ಕೆನಡಾ: ಹೈಸ್ಕೂಲ್ ಮೇಲೆ ಗುಂಡಿನ ದಾಳಿ, ಶಂಕಿತ ಶೂಟರ್ ಸೇರಿ 10 ಸಾವು
ಕೊಲಂಬಿಯಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ನಗರದಲ್ಲಿ ಪ್ರೌಢಶಾಲೆಯಲ್ಲಿ ಮಂಗಳವಾರ ಜರುಗಿದ ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಶಂಕಿತ ಶೂಟರ್ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸರ್ಕಾರಿ ಏಜೆನ್ಸಿಯಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (RCMP) ಮಾಹಿತಿ ನೀಡಿದೆ.
ದಿಢೀರ್ ನಡೆದ ಈ ಗುಂಡಿನ ದಾಳಿಯಲ್ಲಿ ಟಂಬ್ಲರ್ ರಿಡ್ಜ್ ಮಾಧ್ಯಮಿಕ ಶಾಲೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿಯ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

25 ಮಂದಿ ಗಾಯಾಳು, ಇಬ್ಬರು ಸ್ಥಿತಿ ಚಿಂತಾಜನಕ
ಕೆನಡಾದ ಈ ಮಾಧ್ಯಮಿಕ ಶಾಲೆಯಲ್ಲಿನ ಈ ದಾಳಿಯಲ್ಲಿ ವೃತ್ತಿಪರ ಶೂಟರ್ಗಳು ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಅದರಲ್ಲಿ "ಗುಂಡು ಹಾರಿಸಿದ ವ್ಯಕ್ತಿಯೇ ಗಾಯಗೊಂಡು ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾರಣಾಂತಿಕ ಗಾಯಗಳಿಂದ ಅವರು ಬಳಲುತ್ತಿದ್ದು, ಸ್ಥಳೀಯ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಈಗಲೇ ಏನು ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಆರ್ಸಿಎಂಪಿ ಹೇಳಿದೆ.
3,000ಕ್ಕಿಂತ ಕಡಿಮೆ ಜನ ಇಲ್ಲಿ ವಾಸ
ಘಟನೆ ಬಳಕಿಗೆ ಬರುತ್ತಿದ್ದಂತೆ ರಕ್ಷಣೆಗೆ ಧಾವಿಸಿದ ಪೊಲೀಸರು ಶಾಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಭಾಗದಲ್ಲಿನ ನಾಗರಿಕರಿಗೆ, ಶಾಲೆಗಳೊಂದಿಗೆ ಪೊಲೀಸ್ ಸಿಬ್ಬಂದಿ ಪಡೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚಿನ ಅವಘಡ ಆಗದಂತೆ ನಿಗಾ ವಹಿಸಿದ್ದಾರೆ. ಈ ಟಂಬ್ಲರ್ ರಿಡ್ಜ್ ಪಟ್ಟಣವು ಕೆನಡಾದ ವ್ಯಾಂಕೋವರ್ನಿಂದ ಉತ್ತರಕ್ಕೆ 1,100 ಕಿಲೋ ಮೀಟರ್ ದೂರದಲ್ಲಿದ್ದು, ಬ್ರಿಟಿಷ್ ಕೊಲಂಬಿಯಾ ರಾಕಿ ಪರ್ವತಗಳ ತಪ್ಪಲಿನಲ್ಲಿದೆ. ಸುಮಾರು 3,000 ಕ್ಕಿಂತ ಕಡಿಮೆ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಇಂತಹ ಪ್ರದೇಶವನ್ನು ಆರೋಪಿಗಳು ಟಾರ್ಗೆಟ್ ಮಾಡಿ ಶಾಲೆ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಗುಂಡು ಹಾರಿಸಿದ ಮಹಿಳೆ ಎಂದು ಕೆನಡಾದ ಮಾಧ್ಯಮಗಳು ವರದಿ ಮಾಡಿವೆ. ಆದರೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಶಂಕಿತನ ಗುರುತಿನ ಪತ್ತೆ, ಇತರ ಮಾಹಿತಿ ನೀಡಲು ಆರ್ಸಿಎಂಪಿ ನಿರಾಕರಿಸಿತು. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿರುವ ಬಗ್ಗೆ ಮತ್ತು ಟಂಬ್ಲರ್ ರಿಡ್ಜ್ ನಿವಾಸಿಗಳಿಗೆ ಧೈರ್ಯ ನೀಡಿದ್ದಾಗಿ ಪೊಲೀಸರು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications