ಚೀನಾದಲ್ಲಿ 49 ಹೊಸ ಕೇಸ್, ಬೀಜಿಂಗ್ನ ಹತ್ತು ಪ್ರದೇಶ ಮತ್ತೆ ಲಾಕ್ಡೌನ್
ಬೀಜಿಂಗ್, ಜೂನ್ 15: ಕೊರೊನಾ ವೈರಸ್ ಸೃಷ್ಟಿಸಿದ ಚೀನಾದಲ್ಲಿ ಎಲ್ಲವೂ ಮುಗಿದು ಹೋಯಿತು. ಮೊದಲಿನ ಸ್ಥಿತಿಯತ್ತ ಚೀನಾ ಮರುಳುತ್ತಿದೆ ಎನ್ನುವಾಗಲೇ ಸೋಮವಾರ ಹೊಸದಾಗಿ 49 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಆತಂಕಕ್ಕೆ ಒಳಗಾದ ಚೀನಾ ಈಗ ಮತ್ತೆ ಲಾಕ್ಡೌನ್ ಮೊರೆ ಹೋಗಿದೆ.
ಸೋಮವಾರ ಚೀನಾ ರಾಜಧಾನಿ ಬೀಜಿಂಗ್ನಲ್ಲಿ 49 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಬೀಜಿಂಗ್ನ ಹತ್ತು ಪ್ರದೇಶಗಳನ್ನು ಲಾಕ್ಡೌನ್ ಮಾಡಲು ಅಧಿಕಾರಿಗಳು ಪ್ರಕಟಿಸಿದ್ದಾರೆ.
ಈ ಕುರಿತು ಬೀಜಿಂಗ್ ಅಧಿಕಾರಿ ಲಿ ಜುಂಜಿ ಪತ್ರಿಕಾಗೋಷ್ಠಿಯ ನಡೆಸಿದ್ದು, 'ವಾಯುವ್ಯ ಹೈಡಿಯನ್ ಜಿಲ್ಲೆಯ ಎರಡನೇ ಸಗಟು ಮಾರುಕಟ್ಟೆಯಲ್ಲಿ ಹೊಸ ಪ್ರಕರಣಗಳು ಕಂಡುಬಂದಿವೆ. ಹಾಗಾಗಿ, ಮಾರುಕಟ್ಟೆ ಮತ್ತು ಹತ್ತಿರದ ಶಾಲೆಗಳನ್ನು ಮುಚ್ಚಲಾಗುವುದು. ಮುಂಜಾಗ್ರತೆ ದೃಷ್ಟಿಯಿಂದ ಅದರ ಸುತ್ತಲಿನ ಹತ್ತು ಪ್ರದೇಶಗಳನ್ನು ಲಾಕ್ಡೌನ್ ಮಾಡಲಾಗಿದೆ'' ಎಂದು ತಿಳಿಸಿದ್ದಾರೆ.

ಬೀಜಿಂಗ್ನಲ್ಲಿ ಲಾಕ್ಡೌನ್ ತೆರವುಗೊಳಿಸಿ ಈ ಮೊದಲಿನಂತೆ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಪರಿಣಾಮ ಮತ್ತೆ ಹೊಸ ಪ್ರಕರಣಗಳು ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
49 ಕೇಸ್ಗಳ ಪೈಕಿ 36 ಪ್ರಕರಣಗಳು ನಗರದ ಮಾಂಸ ಮತ್ತು ತರಕಾರಿಗಳನ್ನು ಪೂರೈಸುವ ಸಗಟು ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಉಳಿದ ಹತ್ತು ಪ್ರಕರಣಗಳು ವಿದೇಶಿ ಪ್ರಯಾಣದ ಹಿನ್ನೆಲೆ ಹೊಂದಿದವರು. ಮೂರು ಪ್ರಕರಣ ಬೀಜಿಂಗ್ನ ನೆರೆ ಪ್ರಾಂತ್ಯದಿಂದ ಬಂದವರು ಎಂದು ಮಾಹಿತಿ ನೀಡಿದ್ದಾರೆ.
ಬೀಜಿಂಗ್ನಲ್ಲಿ ಹೊಸದಾಗಿ 49 ಪ್ರಕರಣ ದಾಖಲಾದ ಹಿನ್ನೆಲೆ, ಹತ್ತು ಪ್ರದೇಶಗಳಲ್ಲಿ ಸಾಮೂಹಿಕ ಪರೀಕ್ಷೆ ಮಾಡಲು ಮುಂದಾಗಿದೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಚೀನಾದಲ್ಲಿ ಪ್ರಸ್ತುತ 177 ಜನರ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅದರಲ್ಲಿ 115 ಮಂದಿ ಐಸೋಲೇಶನ್ ವಾರ್ಡ್ನಲ್ಲಿದ್ದಾರೆ. ಇನ್ನುಳಿದಂತೆ ಚೀನಾದಲ್ಲಿ ಈವರೆಗೂ 83,181 ಕೊರೊನಾ ವೈರಸ್ ಕೇಸ್ ದಾಖಲಾಗಿದೆ. ಅದರಲ್ಲಿ 4634 ಜನರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications