸಿದ್ದರು.
ಬ್ರೆಜಿಲ್ಲಿನ ಗಣಿ ಕಂಪನಿ ವೆಲ್ ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರೋಜರ್ ಅವರು ಸಂಸ್ಥೆಯನ್ನು 10 ವರ್ಷಗಳ ಕಾಲ ಸಮರ್ಥವಾಗಿ ಮುನ್ನಡೆಸಿದ್ದರು. 2011ರಲ್ಲಿ ರೊಜರ್ ವೆಲ್ ಕಂಪನಿಯಿಂದ ನಿವೃತ್ತರಾಗಿದ್ದರು.
Brazil plane crash: Vale ex-CEO Roger Agnelli among 7 dead https://t.co/euFqGCptCN #news #World pic.twitter.com/66AjleMamf
— Indian 24 News (@indian24news) March 20, 2016
ಉತ್ತರ ಸಾವೋ ಪಾಲೋದ ಕ್ಯೋಪೊ ಡಿ ಮಾರ್ತೆ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ನಿಯಂತ್ರಣ ಕಳೆದುಕೊಂಡಿದೆ.
REUTERS: Former Vale CEO Agnelli killed in Brazil plane crash https://t.co/JgXqNwApvm
— EveryThingUneed2Know (@Naija_Stuff) March 20, 2016
ಸಮೀಪದ ಕಟ್ಟಡವೊಂದರ ಮೇಲೆ ಅಪ್ಪಳಿಸಿದೆ. ಕಟ್ಟಡದಲ್ಲಿರುವವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ಪೈಲಟ್ ಹಾಗೂ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications