Canada suspends visa: ಭಾರತೀಯರಿಗೆ ವೀಸಾ ಸೇವೆ ತಡೆಹಿಡಿದ ಕೆನಡಾ- ಅಪಾಯದಲ್ಲಿವೆ 17,500 ವೀಸಾ ಅರ್ಜಿಗಳು
ಒಟ್ಟಾವ್, ಅಕ್ಟೋಬರ್ 20: ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷ ಮುಂದುವರಿದಿದೆ. ಭಾರತದಿಂದ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ಕೆನಡಾ ತೆಗೆದುಕೊಂಡಿದೆ. ಅದೇ ರೀತಿ ಚಂಡೀಗಢ, ಮುಂಬೈ ಮತ್ತು ಬೆಂಗಳೂರಿನಲ್ಲಿ ವೀಸಾ ಮತ್ತು ಕಾನ್ಸುಲರ್ ( ದೂತಾವಾಸ ) ಸೇವೆಗಳ ಕಾರ್ಯಾಚರಣೆಗಳಿಗೆ ತಡೆ ನೀಡಿದೆ.
ಕೆನಡಾ ಸರ್ಕಾರದ ಈ ನಿರ್ಧಾರವು ವಲಸೆ ಮತ್ತು ವೀಸಾ ಅರ್ಜಿ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಬಹುದು ಎಂದು ಸಚಿವ ಮಾರ್ಕ್ ಮಿಲ್ಲರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ, '41 ಕೆನಡಾದ ರಾಜತಾಂತ್ರಿಕರನ್ನು ಭಾರತದಿಂದ ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ.
'ಇದರ ಪರಿಣಾಮವಾಗಿ ಕೆನಡಾದ 21 ರಾಜತಾಂತ್ರಿಕರು ಮಾತ್ರ ಭಾರತದಲ್ಲಿ ಉಳಿಯಲಿದ್ದಾರೆ. ವಾಪಸ್ಸು ಕರೆಸಿಕೊಂಡಿರುವ ರಾಜತಾಂತ್ರಿಕರಲ್ಲಿ 27 ವಲಸೆ ಇಲಾಖೆಯ ಸಿಬ್ಬಂದಿಗಳು ಸೇರಿದ್ದಾರೆ' ಎಂದು ಜೋಲಿ ಹೇಳಿದ್ದಾರೆ.
ಸಿಬ್ಬಂದಿಯನ್ನು ಕಡಿಮೆ ಮಾಡುವುದರಿಂದ ಭಾರತದ ವೀಸಾ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. 17,500 ವೀಸಾ ಅರ್ಜಿಗಳು ಅಪಾಯದಲ್ಲಿ ನಿಲುಕಬಹುದು ಎಂದು ಹೇಳಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಕೆನಡಾ ವಲಸೆ ವಕೀಲ ರಿಚರ್ಡ್ ಕುರ್ಲ್ಯಾಂಡ್, ವೀಸಾ ವಿಚಾರವಾಗಿ ಕೆನಡಾವು ಪರ್ಯಾಯ ಪರಿಹಾರವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಕೆನಡಾ ವೀಸಾ ಸೇವೇ ಆನ್ಲೈನ್ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ಇತರ ದೇಶಗಳಲ್ಲಿನ ಕೆನಡಾದ ಅಧಿಕಾರಿಗಳಿಗೆ ಸೇವೆಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.
'ಭಾರತದ ಸಹಕಾರದ ಕೊರತೆಗೆ ಕೆನಡಾವು ಪರಿಹಾರವನ್ನು ಹೊಂದಿದೆ. ಕೆನಡಾ ಫೈಲ್ಗಳು ಅಥವಾ ಪಾಸ್ಪೋರ್ಟ್ಗಳನ್ನು ಪ್ರಕ್ರಿಯೆಗಾಗಿ ಪರ್ಯಾಯ ಸ್ಥಳಗಳಿಗೆ ರವಾನಿಸಬಹುದು' ಎಂದು ತಿಳಿಸಿದ್ದಾರೆ.
ಕೆನಡಾ ರಾಜತಾಂತ್ರಿಕರನ್ನು ಭಾರತದಿಂದ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಭಾರತ ಸರ್ಕಾರ ಹೇಳಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ 41 ರಾಜತಾಂತ್ರಿಕರನ್ನು ಕೆನಡಾ ವಾಪಸ್ ಕರೆಸಿಕೊಂಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ ಗುರುವಾರ ಈ ಬೆಳವಣಿಗೆಯನ್ನು ಬಹಿರಂಗಪಡಿಸಿದ್ದಾರೆ. ಕೆನಡಾದ ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿತಗೊಳಿಸುವಂತೆ ಭಾರತವು ಒತ್ತಡ ಹೇರಿತ್ತು. ಆದರೆ, ನಾವು ಇಲ್ಲಿರುವ ಭಾರತೀಯ ರಾಜತಾಂತ್ರಿಕರಿಗೆ ಯಾವುದೇ ಒತ್ತಡ ಹೇರುವುದಿಲ್ಲವೆಂದು ಅವರು ಹೇಳಿದ್ದಾರೆ.
ಸಿಖ್ ಉಗ್ರವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಇದಕ್ಕೆ ಆಕ್ರೋಶಗೊಂಡಿರುವ ಭಾರತ ಸರ್ಕಾರ ಕೆನಡಾ ವಿರುದ್ಧ ಹರಿಹಾಯ್ದಿದೆ.
ಜಸ್ಟಿನ್ ಟ್ರುಡೊ ಅವರದ್ದು ಅಸಂಬದ್ಧ ಹೇಳಿಕೆ ಎಂದು ಟೀಕಿಸಿದೆ. ಅಕ್ಟೋಬರ್ ಮುಗಿಯುದರೊಳಗೆ ಕೆನಡಾ ತನ್ನ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದೇ ಹೋದರೆ, ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭಾರತ ತಿಳಿಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications