ಚೀನಾದ ಕ್ಸಿಂಜಿಯಾಂಗ್ನಲ್ಲಿ ರಂಜಾನ್ ಉಪವಾಸಕ್ಕೆ ನಿಷೇಧ
ಬೀಜಿಂಗ್, ಮೇ 3: ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಸಿಂಜಿಯಾಂಗ್ ಪ್ರದೇಶದಲ್ಲಿ ರಂಜಾನ್ ಮಾಸದಲ್ಲಿ ನಾಗರಿಕ ಸೇವಾ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪವಾಸ ಕೈಗೊಳ್ಳುವುದನ್ನು ನಿಷೇಧಿಸಿದೆ. ಈ ಮಾಸದಲ್ಲಿ ರೆಸ್ಟೋರೆಂಟ್ಗಳು ತೆರೆದಿರುವಂತೆ ಆದೇಶಿಸಿದೆ.
ರಂಜಾನ್ ಪವಿತ್ರ ಮಾಸದಲ್ಲಿ ಮುಸ್ಲಿಮರು ಧಾರ್ಮಿಕ ಆಚರಣೆಯಾಗಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಕೈಗೊಳ್ಳುತ್ತಾರೆ. ಇದು ಎಲ್ಲೆಡೆ ಗುರುವಾರದಿಂದ ಆರಂಭವಾಗಿದೆ. ಆದರೆ, ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹಲವು ವರ್ಷಗಳಿಂದಲೂ ಉಯಿಘುರ್ ಮುಸ್ಲಿಂ ಸಮುದಾಯದ ಬಾಹುಳ್ಯ ಇರುವ ಕ್ಸಿಂಜಿಯಾಂಗ್ ಪ್ರದೇಶದಲ್ಲಿ ರಂಜಾನ್ ಆಚರಣೆಯ ವೇಳೆ ನಿರ್ಬಂಧಗಳನ್ನು ವಿಧಿಸುತ್ತಿದೆ.
ರಂಜಾನ್ ಸಂದರ್ಭದಲ್ಲಿ ಎಂದಿನಂತೆಯೇ ಅಹಾರ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ಕ್ಸಿಂಜಿಯಾಂಗ್ ಪ್ರಾಂತ್ಯದ ಆಹಾರ ಮತ್ತು ಔಷಧ ಆಡಳಿತ ವಿಭಾಗದ ವೆಬ್ಸೈಟ್ ಕಳೆದ ವಾರ ಸೂಚನೆ ಹೊರಡಿಸಿದೆ.

ಬೋಲೆ ಕೌಂಟಿ ಪ್ರದೇಶದ ಅಧಿಕಾರಿಗಳು, 'ರಂಜಾನ್ ಸಂದರ್ಭದಲ್ಲಿ ಉಪವಾಸ, ಜಾಗರಣೆ ಅಥವಾ ಇತರೆ ಧಾರ್ಮಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ' ಎಂದು ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷವೂ ಈ ಪ್ರದೇಶದಲ್ಲಿ ಉಯಿಘುರ್ ಮುಸ್ಲಿಮರ ಉಪವಾಸದ ಮೇಲೆ ನಿಷೇಧ ಹೇರುವ ಪ್ರಯತ್ನ ನಡೆದಿತ್ತು. ಇದಕ್ಕೆ ಬಲಪಂಥೀಯ ಸಂಘಟನೆಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಇಸ್ಲಾಂ ಮೇಲೆ ಚೀನಾವು ಹೇರಿರುವ ನಿರ್ಬಂಧವು ಕ್ಸಿಂಜಿಯಾಂಗ್ ಪ್ರದೇಶದಲ್ಲಿ ಸಮುದಾಯಗಳ ನಡುವೆ ಉದ್ವೇಗ ಹೊತ್ತಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕೋಮು ಗಲಭೆಗಳಿಂದ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಕ್ಸಿಂಜಿಯಾಂಗ್ನಲ್ಲಿ ಭಯೋತ್ಪಾದನಾ ಬೆದರಿಕೆ ಇದೆ. ಹಿಂಸಾಚಾರಕ್ಕೆ ಧಾರ್ಮಿಕ ಮೂಲಭೂತವಾದಿಗಳೇ ಕಾರಣ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
'ರಂಜಾನ್ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಉಪವಾಸ ಮಾಡುವಂತಿಲ್ಲ, ಮಸೀದಿಗಳನ್ನು ಪ್ರವೇಶಿಸುವಂತಿಲ್ಲ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ' ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡುವಂತೆ ಶಿಕ್ಷಣ ಇಲಾಖೆ ಶಾಲೆಗಳಿಗೆ ಆದೇಶ ನೀಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications