ಜಾಗತಿಕ ಉಗ್ರರ ಪಟ್ಟಿಗೆ ಅಜರ್ ಹೆಸರು ಸೇರಿಸಲು ಚೀನಾ ಅಡ್ಡಗಾಲು
ಬೀಜಿಂಗ್, ಫೆಬ್ರವರಿ 15: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ದಾಳಿಯ ಹೊಣೆಯನ್ನು ಜೈಷ್-ಎ-ಮೊಹಮ್ಮದ್ ಸಂಘಟನೆ ಹೊತ್ತುಕೊಂಡಿದೆ. 44 ಯೋಧರು ಹುತಾತ್ಮರಾದ ಈ ಘಟನೆಯನ್ನು ಚೀನಾ ಖಂಡಿಸಿದೆ.
ಕಾಶ್ಮೀರದಲ್ಲಿ ಆತ್ಮಾಹುತಿ ಉಗ್ರರ ದಾಳಿ ನಡೆದಿರುವುದನ್ನು ಚೀನಾ ತೀವ್ರವಾಗಿ ಖಂಡಿಸುತ್ತಿದೆ. ಹುತಾತ್ಮ ಯೋಧರ ಕುಟುಂಬಕ್ಕೆ ನಮ್ಮ ಸಂತಾಪವಿದೆ. ಗಾಯಗೊಂಡವರು ಗುಣಮುಖರಾಗಲಿ ಎಂದು ಹಾರೈಸುತ್ತೇವೆ ಎಂದು ಚೀನಾದ ವಿದೇಶಾಂಗ ಖಾತೆ ವಕ್ತಾರ ಗೆಂಗ್ ಶುವಾಂಗ್ ಹೇಳಿದ್ದಾರೆ.
ಆದರೆ, ಜೈಷ್ ಎ ಮೊಹಮ್ಮದ್ ಸಂಘಟನೆಯ ನಾಯಕ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿದೆ.

ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯಿಂದ ನಿಷೇಧ ಹೇರುವಂತೆ ಮಾಡುವ ಭಾರತದ ಪ್ರಯತ್ನಕ್ಕೆ ಚೀನಾ ಇದಕ್ಕೂ ಮುನ್ನ ಮೂರು ಬಾರಿ ಅಡ್ಡಿಪಡಿಸಿತ್ತು. ಪಾಕಿಸ್ತಾನ ಬೆಂಬಲಿತ ಜೈಷ್ ಎ ಮೊಹಮ್ಮದ್ ಸಂಘಟನೆಯ ನಾಯಕ ಮಸೂದ್ ಅಜರ್ ಗೆ ನಿರಂತರವಾಗಿ ಚೀನಾ ಬೆಂಬಲ ಸಿಗುತ್ತಿದೆ.
ವಿಶ್ವಸಂಸ್ಥೆಯು ನಿಷೇಧಿತ ಉಗ್ರರ ಪಟ್ಟಿಯನ್ನು ತಯಾರಿಸುವ ವಿಚಾರದಲ್ಲಿ ಈಗಾಗಲೇ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದಲೇ ತೀವ್ರ ಆಕ್ಷೇಪವಿದೆ. ಹಾಗಾಗಿ, ಚೀನಾ ದೇಶವು ಈ ವಿಚಾರದಲ್ಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಹೇಳಿದ್ದಾರೆ.
ಅಜರ್ ಮೇಲೆ ನಿಷೇಧ ಹೇರಬೇಕೆಂದು ವಿಶ್ವಸಂಸ್ಥೆಯನ್ನು ಭಾರತ ಆಗ್ರಹಿಸುತ್ತಿದೆ. ಕಳೆದ ವರ್ಷ ನಡೆದಿದ್ದ ಪಠಾಣ್ ಕೋಟ್ ಉಗ್ರರ ದಾಳಿಯ ಪ್ರಮುಖ ರೂವಾರಿಯೂ ಆಗಿರುವ ಮಸೂದ್ ಗೆ ಅದೇ ಪ್ರಕರಣದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ನಿಷೇಧ ಹೇರುವಂತೆ ಭಾರತ ವಿಶ್ವಸಂಸ್ಥೆಯನ್ನು ಕೋರಿದೆ.
ವಿಶ್ವಸಂಸ್ಥೆಯ 1267 ಭದ್ರತಾ ಸಮಿತಿಯ ಮುಂದೆ ಈ ವಿಚಾರ ಚರ್ಚೆಗೆ ಬಂದಾಗ, ಭಾರತದ ಬೇಡಿಕೆಗೆ ವಿಶ್ವ ಸಂಸ್ಥೆಯ ಉಳಿದ ಸದಸ್ಯ ರಾಷ್ಟ್ರಗಳ ಬೆಂಬಲ ಬೇಕಾಗುತ್ತದೆ. ಭಾರತದ ಬೇಡಿಕೆಗೆ ಪಾಕಿಸ್ತಾನ, ಚೀನಾ ಪ್ರತಿರೋಧ ಒಡ್ಡುತ್ತಿದೆ. ಸಂಸತ್ ದಾಳಿ, ಪಠಾಣ್ ಕೋಟ್ ದಾಳಿ ರೂವಾರಿ ಮೌಲನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕನಾಗಿ ಘೋಷಿಸಬೇಕು ಎಂಬ ಭಾರತದ ಬೇಡಿಕೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಎರಡು ವರ್ಷಗಳ ಹಿಂದೆ ಬೆಂಬಲ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications