ಶ್ರೀಲಂಕಾದಲ್ಲಿ ಇನ್ನುಮುಂದೆ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವಂತಿಲ್ಲ
ಕೊಲಂಬೋ, ಮಾರ್ಚ್ 13: ಶ್ರೀಲಂಕಾದ ಮುಸ್ಲಿಂ ಮೂಲಭೂತವಾದಕ್ಕೆ ತೆರೆ ಎಳೆಯಲು ಸ್ಥಳೀಯ ಸರ್ಕಾರ ಮುಂದಾಗಿದೆ. ಇದರ ಪ್ರಾಥಮಿಕ ಹಂತದ ಕ್ರಮವಾಗಿ, ಶ್ರೀಲಂಕಾದಲ್ಲಿ ಬುರ್ಖಾ ನಿಷೇಧಿಸಿ ಸಾವಿರಾರು ಇಸ್ಲಾಮಿಕ್ ಶಾಲೆಗಳನ್ನು ಮುಚ್ಚಲು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಶ್ರೀಲಂಕಾ ಸಾರ್ವಜನಿಕ ಭದ್ರತಾ ಸಚಿವ ಶರತ್ ವೀರಶೇಖರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ, ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಇಡೀ ಮುಖವನ್ನು ಮುಚ್ಚುವಂತೆ ಬುರ್ಖಾ ಧರಿಸುವುದನ್ನು ನಿಷೇಧಿಸಲು ನಿರ್ಧರಿಸಲಾಗಿದೆ.
ಈ ಹಿಂದೆ ಶ್ರೀಲಂಖಾದ ಮುಸ್ಲಿಂ ಮಹಿಳೆಯರು ಸಂಪೂರ್ಣ ಮುಖ ಮುಚ್ಚುವಂತೆ ಬುರ್ಖ ಧರಿಸಿರುವುದನ್ನು ನಾವು ನೋಡಿಲ್ಲ, ಆದರೆ ದೇಶದಲ್ಲಿ ಮೂಲಭೂತವಾದ ಹೆಚ್ಚುತ್ತಿರುವಂತೆ ಈ ಸಂಪೂರ್ಣ ಮುಖ ಮುಚ್ಚುವಂತೆ ಬುರ್ಖಾ ಧರಿಸಲಾಗುತ್ತಿದೆ. ಹೀಗಾಗಿ ಇದನ್ನು ನಿಷೇಧಿಸುವುದು ಅನಿವಾರ್ಯವಾಗಿದೆ.

2019ರಲ್ಲಿ ಚರ್ಚ್ ಮೇಲೆ ನಡೆದ ದಾಳಿಯಲ್ಲಿ 250 ಶ್ರೀಲಂಕಾ ಪ್ರಜೆಗಳು ಸಾವನ್ನಪ್ಪಿದ್ದರು, ಆಗಲೇ ಶ್ರೀಲಂಕಾದಲ್ಲಿ ತಾತ್ಕಾಲಿಕವಾಗಿ ಬುರ್ಖಾ ಧರಿಸುವುದನ್ನು ನಿಷೇಧಿಸಲಾಗಿತ್ತು.
ಬುರ್ಖಾ ನಿಷೇಧದ ಜತೆಗೆ ಸರ್ಕಾರ ಮೂಲಭೂತವಾದವನ್ನು ಪಸರಿಸುತ್ತಿರುವ ಸಾವಿರಾರು ಇಸ್ಲಾಮಿಕ್ ಸಂಸ್ಥೆಗಳನ್ನು ಮುಚ್ಚಿ ಎಲ್ಲರೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ.
ದೇಶದಲ್ಲಿ ತಮಗೆ ಬೇಕಾದ ಶಿಕ್ಷಣ ವ್ಯವಸ್ಥೆಯನ್ನು ಪಾಲಿಸಿಕೊಂಡು ಶಾಲೆಗಳನ್ನು ಆರಂಭಿಸಲು ಸಾಧ್ಯವಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications