ಉದ್ಯೋಗಿಗಳನ್ನು ಏಕೆ ವಜಾಗೊಳಿಸಿದೆ; ಕಣ್ಣೀರು ಹಾಕಿದ ಸಿಇಓ ವಾಲೇಕ್!
ನವದೆಹಲಿ, ಆಗಸ್ಟ್ 10: ಖಾಸಗಿ ಕಂಪನಿಗಳು ಇತ್ತೀಚಿಗೆ ಎಲ್ಲದಕ್ಕೂ ಸಾಮಾಜಿಕ ಮಾಧ್ಯಮಗಳ ಮೇಲೆ ಅವಲಂಬಿತವಾಗಿವೆ. ಇಂಥದರ ಮಧ್ಯೆ ಸಾರ್ವಜನಿಕ ವೇದಿಕೆಯಲ್ಲಿ ತನ್ನ ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ ಕಂಪನಿಯ ಸಿಇಓ ಘೋಷಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ.
ಹೈಪರ್ಸೋಶಿಯಲ್ನ ಸಿಇಒ ಬ್ರಾಡೆನ್ ವಾಲೇಕ್ ಅವರು ಅಳುವ ಸೆಲ್ಫಿಯೊಂದನ್ನು ಪೋಸ್ಟ್ ಮಾಡಿದ್ದಾರೆ. ಸೆಲ್ಫಿ ವಿಡಿಯೋದಲ್ಲಿ ಅವರು ತಮ್ಮ ಕೆಲವು ಉದ್ಯೋಗಿಗಳನ್ನು ಏಕೆ ಕೆಲಸದಿಂದ ತೆಗೆದುಹಾಕಬೇಕಾಯಿತು ಎಂದು ವಿವರಿಸಿದರು. ಅವರ ಪೋಸ್ಟ್ ಅನ್ನು ಆನ್ಲೈನ್ನಲ್ಲಿ ಅನೇಕರು ಅಸಹ್ಯಕರ ಎಂದು ಟೀಕಿಸಿದ್ದಾರೆ.
ತಮ್ಮ ಮುಖ್ಯ ಸೇವೆಗಳ ಮಾರಾಟವನ್ನು ನಿಲ್ಲಿಸಲು ನಿರ್ಧರಿಸಿದ್ದರು. ಇದರ ಜೊತೆಗೆ ಹೊಸ ಸೇವೆಯತ್ತ ಗಮನ ಹರಿಸಲು ಪ್ರಾರಂಭಿಸಿದ್ದರಿಂದ ಕಾರ್ಮಿಕರನ್ನು ವಜಾಗೊಳಿಸಲಾಗಿದೆ ಎಂದು ಬ್ರಾಡೆನ್ ವಾಲೇಕ್ ತಮ್ಮ ಸೆಲ್ಫಿ ವಿಡಿಯೋದಲ್ಲಿ ಹೇಳಿದ್ದಾರೆ.

ಎಲ್ಲಾ ಸಿಇಓಗಳು ಕಲ್ಲು ಹೃದಯದವರಲ್ಲ: "ಪ್ರತಿಯೊಬ್ಬ ಸಿಇಒಗಳು ಕಲ್ಲು ಹೃದಯದವರಲ್ಲ, ಅವರು ಜನರನ್ನು ಕೆಲಸದಿಂದ ತೆಗೆದು ಹಾಕಬೇಕಾದಾಗ ಯಾವುದೇ ಕಾಳಜಿ ವಹಿಸುವುದಿಲ್ಲ. ಆದರೆ ಜನರು ಇದನ್ನು ನೋಡಬೇಕೆಂದು ನಾನು ಬಯಸುತ್ತೇನೆ. ನನ್ನ ಉದ್ಯೋಗಿಗಳನ್ನು ನಾನು ಎಷ್ಟರ ಮಟ್ಟಿಗೆ ಪ್ರೀತಿಸುತ್ತೇನೆ ಎಂದು ಅವರು ಅರಿತುಕೊಳ್ಳಬೇಕು," ಎಂದು ವಾಲೇಕ್ ತಮ್ಮ ವಿಡಿಯೋದಲ್ಲಿ ಹೇಳಿದ್ದಾರೆ.
"ನನ್ನ ಉದ್ಯೋಗಿಗಳನ್ನು ನಾನು ಪ್ರೀತಿಸುತ್ತೇನೆ ಎಂದು ಹೇಳುವುದು ವೃತ್ತಿಪರವಲ್ಲ ಎಂದು ನನಗೆ ತಿಳಿದಿದೆ. ಆದರೆ ನನ್ನ ಹೃದಯದಿಂದ ಎಷ್ಟು ಉತ್ತಮನಾಗಿದ್ದೇನೆ ಎಂಬುದನ್ನು ಅವರು ಅರಿತುಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಪ್ರತಿಯೊಂದೂ. ಒಂದೊಂದು ಕಥೆ. ಅವರನ್ನು ನಗಿಸುವ ಪ್ರತಿಯೊಂದು ವಿಷಯವೂ ಅವರನ್ನು ಅಳುವಂತೆ ಮಾಡುವ ಪ್ರತಿಯೊಂದು ವಿಷಯವೂ. ಅವರ ಕುಟುಂಬಗಳು. ಅವರ ಸ್ನೇಹಿತರು. ಅವರ ಹವ್ಯಾಸಗಳು," ಎಂದು ಹೇಳಿದ್ದಾರೆ.
ಕಣ್ಣೀರು ಹಾಕುವ ವಿಡಿಯೋಗೆ ಆಕ್ರೋಶ: ಈ ಪೋಸ್ಟ್ ಸಾಕಷ್ಟು ಗಮನ ಸೆಳೆಯಿತು. ಆದಾಗ್ಯೂ, ಅವರು ಪೋಸ್ಟ್ ಮಾಡಿದ ಅಳುವ ಸೆಲ್ಫಿಗೆ ಹೆಚ್ಚಿನ ಜನರು ಕೋಪಗೊಂಡಿದ್ದಾರೆ. "ನೀವು ಅಳುತ್ತಿರುವ ಚಿತ್ರವನ್ನು ಏಕೆ ಪೋಸ್ಟ್ ಮಾಡುತ್ತೀರಿ? ಇದು ನಿಮಗಾಗಿ ಅಥವಾ ಅವರಿಗಾಗಿ?" ಎಂದು ಪ್ರಶ್ನೆ ಮಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications