ಭಾರತ ವಿರೋಧಿ ಕೆನಡಾ ಕಡೆಯಿಂದ ಶುರುವಾಯ್ತು ಹೊಸ ಕಿರಿಕ್!
ಭಾರತ ಬಲಿಷ್ಠವಾಗಿ ಬೆಳೆದು ನಿಂತಿದೆ ಹೀಗಾಗಿಯೇ ಜಗತ್ತಿನಲ್ಲಿ ಭಾರತಕ್ಕೆ ಶತ್ರುಗಳು ಕೂಡ ಹೆಚ್ಚಾಗುತ್ತಿದ್ದಾರೆ. ಆದರೆ ಈ ಶತ್ರುಗಳನ್ನ ಹೇಗೆ ನಿಭಾಯಿಸಬೇಕು ಅನ್ನೋದು ಕೂಡ ಈಗ ಭಾರತಕ್ಕೆ ಚೆನ್ನಾಗಿ ಗೊತ್ತಾಗಿದೆ. ಆದರೆ ಕೆನಡಾಗೆ ಮಾತ್ರ ಬುದ್ಧಿಯೇ ಬರುವಂತೆ ಕಾಣ್ತಿಲ್ಲ. ಈಗಾಗಲೇ ಖಲಿಸ್ತಾನಿ ಉಗ್ರರಿಗೆ ಬೆಂಬಲ ನೀಡಿ ಸರಿಯಾಗೆ ತಿರುಗೇಟು ಅನುಭವಿಸಿದ್ದ ಇದೇ ಕೆನಡಾ, ಈಗ ಭಾರತದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡ್ತಿದೆ.
ಹೌದು ಕೆನಡಾ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಡೆಸಿದೆ ಎಂದು ಕೆನಡಾ ಭದ್ರತಾ ಇಲಾಖೆ ಬಹಿರಂಗ ಮಾಡಿದ ಗುಪ್ತಚರ ವರದಿಯಲ್ಲಿ ಉಲ್ಲೇಖ ಆಗಿದೆ. ಈ ಮೂಲಕ ಭಾರತ & ಕೆನಡಾ ನಡುವೆ ಮತ್ತೊಮ್ಮೆ ದೊಡ್ಡ ಕಾಡ್ಗಿಚ್ಚೇ ಹೊತ್ತಿಕೊಂಡಂತಿದೆ. ಅಷ್ಟಕ್ಕೂ 2019ರ ಫೆಡರಲ್ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಡೆಸಿತ್ತು ಎಂಬ ಆರೋಪ ಬಗ್ಗೆ ತನಿಖೆ ನಡೆಸಲು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಆದೇಶಿಸಿದ್ದರು. ಇದೇ ವಿಚಾರವಾಗಿ ಈಗ ಮತ್ತೊಂದು ಸ್ಫೋಟಕ ಸುದ್ದಿ ಹೊರಬಿದ್ದಿದೆ.

ಭಾರತ & ಕೆನಡಾ ಸಂಬಂಧಕ್ಕೆ ಹುಳಿ?
ಅಷ್ಟಕ್ಕೂ ಕೆನಡಾ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪ ಜಾಲಗಳು ಆಳವಾಗಿ ಅಂತರ್ಗತವಾಗಿವೆ ಮತ್ತು ಸರ್ಕಾರದ ಪ್ರತಿಯೊಂದು ಹಂತದಲ್ಲೂ ಕಾರ್ಯನಿರ್ವಹಿಸುತ್ತದೆ. ವಿದೇಶಿ ಹಸ್ತಕ್ಷೇಪವು ಕೆನಡಾ ಪ್ರಜಾಪ್ರಭುತ್ವವನ್ನ ತೀವ್ರವಾಗಿ ದುರ್ಬಲ ಮಾಡ್ತಿದೆ ಎಂದು ಕೂಡ ಇದೇ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಮೂಲಗಳನ್ನ ಉಲ್ಲೇಖಿಸಿ ಗ್ಲೋಬಲ್ ನ್ಯೂಸ್' ವರದಿಯನ್ನ ಪ್ರಕಟಿಸಿದೆ. ವಿದೇಶಿ ಹಸ್ತಕ್ಷೇಪದ ಜಾಲ ಕೆನಡಾದ್ಯಂತ ಹಾಗೂ ಸರ್ಕಾರದ ಎಲ್ಲಾ ಹಂತದಲ್ಲೂ ಸಕ್ರಿಯ ಆಗಿವೆ. ಇದರಲ್ಲಿ ಹಲವು ಜಾಲ, ಕೆನಡಾ ರಾಜಕೀಯ & ಸಾಮಾಜಿಕ ವ್ಯವಸ್ಥೆಯಲ್ಲೂ ಆಳವಾಗಿ ಬೇರೂರಿದೆ ಎಂದು ಆರೋಪ ಮಾಡಿದೆ ಈ ವರದಿ.
ಖಲಿಸ್ತಾನಿಗಳ ಪರ ಕೆನಡಾ ಬೆಂಬಲ
ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನನ್ನ 2023ರ ಜೂನ್ 18ರಂದು ಕೆನಡಾ ಸರ್ರೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಹೀಗೆ ಹಿಂಸಾಚಾರ & ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಕೊಲೆಯಾಗಿದ್ದ ನಿಜ್ಜರ್ನ ವಿರುದ್ಧ ಇತ್ತು. ಈ ಕೊಲೆಯನ್ನು ಭಾರತದ ಏಜೆಂಟ್ಗಳು ಮಾಡಿದ್ದಾರೆ ಎನ್ನುತ್ತಿದ್ದಾರೆ ಕೆನಡಾ ಪ್ರಧಾನಿ. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಇದು ಸಾಲದು ಎನ್ನುವಂತೆ ಇದೀಗ ಕೆನಡಾ ಚುನಾವಣೆಯ ವಿಚಾರದಲ್ಲೂ ಭಾರತ ಹಸ್ತಕ್ಷೇಪ ಮಾಡಿರುವ ಆರೋಪ ಮಾಡಿದೆ ಕೆನಡಾ. ಹೀಗಾಗಿ ಈಗ ಭಾರತ & ಕೆನಡಾ ಸಂಬಂಧ ಇನ್ನಷ್ಟು ಹಳಸುವ ಅಪಾಯ ಎದುರಾಗಿದೆ.

ಭಾರತದ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಯಾಗಿಸಬೇಕಿದ್ದ ಕೆನಡಾ ಮಾತ್ರ ಹಠ ಬಿಡುತ್ತಿಲ್ಲ ಅದ್ರಲ್ಲೂ ಕೆನಡಾ ಪ್ರಧಾನಿ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ಈಗ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಭಾರತ, ಕೆನಡಾ ಸಂಬಂಧ ಸಂಪೂರ್ಣ ಹಾಳಾಗಿ ಹೋಗುವ ಹಂತ ತಲುಪಿದೆ ಎನ್ನಲಾಗಿತ್ತು. ಆದರೆ ಸಂಬಂಧ ಸುಧಾರಣೆಗೆ ಇತರ ದೇಶಗಳು ಪ್ರಯತ್ನ ಆರಂಭಿಸಿವೆ. ಹೀಗೆ, ಹೊಸ ಮಾತುಕತೆ ಆರಂಭದ ಸಮಯದಲ್ಲೇ ಕೆನಡಾ ಸರ್ಕಾರದ ನಡೆ ಮತ್ತಷ್ಟು ತಿಕ್ಕಾಟಕ್ಕೆ ದಾರಿ ಮಾಡಿಕೊಡುತ್ತಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications