China Military Drill: ಚೀನಾದಿಂದ ಗಡಿಯಲ್ಲಿ ಮಿಲಿಟರಿ ಕವಾಯತ್ತು: ಭಾರತ ಹೈ- ಅಲರ್ಟ್!
ಭಾರತ - ಚೀನಾ ಸಂಬಂಧ ಸುಧಾರಿಸುತ್ತಿದೆ ಎನ್ನುವಾಗಲೇ ಚೀನಾ ತನ್ನ ಬಾಲ ಬಿಚ್ಚಿದೆ. ಕಳೆದ ಕೆಲವೇ ತಿಂಗಳುಗಳ ಮುಂಚೆಯಷ್ಟೇ ಪೂರ್ವ ಲಡಾಕ್ ಗಡಿ ಬಿಕ್ಕಟ್ಟು ಮುಗಿದು ಎರಡು ದೇಶಗಳು ತಮ್ಮ ಸೇನೆಯನ್ನು ಹಿಂದಿರುಗಿಸಿಕೊಳ್ಳುವುದಾಗಿ ಹೇಳಿತ್ತು. ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿತ್ತು. ಆದರೆ, ಇದೀಗ ಚೀನಾ ತನ್ನ ಎತ್ತರದ ಪ್ರಸ್ಥಭೂಮಿಯಲ್ಲಿ ಮಿಲಿಟರಿ ತರಬೇತಿ (ಕವಾಯತ್ತು) ನಡೆಸಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಭಾರತೀಯ ಸೇನಾ ದಿನಾಚರಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗಲೇ ಈ ಬೆಳವಣಿಗೆ ನಡೆದಿದ್ದು. ಸಂಕಷ್ಟದ ಸಂದರ್ಭಗಳಲ್ಲಿ ಚೀನಾದ ಮಿಲಿಟರಿ ಪಡೆ ಎಷ್ಟು ಸನ್ನದ್ಧವಾಗಿದೆ ಎನ್ನುವುದನ್ನು ಇದು ತೋರಿಸುವ ಪ್ರಯತ್ನ ಎಂದು ಹೇಳಲಾಗುತ್ತಿದೆ.
ಭಾರತ - ಚೀನಾದ ಗಡಿ ಭಾಗದಲ್ಲಿ ಕಳೆದ 4 ವರ್ಷಗಳಿಂದ ಉದ್ವಿಗ್ನ ಪರಿಸ್ಥಿತಿ ಇತ್ತು. ಈಚೆಗಷ್ಟೇ ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ಚುರುಕು ಪಡೆದುಕೊಂಡಿತ್ತು. ಇನ್ನೇನು ಎರಡೂ ದೇಶಗಳ ನಡುವೆ ಎಲ್ಲವೂ ಸರಿ ಹೋಗುತ್ತಿದೆ ಎನ್ನುವಾಗಲೇ ಚೀನ ತನ್ನ ಹಳೇ ಚಾಳಿಯನ್ನು ಪ್ರದರ್ಶಿಸಿದೆ. 2024ರ ಅಕ್ಟೋಬರ್ನಲ್ಲಿ ಎರಡೂ ದೇಶಗಳ ನಡುವೆ ಮಹತ್ವದ ಚರ್ಚೆ ಆಗಿತ್ತು. ಭಾರತ ಹಾಗೂ ಚೀನಾ ಗಡಿ ಗಸ್ತು ಒಪ್ಪಂದಕ್ಕೆ ಮುಂದಾಗಿದ್ದವು. ಈ ಮೂಲಕ ಭಾರತ ಹಾಗೂ ಚೀನಾ ಎರಡೂ ದೇಶಗಳು ದೇಶದ ಗಡಿ ಭಾಗದ ವಾಸ್ತವ ನಿಯಂತ್ರಣ ರೇಖೆಯ (LAC) ಉದ್ದಕ್ಕೂ ಕಡಿಮೆ ಸೈನಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಾಂತಿ ಕಾಪಾಡಿಕೊಂಡಿದೆ. ಭಾರತವು ಗಡಿ ಗಸ್ತು ಒಪ್ಪಂದವನ್ನು ಚಾಚು ತಪ್ಪದೆ ಪಾಲನೆ ಮಾಡುತ್ತಿದೆ.

ಪರಿಸ್ಥಿತಿ ಈ ರೀತಿ ಇರುವಾಗಲೇ ಚೀನಾ ಮಿಲಿಟರಿ ಪಡೆಯು ತರಬೇತಿಯನ್ನು ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಾದ ಕ್ಸಿನ್ಜಿಯಾಂಗ್ ಮಿಲಿಟರಿ ಕಮಾಂಡ್ನ ರೆಜಿಮೆಂಟ್ ನೇತೃತ್ವದಲ್ಲಿ ಈ ಮಿಲಿಟರಿ ತರಬೇತಿ ಅಥವಾ ಯುದ್ಧ ಕವಾಯತು ನಡೆದಿದೆ ಎಂದು ವರದಿಯಾಗಿದೆ. ಈ ಯುದ್ಧ ತರಬೇತಿಯಲ್ಲಿ ಅತ್ಯಾಧುನಿಕ ಸಾಧನಗಳು, ಸೈನಿಕರು, ಮಾನವರ ರಹಿತ ಯುದ್ಧ ವಾಹನಗಳು ಹಾಗೂ ಅತ್ಯಾಧುನಿಕ ಮಿಲಿಟರಿ ತಂತ್ರಜ್ಞಾನ ಬಳಸಲಾಗಿದೆ ಎಂದು ಹೇಳಲಾಗಿದೆ.
ಭಾರತದಿಂದ ಹೈ ಅಲರ್ಟ್: ಚೀನಾ ತನ್ನ ಗಡಿಯಲ್ಲಿ ಮಿಲಿಟರಿ ಕವಾಯತ್ತು ನಡೆಸುತ್ತಿದ್ದಂತೆಯೇ ಭಾರತ ಹೈ ಅಲರ್ಟ್ ಆಗಿದೆ. ಚೀನಾ ತನ್ನ ಗಡಿ ಭಾಗದಲ್ಲಿ ನಡೆಸುತ್ತಿರುವ ಮಿಲಿಟರಿ ತರಬೇತಿಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗಿದೆ. ಚೀನಾದ ಈ ಬೆಳವಣಿಗೆಯಿಂದ

ಭಾರತ ಲಡಾಖ್ನಲ್ಲಿ ಅಲರ್ಟ್ ಆಗಿದೆ. ಭಾರತೀಯ ಸೇನೆಯು ಚಳಿಗಾಲದ ಮಿಲಿಟರಿ ತರಬೇತಿಗಳನ್ನು ಆಗಾಗ ನಡೆಸುತ್ತಿದೆ. ಚೀನಾದ ಯಾವುದೇ ಸಂಭವನೀಯ ಆಕ್ರಮಣವನ್ನು ಎದುರಿಸಲು ಭಾರತವು ಸುಧಾರಿತ ಕಣ್ಗಾವಲು ವ್ಯವಸ್ಥೆಯನ್ನು ಮಾಡಿಕೊಂಡಿದೆ ಎಂದು ಹೇಳಲಾಗಿದೆ.
ಇನ್ನು ಚೀನಾ - ಭಾರತದ ನಡುವೆ ಹಲವು ಸುತ್ತಿನ ಸಭೆಗಳ ನಂತರವಷ್ಟೇ ಗಡಿ ಗಸ್ತು ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದದ ಪ್ರಕಾರ ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಲು ಎರಡೂ ರಾಷ್ಟ್ರಗಳು ಬದ್ಧವಾಗಿರುವುದಾಗಿ ಹೇಳಿಕೊಂಡಿದ್ದವು. ಇದೀಗ ಚೀನಾ ಯಾವ ಕಾರಣಕ್ಕೆ ಮಿಲಿಟರಿ ತರಬೇತಿಯನ್ನು ನಡೆಸಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಈಚೆಗೆ ಬ್ರಹ್ಮಪುತ್ರ ನದಿ ಪಾತ್ರದಲ್ಲಿ ವಿಶ್ವದಲ್ಲೇ ಬೃಹತ್ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾವನೆಯ ಬಗ್ಗೆ ಚರ್ಚೆ ಮಾಡಿದ್ದ ಚೀನಾ. ಏಕಕಾಲಕ್ಕೆ ಭಾರತ ಹಾಗೂ ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟಿತ್ತು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications