12ನೇ ಬ್ರಿಕ್ಸ್ ಸಮ್ಮೇಳನದ ಒಂದೇ ವೇದಿಕೆಯಲ್ಲಿ ಮೋದಿ-ಜಿನ್ ಪಿಂಗ್
ನವದೆಹಲಿ, ನವೆಂಬರ್.16: ಭಾರತ-ಚೀನಾ ನಡುವಿನ ಲಡಾಖ್ ಗಡಿ ಸಂಘರ್ಷದ ನಡುವೆ 12ನೇ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಮಂಗಳವಾರ ಸಂಜೆ 4.30 ಗಂಟೆಗೆ ಬ್ರಿಕ್ಸ್ ರಾಷ್ಟ್ರಗಳ 12ನೇ ಸಮ್ಮೇಳನ ನಡೆಯುತ್ತಿರುವ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಾಹಿತಿ ನೀಡಿದೆ. ಬಹುಪಕ್ಷೀಯ ವ್ಯವಸ್ಥೆ, ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು, ಭಯೋತ್ಪಾದನೆ ನಿಗ್ರಹ, ವ್ಯಾಪಾರ, ಆರೋಗ್ಯ ಮತ್ತು ಇಂಧನಕ್ಕೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಚರ್ಚಿಸಲಿವೆ.
ಕಳೆದ ನವೆಂಬರ್ ತಿಂಗಳಿನಲ್ಲಿ ನಡೆದ ಶಾಂಘೈ ಸಹಕಾರಿ ಸಂಘಟನೆಯ ಸಭೆಯಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಒಂದೇ ವೇದಿಕೆ ಹಂಚಿಕೊಂಡಿದ್ದರು. ಅಂದಿನ ಶೃಂಗಸಭೆಯಲ್ಲಿ "ಪರಸ್ಪರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಪ್ರಮುಖ ತತ್ವಗಳನ್ನು ಮುಂದುವರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದರು.

ರಷ್ಯಾದಲ್ಲಿ ಬ್ರಿಕ್ಸ್ ಸಮ್ಮೇಳನ:
ರಷ್ಯಾ 2020ರ ಬ್ರಿಕ್ಸ್ ರಾಷ್ಟ್ರಗಳ 12ನೇ ಸಮ್ಮೇಳನದ ಅತಿಥೇಯವನ್ನು ವಹಿಸಿಕೊಂಡಿದೆ. ಭಾರತ-ಚೀನಾ ನಡುವಿನ ದ್ವಿಪಕ್ಷೀಯ ಮಾತುಕತೆ ಬಗ್ಗೆ ಪ್ರಶ್ನಿಸಿದ್ದಕ್ಕೆ ರಷ್ಯಾ ವಿದೇಶಾಂಗ ಸಚಿವ ಸೆರ್ಗಿಯ್ ರಯಾಬ್ಕೊವ್ ಪ್ರತಿಕ್ರಿಯೆ ನೀಡಿದ್ದಾರೆ. ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನವು ಅಂತಾರಾಷ್ಟ್ರೀಯ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ನಡೆಸುವುದಲ್ಲ. ಏಕರೂಪದಲ್ಲಿ ಆಲೋಚಿಸುವ ರಾಷ್ಟ್ರಗಳ ಪಾಲಿಗೆ ಉತ್ಸಾಹವನ್ನು ಹುಟ್ಟು ಹಾಕುತ್ತದೆ. ಸಕಾರಾತ್ಮಕ ಅಂಶಗಳ ಕುರಿತು ಫಲಿತಾಂಶವನ್ನು ಕಂಡುಕೊಳ್ಳುವುದಕ್ಕೆ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನವು ಸಹಕಾರಿಯಾಗಲಿದ್ದು, ಭಾರತ ಮತ್ತು ಚೀನಾಗಳು ಕೂಡಾ ಈ ಸಮ್ಮೇಳನದ ಲಾಭ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಬ್ರಿಕ್ಸ್ ರಾಷ್ಟ್ರಗಳು ಯಾವುವು:
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ಒಕ್ಕೂಟವನ್ನು ಬ್ರಿಕ್ಸ್ ಎಂದು ಹೆಸರಿಸಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications