Canada: ಅಮೆರಿಕದ ವಿರುದ್ಧ ರೊಚ್ಚಿಗೆದ್ದ ಕೆನಡಾ, ಹಲವು ಯೋಜನೆಗಳು ದಿಢೀರ್ ಕ್ಯಾನ್ಸಲ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಕೈಗೊಂಡಿರುವ ಕ್ರಮಗಳು ಜಾಗತಿಕ ಮಟ್ಟದಲ್ಲಿ ಭಾರಿ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಅದರಲ್ಲೂ ತೆರಿಗೆ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್ ಈಗ ಕೈಗೊಂಡಿರುವ ಕ್ರಮ ಸ್ವತಃ ಅಮೆರಿಕದ ಮಿತ್ರ ದೇಶಗಳು ಕೂಡ ತಿರುಗಿಬೀಳುವ ರೀತಿ ಮಾಡಿದೆ. ಹೀಗಿದ್ದಾಗಲೇ ಕೆನಡಾ ಕೂಡ ಸೇಡಿಗೆ ಸೇಡು ತೀರಿಸಿಕೊಳ್ಳಲು ಅಮೆರಿಕ ವಿರುದ್ಧ ಮಹತ್ವದ ಕ್ರಮಕ್ಕೆ ಆದೇಶ ನೀಡಿದೆ. ಇದು ಎರಡೂ ದೇಶಗಳ ನಡುವೆ ಸಂಬಂಧ ಹಾಳಾಗಿ ಹೋಗುವಂತೆ ಮಾಡಿದೆ.
ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡ್, ಪನಾಮ ವಿಚಾರದ ಬಗ್ಗೆ ಮಾತನಾಡಿ ವೈರಲ್ ಆಗಿದ್ದರು. ಆ ನಂತರ ಕೆನಡಾ ನೆಲದ ವಿಚಾರವನ್ನೂ ಪ್ರಸ್ತಾಪ ಮಾಡಿ ಇಡೀ ಕೆನಡಾ ದೇಶದ ನೆಲವನ್ನು ಅಮೆರಿಕಗೆ ಸೇರಿಸಿಕೊಳ್ಳುವ ಪ್ರಸ್ತಾಪ ಮಾಡಿದ್ದರು. ಇದಾದ ಬಳಿಕ ಕೆನಡಾ ಕೂಡ ಸರಿಯಾಗೇ ತಿರುಗೇಟು ನೀಡಿತ್ತು, ಅಲ್ಲಿಂದ ಇಬ್ಬರ ನಡುವೆ ದೊಡ್ಡ ಜಟಾಪಟಿ ಶುರುವಾಗಿತ್ತು. ಇದೀಗ ಕೆನಡಾ ಮೂಲಕ ಬರುವ ಎಲ್ಲಾ ವಸ್ತುಗಳಿಗೆ ಬರೋಬ್ಬರಿ ಶೇಕಡಾ 25 ರಷ್ಟು ಟ್ಯಾಕ್ಸ್ ಹಾಕುವ ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಕಿಚ್ಚು ಹೊತ್ತಿಸಿದ್ದು, ದೊಡ್ಡ ಗಲಾಟೆಗೆ ಕೂಡ ಕಾರಣವಾಗಿದೆ.

ಸೇಡಿಗೆ ಸೇಡು ತೀರಿಸಿಕೊಂಡ ಕೆನಡಾ!
ಅಂದಹಾಗೆ ಅಮೆರಿಕ ತಮ್ಮ ವಿರುದ್ಧ ತೆರಿಗೆ ಹೇರಿಕೆ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಕೆನಡಾ, ಭಾರಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಆ ಪ್ರಕಾರ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ಜೊತೆ ಮಾಡಿಕೊಂಡಿದ್ದ 100 ಮಿಲಿಯನ್ ಅಮೆರಿಕನ್ ಡಾಲರ್ ಒಪ್ಪಂದ ಮುರಿದು ಹಾಕಿ ಎಳ್ಳುನೀರು ಬಿಟ್ಟಿದ್ದು, ಮತ್ತೊಂದು ಕಡೆ ಅಮೆರಿಕಗೆ ಕೆನಡಾ ಸರಬರಾಜು ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲು ನಿರ್ಧಾರ ಮಾಡಿದೆ. ಈ ಮೂಲಕ ಅವರಿಗೆ ಕೂಡ ನೋವು ಗೊತ್ತಾಗಲಿ ಎಂದು ಗುಡುಗಿದೆ ಕೆನಡಾ. ಇನ್ನೊಂದು ಕಡೆ ಕೆನಡಾ ಘೋಷಿಸಿರುವ ಈ ನಿರ್ಧಾರ ಭವಿಷ್ಯದಲ್ಲಿ ಅಮೆರಿಕದ ಪ್ರಜೆಗಳಿಗೆ ಸಮಸ್ಯೆ ಮಾಡುವ ಮುನ್ಸೂಚನೆ ನೀಡಿದೆ.
-
2ನೇ ವಾರಕ್ಕೆ ಕಾಲಿಟ್ಟ ಯುದ್ಧ, ಶರಣಾಗುವ ತನಕ ಶಾಂತಿ ಇಲ್ಲ ಎಂದ ಅಮೆರಿಕ ಅಧ್ಯಕ್ಷರು | Operation Roaring Lion -
ಇರಾನ್ ನಂತರ ಕ್ಯೂಬಾ ದೇಶಕ್ಕೂ ಕಾದಿದೆಯಂತೆ ಗ್ರಹಚಾರ, ಅಮೆರಿಕ ಅಧ್ಯಕ್ಷ ಟ್ರಂಪ್ ಗರಂ | Operation Roaring Lion -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ











Click it and Unblock the Notifications