ಸ್ವಿಟ್ಜರ್ಲೆಂಡ್ ನಲ್ಲಿ ಮಿಂಚಿನ ಸಂಚಾರ ನಡೆಸಿದ ಸಿಎಂ ಯಡಿಯೂರಪ್ಪ
ದಾವೊಸ್ (ಸ್ವಿಟ್ಜರ್ಲ್ಯಾಂಡ್), ಜನವರಿ 20: ಕರ್ನಾಟಕಕ್ಕೆ ಜಾಗತಿಕ ಹೂಡಿಕೆದಾರರನ್ನು ಸೆಳೆಯಲು ಸ್ವಿಟ್ಜರ್ಲ್ಯಾಂಡ್ ನ ದಾವೂಸ್ ಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಲ್ಲಿ ಮಿಂಚಿನ ಸಂಚಾರ ನಡೆಸಿ, ಯುರೋಪ್ ಹೂಡಿಕೆದಾರರ ಗಮನ ಸೆಳೆದಿದ್ದಾರೆ.
ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿದ್ದಾರೆ.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಅವರು ಮುಖ್ಯಮಂತ್ರಿ ಅವರಿಗೆ ಸಾತ್ ಕೊಟ್ಟಿದ್ದಾರೆ.

ಕರ್ನಾಟಕ ಪೆವಿಲಿಯನ್ ಉದ್ಘಾಟನೆ
ದಾವೊಸ್ ನಲ್ಲೆ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟನೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸಾನ್ಮೆಝ್ ಅವರು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು.

ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ
ಕರ್ನಾಟಕ ರಾಜ್ಯವು ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಮೊರಾಟ್ ಸಾನ್ಮೆಝ್ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಕೇಂದ್ರವನ್ನು ಸ್ಥಾಪಿಸುವ ಭರವಸೆ ನೀಡಿದರು. ನಂತರ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು ಸುಲಲಿತ ವಹಿವಾಟು ನಡೆಸಲು ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಆಸಕ್ತಿ ವಹಿಸಿದೆ
ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ಮುಂಚೂಣಿಗೆ ಬರಲು ನೆರವಾಗುವ ಅಧ್ಯಯನಗಳನ್ನು ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ಹೂಡಿಕೆದಾರರಿಗೆ ಸಿಎಂ ಯಡಿಯೂರಪ್ಪ ತಿಳಿಸಿದರು.

ವರ್ಲ್ಡ್ ಎಕನಾಮಿಕ್ ಫೋರಂ 2020ರ
ಸುಸ್ಥಿರ ಕೈಗಾರಿಕೆಗಳನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯವು ವರ್ಲ್ಡ್ ಎಕನಾಮಿಕ್ ಫೋರಂ 2020ರ ಗುರಿ ಸಾಧನೆಗೆ ಸಕ್ರಿಯವಾಗಿ ಶ್ರಮಿಸಲಿದೆ. ಭಾರತದ ಪ್ರಮುಖ ಕೈಗಾರಿಕಾ ರಾಜ್ಯವಾಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ರಾಜ್ಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications