ಭಾರತ ವಿರೋಧಿ ಕೆನಡಾ ಕಡೆಯಿಂದ ಶುರುವಾಯ್ತು ಹೊಸ ಕಿರಿಕ್!
ಭಾರತ ಬಲಿಷ್ಠವಾಗಿ ಬೆಳೆದು ನಿಂತಿದೆ ಹೀಗಾಗಿಯೇ ಜಗತ್ತಿನಲ್ಲಿ ಭಾರತಕ್ಕೆ ಶತ್ರುಗಳು ಕೂಡ ಹೆಚ್ಚಾಗುತ್ತಿದ್ದಾರೆ. ಆದರೆ ಈ ಶತ್ರುಗಳನ್ನ ಹೇಗೆ ನಿಭಾಯಿಸಬೇಕು ಅನ್ನೋದು ಕೂಡ ಈಗ ಭಾರತಕ್ಕೆ ಚೆನ್ನಾಗಿ ಗೊತ್ತಾಗಿದೆ. ಆದರೆ ಕೆನಡಾಗೆ ಮಾತ್ರ ಬುದ್ಧಿಯೇ ಬರುವಂತೆ ಕಾಣ್ತಿಲ್ಲ. ಈಗಾಗಲೇ ಖಲಿಸ್ತಾನಿ ಉಗ್ರರಿಗೆ ಬೆಂಬಲ ನೀಡಿ ಸರಿಯಾಗೆ ತಿರುಗೇಟು ಅನುಭವಿಸಿದ್ದ ಇದೇ ಕೆನಡಾ, ಈಗ ಭಾರತದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡ್ತಿದೆ.
ಹೌದು ಕೆನಡಾ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಡೆಸಿದೆ ಎಂದು ಕೆನಡಾ ಭದ್ರತಾ ಇಲಾಖೆ ಬಹಿರಂಗ ಮಾಡಿದ ಗುಪ್ತಚರ ವರದಿಯಲ್ಲಿ ಉಲ್ಲೇಖ ಆಗಿದೆ. ಈ ಮೂಲಕ ಭಾರತ & ಕೆನಡಾ ನಡುವೆ ಮತ್ತೊಮ್ಮೆ ದೊಡ್ಡ ಕಾಡ್ಗಿಚ್ಚೇ ಹೊತ್ತಿಕೊಂಡಂತಿದೆ. ಅಷ್ಟಕ್ಕೂ 2019ರ ಫೆಡರಲ್ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ನಡೆಸಿತ್ತು ಎಂಬ ಆರೋಪ ಬಗ್ಗೆ ತನಿಖೆ ನಡೆಸಲು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಆದೇಶಿಸಿದ್ದರು. ಇದೇ ವಿಚಾರವಾಗಿ ಈಗ ಮತ್ತೊಂದು ಸ್ಫೋಟಕ ಸುದ್ದಿ ಹೊರಬಿದ್ದಿದೆ.

ಭಾರತ & ಕೆನಡಾ ಸಂಬಂಧಕ್ಕೆ ಹುಳಿ?
ಅಷ್ಟಕ್ಕೂ ಕೆನಡಾ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪ ಜಾಲಗಳು ಆಳವಾಗಿ ಅಂತರ್ಗತವಾಗಿವೆ ಮತ್ತು ಸರ್ಕಾರದ ಪ್ರತಿಯೊಂದು ಹಂತದಲ್ಲೂ ಕಾರ್ಯನಿರ್ವಹಿಸುತ್ತದೆ. ವಿದೇಶಿ ಹಸ್ತಕ್ಷೇಪವು ಕೆನಡಾ ಪ್ರಜಾಪ್ರಭುತ್ವವನ್ನ ತೀವ್ರವಾಗಿ ದುರ್ಬಲ ಮಾಡ್ತಿದೆ ಎಂದು ಕೂಡ ಇದೇ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಮೂಲಗಳನ್ನ ಉಲ್ಲೇಖಿಸಿ ಗ್ಲೋಬಲ್ ನ್ಯೂಸ್' ವರದಿಯನ್ನ ಪ್ರಕಟಿಸಿದೆ. ವಿದೇಶಿ ಹಸ್ತಕ್ಷೇಪದ ಜಾಲ ಕೆನಡಾದ್ಯಂತ ಹಾಗೂ ಸರ್ಕಾರದ ಎಲ್ಲಾ ಹಂತದಲ್ಲೂ ಸಕ್ರಿಯ ಆಗಿವೆ. ಇದರಲ್ಲಿ ಹಲವು ಜಾಲ, ಕೆನಡಾ ರಾಜಕೀಯ & ಸಾಮಾಜಿಕ ವ್ಯವಸ್ಥೆಯಲ್ಲೂ ಆಳವಾಗಿ ಬೇರೂರಿದೆ ಎಂದು ಆರೋಪ ಮಾಡಿದೆ ಈ ವರದಿ.
ಖಲಿಸ್ತಾನಿಗಳ ಪರ ಕೆನಡಾ ಬೆಂಬಲ
ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನನ್ನ 2023ರ ಜೂನ್ 18ರಂದು ಕೆನಡಾ ಸರ್ರೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಹೀಗೆ ಹಿಂಸಾಚಾರ & ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಕೊಲೆಯಾಗಿದ್ದ ನಿಜ್ಜರ್ನ ವಿರುದ್ಧ ಇತ್ತು. ಈ ಕೊಲೆಯನ್ನು ಭಾರತದ ಏಜೆಂಟ್ಗಳು ಮಾಡಿದ್ದಾರೆ ಎನ್ನುತ್ತಿದ್ದಾರೆ ಕೆನಡಾ ಪ್ರಧಾನಿ. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಇದು ಸಾಲದು ಎನ್ನುವಂತೆ ಇದೀಗ ಕೆನಡಾ ಚುನಾವಣೆಯ ವಿಚಾರದಲ್ಲೂ ಭಾರತ ಹಸ್ತಕ್ಷೇಪ ಮಾಡಿರುವ ಆರೋಪ ಮಾಡಿದೆ ಕೆನಡಾ. ಹೀಗಾಗಿ ಈಗ ಭಾರತ & ಕೆನಡಾ ಸಂಬಂಧ ಇನ್ನಷ್ಟು ಹಳಸುವ ಅಪಾಯ ಎದುರಾಗಿದೆ.

ಭಾರತದ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಯಾಗಿಸಬೇಕಿದ್ದ ಕೆನಡಾ ಮಾತ್ರ ಹಠ ಬಿಡುತ್ತಿಲ್ಲ ಅದ್ರಲ್ಲೂ ಕೆನಡಾ ಪ್ರಧಾನಿ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ಈಗ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಭಾರತ, ಕೆನಡಾ ಸಂಬಂಧ ಸಂಪೂರ್ಣ ಹಾಳಾಗಿ ಹೋಗುವ ಹಂತ ತಲುಪಿದೆ ಎನ್ನಲಾಗಿತ್ತು. ಆದರೆ ಸಂಬಂಧ ಸುಧಾರಣೆಗೆ ಇತರ ದೇಶಗಳು ಪ್ರಯತ್ನ ಆರಂಭಿಸಿವೆ. ಹೀಗೆ, ಹೊಸ ಮಾತುಕತೆ ಆರಂಭದ ಸಮಯದಲ್ಲೇ ಕೆನಡಾ ಸರ್ಕಾರದ ನಡೆ ಮತ್ತಷ್ಟು ತಿಕ್ಕಾಟಕ್ಕೆ ದಾರಿ ಮಾಡಿಕೊಡುತ್ತಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications