ಚಾರ್ಲ್ಸ್ ಟನ್ ಶೂಟೌಟ್: ದುಷ್ಕರ್ಮಿ ಬಲಿ, ಒತ್ತೆಯಾಳುಗಳು ಸುರಕ್ಷಿತ
ಅಮೆರಿಕದ ಚಾರ್ಲ್ಸ್ ಟನ್ ರೆಸ್ಟೋರೆಂಟ್ ನಲ್ಲಿ ಗುಂಡಿನ ದಾಳಿ. ವ್ಯಕ್ತಿಯೊಬ್ಬನಿಂದ ಮತ್ತೊಬ್ಬನ ಹತ್ಯೆ, ಉಳಿದವರ ಒತ್ತೆಯಾಳು ಪ್ರಕರಣ. ಪೊಲೀಸರಿಂದ ದುಷ್ಕರ್ಮಿ ಶೂಟೌಟ್, ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆ.
ಚಾರ್ಲ್ಸ್ ಟನ್ (ಅಮೆರಿಕ), ಆಗಸ್ಟ್ 25: ಇಲ್ಲಿನ ದಕ್ಷಿಣ ಕರೊಲಿನಾದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯೊಬ್ಬ ತನ್ನ ಸಹೋದ್ಯೋಗಿಯನ್ನು ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದು, ಉಳಿದ ಸಿಬ್ಬಂದಿಯನ್ನು ರೆಸ್ಟೋರೆಂಟ್ ನೊಳಗೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಘಟನೆ ಕೊನೆಗೂ ಅಂತ್ಯಗೊಂಡಿದೆ.
ಘಟನೆ ಭಾರತೀಯ ಕಾಲಮಾನದ ಪ್ರಕಾರ, ಗುರುವಾರ ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಒಬ್ಬ ಅಸುನೀಗಿದ್ದ. ಪೊಲೀಸರು ಸತತವಾಗಿ ಸಂಧಾನಕ್ಕೆ ಯತ್ನಿಸಿದರೂ, ಆ ಕುಕೃತ್ಯ ಎಸಗಿದ್ದ ವ್ಯಕ್ತಿ ತನ್ನ ಮನಸ್ಸನ್ನು ಬದಲಾಯಿಸದ ಹಿನ್ನೆಲೆಯಲ್ಲಿ ಹಾಗೂ ಇತರರ ಜೀವಕ್ಕೂ ಬೆದರಿಕೆಯೊಡ್ಡಿದ್ದ ಕಾರಣದಿಂದಾಗಿ, ಆ ವ್ಯಕ್ತಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಆತನನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ವಿವರಣೆ ನೀಡಿರುವ ಚಾರ್ಲ್ಸ್ ಟನ್ ಪೊಲೀಸ್ ಇಲಾಖೆಯ ಹಂಗಾಮಿ ಮುಖ್ಯಸ್ಥ ಜೆರೋಮ್ ಟೇಲರ್ ಅವರು, ''ದುಷ್ಕೃತ್ಯ ಎಸಗಿದ್ದ ವ್ಯಕ್ತಿಯನ್ನು ಶೂಟೌಟ್ ಮಾಡಿ ಕೊಲ್ಲಲಾಗಿದ್ದು, ಎಲ್ಲಾ ಒತ್ತೆಯಾಳುಗಳನ್ನೂ ರೆಸ್ಟೋರೆಂಟ್ ನಿಂದ ಸುರಕ್ಷಿತವಾಗಿ ಹೊರತರಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಯಾಗಬೇಕಿದ್ದು, ಶೀಘ್ರದಲ್ಲೇ ದುಷ್ಕೃತ್ಯ ಎಸಗಿದ ವ್ಯಕ್ತಿಯ ಮಾಹಿತಿ ಕೆದಕಲಾಗುವುದು'' ಎಂದು ತಿಳಿಸಿದರು. ಇದೇ ವೇಳೆ, ಇದು ಭಯೋತ್ಪಾಕರ ಕೃತ್ಯವಲ್ಲ ಎಂದು ಸ್ಪಷ್ಟನೆ ನೀಡಿರುವ ಪೊಲೀಸರು, ಇದು ಜನಾಂಗೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಅಪರಾಧವಿರಬಹುದೆಂದು ಅನುಮಾನ ಪಟ್ಟಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications