ಸುಯೆಜ್ ಕಾಲುವೆ: 6 ದಿನಗಳ ಬಳಿಕ ಕೊನೆಗೂ ತೇಲಿದ ಹಡಗು
ಕೈರೋ, ಮಾರ್ಚ್ 29: ಕಳೆದ ಆರು ದಿನಗಳಿಂದ ಸುಯೆಜ್ ಕಾಲುವೆಯಲ್ಲಿ ಅಡ್ಡಲಾಗಿ ಸಿಲುಕಿಕೊಂಡು ಸಂಚಾರ ದಟ್ಟಣೆಗೆ ಕಾರಣವಾಗಿದ್ದ 'ಎವರ್ ಗ್ರೀನ್' ಕಂಟೇನರ್ ಹಡಗು ಸೋಮವಾರ ಕೊನೆಗೂ ಜಲಮಾರ್ಗದಲ್ಲಿ ಮರಳಿನ ರಾಶಿಯ ಹಿಡಿತದಿಂದ ಮುಕ್ತಗೊಳ್ಳುವಲ್ಲಿ ಯಶಸ್ವಿಯಾಗಿದೆ. ಹಡಗಿನಿಂದ ಉಂಟಾಗಿದ್ದ ಬಿಕ್ಕಟ್ಟು ಈಜಿಪ್ಟಿನ ಸಿಬ್ಬಂದಿಯ ಸತತ ಪ್ರಯತ್ನದ ಫಲವಾಗಿ ನಿವಾರಣೆಯಾಗಿದೆ.
ಹಡಗು ಸಿಲುಕಿಕೊಂಡಿರುವ ಭಾಗದಲ್ಲಿನ ಮರಳನ್ನು ತೆರವುಗೊಳಿಸಿ ಅದನ್ನು ಮತ್ತೆ ತೇಲುವಂತೆ ಮಾಡುವ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿರುವುದಾಗಿ ಸುಯೆಜ್ ಕಾಲುವೆ ಪ್ರಾಧಿಕಾರ ತಿಳಿಸಿತ್ತು. ಹಡಗನ್ನು ಭಾಗಶಃ ಹೂಳಿನಿಂದ ಮುಕ್ತಗೊಳಿಸಲಾಗಿದ್ದು, ಅದನ್ನು ನೇರಗೊಳಿಸಲು ಪ್ರಯತ್ನ ನಡೆಸಲಾಗಿತ್ತು.

ಕಳೆದ ಆರು ದಿನಗಳಿಂದ ಸುಮಾರು 450 ಹಡಗುಗಳು ಮುಂದೆ ಸಾಗಲಾಗದೆ ಸಂಚಾರ ದಟ್ಟಣೆ ಉಂಟಾಗಿದೆ. ಇಷ್ಟು ಹಡಗುಗಳನ್ನು ಸತತವಾಗಿ ಈ ಕಿರಿದಾದ ಮಾರ್ಗದ ಮೂಲಕ ಕಳುಹಿಸುವುದು ಕಷ್ಟಸಾಧ್ಯ. ಹೀಗಾಗಿ ಸಂಪೂರ್ಣ ಸಂಚಾರ ಸಹಜ ಸ್ಥಿತಿಗೆ ಬರಲು ಎಷ್ಟು ಸಮಯ ಬೇಕಾಗಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
BREAKING : EVER GIVEN ship has been UNSTUCK & Moving into #Suez Canal after 6 Days!!
— Joyce Karam (@Joyce_Karam) March 29, 2021
Egyptian crew managed to float it moments ago. It’s 5:42 am there: pic.twitter.com/GoMlYjQerL
ಹಡಗನ್ನು ಮರಳಿನಿಂದ ಮುಕ್ತಗೊಳಿಸಿ ಪುನಃ ತೇಲುವಂತೆ ಮಾಡಲು 18 ಮೀಟರ್ ಆಳದವರೆಗೆ 27,000 ಕ್ಕೂ ಅಧಿಕ ಕ್ಯೂಬಿಕ್ ಮರಳು ತೆಗೆಯಲಾಗಿದೆ. ಮರಳು ತೆರವುಗೊಳಿಸಿ ಹಡಗನ್ನು ಜಲಮಾರ್ಗದೊಳಗೆ ಮರಳಿಸಲು ಮಂಗಳವಾರದ ಒಳಗೆ ಸಾಧ್ಯವಾಗದೆ ಹೋದರೆ ಹಡಗಿನಿಂದ ಸರಕುಗಳನ್ನು ಇಳಿಸುವ ಕಾರ್ಯ ಆರಂಭಿಸಲು ತೀರ್ಮಾನಿಸಲಾಗಿತ್ತು. ಹಡಗಿನ ಮುಂಭಾಗ ಹಾನಿಗೊಳಗಾಗಿದೆ. ಹೀಗಾಗಿ ಹಡಗು ಸಹಜ ಸಂಚಾರಕ್ಕೆ ಅನುಕೂಲಕರ ಸ್ಥಿತಿಯಲ್ಲಿದೆಯೇ ಎನ್ನುವುದು ಖಚಿತವಾಗಿಲ್ಲ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications