Breaking: ಸಲ್ಮಾನ್ ರಶ್ದಿ ಮೇಲಿನ ದಾಳಿ ಆರೋಪ ತಳ್ಳಿ ಹಾಕಿದ ಇರಾನ್
ನ್ಯೂಯಾರ್ಕ್, ಆಗಸ್ಟ್ 15: ನ್ಯೂಯಾರ್ಕ್ನಲ್ಲಿ ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಟೆಹ್ರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಇರಾನ್ ಸರ್ಕಾರ ನಿರಾಕರಿಸಿದೆ. ಈ ದಾಳಿಯ ಬಗ್ಗೆ ಮೊದಲ ಬಾರಿಗೆ ಇರಾನ್ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಪತ್ರಕರ್ತರನ್ನು ಉದ್ದೇಶಿಸಿದ ಮಾತನಾಡಿದ ಇರಾನ್ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಈ ವಿಷಯ ತಿಳಿಸಿದ್ದಾರೆ. "ಅಮೆರಿಕದಲ್ಲಿ ಸಲ್ಮಾನ್ ರಶ್ದಿ ಮೇಲಿನ ದಾಳಿಯ ಘಟನೆಯಲ್ಲಿ ಇರಾನ್ ಅನ್ನು ದೂಷಿಸುವ ಹಕ್ಕು ಯಾರಿಗೂ ಇಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಯಾರ್ಕ್ನಲ್ಲಿ ಲೇಖಕ ಸಲ್ಮಾನ್ ರಶ್ದಿ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ತಾವು ಮತ್ತು ತಮ್ಮ ಬೆಂಬಲಿಗರು ಸೇರಿದಂತೆ ಯಾರೊಬ್ಬರ ಮೇಲೆಯು ಆರೋಪವನ್ನು ಮಾಡುವಂತಿಲ್ಲ ಎಂದು ಕನಾನಿ ಸ್ಪಷ್ಟಪಡಿಸಿದ್ದಾರೆ.

ನ್ಯೂಯಾರ್ಕ್ನಲ್ಲಿ ಸಲ್ಮಾನ್ ರಶ್ದಿ ಮೇಲೆ ದಾಳಿ:
ಕಳೆದ ಆಗಸ್ಟ್ 12ರ ಶುಕ್ರವಾರ ಪಶ್ಚಿಮ ನ್ಯೂಯಾರ್ಕ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದ 75 ವರ್ಷದ ಸಲ್ಮಾನ್ ರಶ್ದಿ ಮೇಲೆ ಹಲ್ಲೆ ನಡೆಸಿದ್ದರು. ಚಾಕುವಿನಿಂದ ಇರಿತಕ್ಕೊಳಗಾದ ಅವರ ತೋಳು ಮತ್ತು ಕಣ್ಣಿಗೆ ತೀವ್ರ ಗಾಯಗಳಾಗಿದ್ದವು. ಒಂದು ಹಂತದಲ್ಲಿ ಕಣ್ಣನ್ನು ಕಳೆದುಕೊಳ್ಳುವ ಅಪಾಯವೂ ಇತ್ತು. ಇನ್ನು ಅವರ ಮೇಲೆ ದಾಳಿ ನಡೆಸಿದ ಆರೋಪಿ ಹಾದಿ ಮಾತರ್, ತಾವು ಯಾವುದೇ ರೀತಿ ತಪ್ಪು ಮಾಡಿಲ್ಲ ಎಂದು ತಮ್ಮ ವಕೀಲರ ಮೂಲಕ ವಾದ ಮಂಡಿಸಿದ್ದರು.
ಜೀವ ಬೆದರಿಕೆ ಎದುರಿಸುತ್ತಿದ್ದ ರಶ್ದಿ:
"ದಿ ಸಟಾನಿಕ್ ವರ್ಸಸ್"ನಿಂದಾಗಿ 30 ವರ್ಷಗಳಿಂದಲೂ ಪ್ರಶಸ್ತಿ ವಿಜೇತ ಲೇಖಕ ಸಲ್ಮಾನ್ ರಶ್ದಿ ಜೀವ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಇರಾನ್ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ, ಇವರ ಸಾವಿಗೆ ಒತ್ತಾಯಿಸಿ ಫತ್ವಾ ಹೊರಡಿಸಿದ್ದರು. 75 ವರ್ಷದ ಸಲ್ಮಾನ್ ರಶ್ದಿ ತಮ್ಮ ಬರಹಕ್ಕಾಗಿ ಹಲವು ಬಾರಿ ಜೀವ ಬೆದರಿಕೆಗಳನ್ನು ಎದುರಿಸಿದ್ದಾರೆ. ವಿಶೇಷವಾಗಿ 1980ರ ದಶಕದ ಉತ್ತರಾರ್ಧದಲ್ಲಿ ಅವರ 'ದಿ ಸಟಾನಿಕ್ ವರ್ಸಸ್' ಪುಸ್ತಕದಿಂದಾಗಿ ಬೆದರಿಕೆಗಳನ್ನು ಎದುರಿಸಿದ್ದರು. ಈ ಪುಸ್ತಕದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಧರ್ಮನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದನ್ನು ಇರಾನ್ನಲ್ಲಿ 1988 ರಿಂದ ನಿಷೇಧಿಸಲಾಗಿತ್ತು.
ರಶ್ದಿ ತಲೆಗೆ ಬೆಲೆ ಕಟ್ಟಿದ್ದ ಇರಾನ್ ನಾಯಕ:
ಇರಾನ್ನ ಉನ್ನತ ನಾಯಕನು ಅವರ ತಲೆಯ ಬೆಲೆಯನ್ನು ಕಟ್ಟಿದ್ದನು. ಆದರೆ, 1998ರ ಹೊತ್ತಿಗೆ ಇರಾನ್ ಸರ್ಕಾರವು ಆ 'ಫತ್ವಾ' ಅಥವಾ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿತು. ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಆಗಿರುವ ಸಲ್ಮಾನ್ ರಶ್ದಿ ಕಳೆದ 20 ವರ್ಷಗಳಿಂದ ಯುಎಸ್ನಲ್ಲಿ ವಾಸಿಸುತ್ತಿದ್ದಾರೆ. ಅವರ ಮೊದಲ ಕಾದಂಬರಿ 1975ರಲ್ಲಿ ಹೊರ ಬಂದಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications