ಚೀನಾದಲ್ಲಿ ಬ್ರಿಕ್ಸ್ ಸಮ್ಮೇಳನ: ಮೋದಿ- ಜಿನ್ಪಿಂಗ್ ಮುಖಾಮುಖಿ
ಗ್ಸಯಾಮೆನ್ (ಚೀನಾ), ಸೆಪ್ಟೆಂಬರ್ 4: ಚೀನಾದ ಗ್ಸಿಯಾಮೆನ್ ನಲ್ಲಿರುವ ಅಂತಾರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ಬ್ರಿಕ್ಸ್ ನಾಯಕರನ್ನು ಚೀನಾ ಅಧ್ಯಕ್ಷ ಗ್ಸಿ ಜಿನ್ಪಿಂಗ್ ಇಂದು(ಸೆಪ್ಟೆಂಬರ್ 4) ಸ್ವಾಗತಿಸಿದರು.
ಇಂದು 9ನೇ ಬ್ರಿಕ್ಸ್ ಸಮ್ಮೇಳನ ನಡೆಯುತ್ತಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕದ ನಾಯಕರು ಸಮ್ಮೇಳನದದಲ್ಲಿ ಉಪಸ್ಥಿತರಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಗ್ಸಿ ಜಿನ್ಪಿಂಗ್, ಜಗತ್ತಿನಲ್ಲಿ ಹಲವು ರೀತಿಯ ಬದಲಾವಣೆಗಳಾಗುತ್ತಿರುವಾಗ ಬ್ರಿಕ್ಸ್(ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕ) ದೇಶಗಳು ಪರಸ್ಪರ ಸಹಕಾರ ನೀಡುವುದು ಅಗತ್ಯ ಎಂದರು.
"ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ನಮ್ಮಲ್ಲಿ ಯಾವುದೇ ಅಂತರಗಳಿದ್ದರೂ, ನಾವು ಐದೂ ದೇಶದವರೂ ಅಭಿವೃದ್ಧಿಯ ಒಂದೇ ಹಂತದಲ್ಲಿದ್ದೇವೆ. ಅಭಿವೃದ್ಧಿ ಎಂಬ ಒಂದೇ ಗುರಿಯೊಂದಿಗೆ ನಾವು ಕೆಲಸಮಾಡಬೇಕಿದೆ. ನಮ್ಮೆಲ್ಲರ ಗುರಿ ಒಂದೇ ಆಗಿ, ನಮ್ಮೆಲ್ಲರ ಸಮಸ್ಯೆಗಳನ್ನು ಒಗ್ಗಟ್ಟಿನಿಂದ ಪರಿಹರಿಸಿಕೊಳ್ಳಬೇಕಿದೆ" ಎಂದರು.
ಪ್ರಧಾನಿ ನರೇಂದ್ರ ಮೋದಿಯವರನ್ನೂ ಬ್ರಿಕ್ಸ್ ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಸಮ್ಮೇಳನದಲ್ಲಿ ಅವರೂ ಉಪಸ್ಥಿತರಿದ್ದಾರೆ. ನಾಳೆ(ಸೆ.5) ನರೇಂದ್ರ ಮೋದಿ ಮತ್ತು ಜಿನ್ಪಿಂಗ್ ಇಬ್ಬರೂ ಭೇಟಿಯಾಗಲಿದ್ದು, ವ್ಯಾಪಾರ ಮತ್ತು ಭಯೋತ್ಪಾದನೆ ಕುರಿತು ಚರ್ಚಿಸುವ ಸಂಭವವಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications