ಕೆನಾಡದಲ್ಲಿ ಕನ್ನಡದ ಕಂಪು: ಕರ್ನಾಟಕ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ, ವಿಡಿಯೋ ಇಲ್ಲಿದೆ
Kannada Speech in Canada Parliament: ಕರ್ನಾಟಕದಲ್ಲಿ ಪರಭಾಷಿಗರ ದಬ್ಬಾಳಿಕೆ ಹೆಚ್ಚಾಗಿಬಿಟ್ಟಿದೆ. ಅದು ಹೋಗಲಿ ಇಲ್ಲಿನ ಕೆಲವು ಮಂದಿಯೇ ಅವರ ತಾಳಕ್ಕೆ ಕುಣಿಯುತ್ತಾ ತಾಯ್ನಾಡಿನ ಭಾಷೆಯನ್ನೇ ಅಪಮಾನಿಸುತ್ತಿರುವ ಘಟನೆಗಳು ನಡೆಯುತ್ತಲೇ ಇವೆ. ಈ ನಡುವೆಯೇ ಕೆನಾಡದ ಸಂಸತ್ನಲ್ಲಿ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಳಿಕ ಭಾರತದ ಮೂಲದವರೊಬ್ಬರು ರಾಜ್ಯದ ಬಗ್ಗೆ ಅಭಿಮಾನದಿಂದ ಮಾತನಾಡಿ ಗಮನ ಸೆಳೆದಿದ್ದಾರೆ.
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹಠಾತ್ ರಾಜೀನಾಮೆ ಹಿನ್ನೆಲೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ. ಭಾರತ ಮೂಲದ ಚಂದ್ರ ಆರ್ಯ ಅವರು ಇದೀಗ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಅವರು ಅಲ್ಲಿನ ಸಂಸತ್ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ್ದು, ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಪತ್ರಕರ್ತೆ ಸ್ಮೀತಾ ಪ್ರಕಾಶ್ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭಾರತ ಮೂಲದ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಕನ್ನಡದಲ್ಲಿಯೇ ಮಾತನಾಡಿರುವುದು ವಿಶೇಷವಾಗಿದೆ. ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಚಂದ್ರ ಆರ್ಯ ಹೇಳಿದ್ದೇನು?: "ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು 7 ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ. ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾದ ಈ ಸಂಸತ್ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು" ಎಂದು ಹೇಳಿದ್ದಾರೆ.
ಅಲ್ಲದೆ, "ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ.ರಾಜ್ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಕರುನಾಡ ಜನರ ಮನ ಗೆದ್ದಿದ್ದಾರೆ. ಇನ್ನು ಕೆನಡಾಕ್ಕೆ ವಲಸೆ ಹೋಗುವ ಮೊದಲು ಇವರು ಧಾರವಾಡಲ್ಲಿ ಎಂಬಿಎ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Chandra Arya throws in his hat for the nomination to be Prime Minister of Canada. Speaks in Kannada in the Canada House. Arya is native of Tumkur district, Karnataka. Got his MBA from Dharwad before immigrating to Canada. pic.twitter.com/OBymUmucme
— Smita Prakash (@smitaprakash) January 17, 2025
ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಮಾಡುವ, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನ ಗುರುತಿಸುವ ಭರವಸೆ ನೀಡುವ ಅಭಿಯಾನದೊಂದಿಗೆ ಲಿಬರಲ್ ನಾಯಕತ್ವಕ್ಕಾಗಿ ಸ್ಪರ್ಧಿಸುವುದಾಗಿ ಈ ಹಿಂದೇ ಹೇಳಿದ್ದರು. 2040ರಲ್ಲಿ ನಿವೃತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು ಚಂದ್ರ ಆರ್ಯ ಭರವಸೆಗಳನ್ನು ಈಗಾಗಲೇ ನೀಡಿದ್ದರು ಎಂದು ತಿಳಿದುಬಂದಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications