ಪಾಕಿಸ್ತಾನಕ್ಕೆ ಸುಧಾರಿತ ಯುದ್ಧನೌಕೆ ಕೊಟ್ಟ ಚೀನಾ
ಬೀಜಿಂಗ್, ನವೆಂಬರ್ 09: ದಿನ ಕಳೆದಂತೆ ಪಾಕಿಸ್ತಾನ ಹಾಗೂ ಚೀನಾ ನಡುವಿನ ಗೆಳೆತನ ಮತ್ತಷ್ಟು ಸದೃಢವಾಗುತ್ತಿದೆ.
ಅಫ್ಘಾನಿಸ್ತಾನದ ಕುರಿತು ಭಾರತ ಕರೆದಿರುವ ಸಭೆಯಿಂದಲೂ ಈ ಎರಡು ದೇಶಗಳು ಹಿಂದುಳಿದಿವೆ. ಒಂದಾಗಿ ಕೆಲಸ ಮಾಡುತ್ತಿವೆ. ಇದೀಗ ಚೀನಾವು ಪಾಕಿಸ್ತಾನಕ್ಕೆ ಸುಧಾರಿತ ಯುದ್ಧನೌಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿರುವುದರ ಜತೆಗೆ ಚಿಂತೆಗೀಡುಮಾಡಿದೆ.
ಪಾಕಿಸ್ತಾನದ ಅತ್ಯಾಪ್ತ ಗೆಳೆಯ ಚೀನಾ ಈಗ ತನ್ನದೇ ಆದ ಅತಿ ದೊಡ್ಡ ಮತ್ತು ಸುಧಾರಿತ ಯುದ್ಧನೌಕೆಯೊಂದನ್ನು ಪಾಕಿಸ್ತಾನಕ್ಕೆ ನೀಡಿದ್ದು, ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದಲ್ಲೂ ಕೂಡಾ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಹವಣಿಸುತ್ತಿದೆ.

ಹಿಂದೂ ಮಹಾಸಾಗರದಲ್ಲಿ ಪಾಕಿಸ್ತಾನದ ಸಾಮರ್ಥ್ಯವನ್ನು ಪಿಎನ್ಎಸ್ ತುಘ್ರಿಲ್ ಖಾತ್ರಿಪಡಿಸುತ್ತದೆ. ಒಟ್ಟಾರೆಯಾಗಿ ಭದ್ರತೆ ಹೆಚ್ಚುವುದಲ್ಲದೇ, ಹಿಂದೂ ಮಹಾಸಾಗರದಲ್ಲಿ ಶಾಂತಿ, ಸ್ಥಿರತೆ ಕಾಪಾಡಲು ಪಿಎನ್ಎಸ್ ತುಘ್ರಿಲ್ ನೆರವಾಗುತ್ತದೆ ಎಂದು ಚೀನಾಕ್ಕೆ ಪಾಕಿಸ್ತಾನಿ ರಾಯಭಾರಿಯಾಗಿರುವ ಮೊಯಿನ್ ಉಲ್ ಹಕ್ ಹೇಳಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ತಿಳಿಸಿದೆ.
ಚೀನಾ ಸ್ಟೇಟ್ ಶಿಪ್ ಬಿಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್ (CSSC) ನಿರ್ಮಾಣ ಮಾಡಿರುವ ಈ ನೌಕೆಯನ್ನು ಶಾಂಘೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಹಸ್ತಾಂತರ ಮಾಡಲಾಗಿದೆ ಎಂದು ಸಿಎಸ್ಎಸ್ಸಿ ಸೋಮವಾರ ಘೋಷಿಸಿದೆ. 054A/P ಮಾದರಿಯ ನೌಕೆಗೆ ಪಿಎನ್ಎಸ್ ತುಘ್ರಿಲ್ ಎಂದು ಹೆಸರಿಡಲಾಗಿದೆ ಎಂದು ಗ್ಲೋಬಲ್ ಟೈಮ್ಸ್ ಮಂಗಳವಾರ ವರದಿ ಮಾಡಿದೆ.
ಪಿಎನ್ಎಸ್ ತುಘ್ರಿಲ್ನಲ್ಲಿ ಇರುವುದೇನು?: 2017ರಲ್ಲೇ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಪಿಎನ್ಎಸ್ ತುಘ್ರಿಲ್ ತಾಂತ್ರಿಕವಾಗಿ ಸಾಕಷ್ಟು ಮುಂದುವರೆದಿದ್ದು, ನೌಕೆ ಮೇಲಿಂದ ನೌಕೆಯನ್ನು ಗುರಿಯಾಗಿಸಿ ನೌಕೆ ಮೇಲಿಂದ ಗಾಳಿಯಲ್ಲಿರುವ ವಿಮಾನಗಳನ್ನು ಗುರಿಯಾಗಿಸಿ (Surface to Air) ದಾಳಿ ನಡೆಸುವ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ ನೀರೊಳಗಿನ ಕಾರ್ಯಾಚರಣೆಗಳಿಗೆ ಅತ್ಯದ್ಭುತವಾಗಿ ನೆರವಾಗಬಲ್ಲ ಸಾಮರ್ಥ್ಯವನ್ನು ಈ ಯುದ್ಧನೌಕೆ ಹೊಂದಿದೆ ಎಂದು ಪಾಕಿಸ್ತಾನ ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.
ಚೀನಾದ ಈಗಾಗಲೇ ಹಾರ್ನ್ ಆಫ್ ಆಫ್ರಿಕಾದಲ್ಲಿರುವ ಡಿಜಿಬೋಟಿಯಲ್ಲಿ ಮೊದಲ ಮಿಲಿಟರಿ ನೆಲೆಯನ್ನು ಸ್ಥಾಪಿಸಿದೆ. ಇದು ಮಿಲಿಟರಿ ನೆಲೆ ಹಿಂದೂ ಮಹಾಸಾಗರದ ಸಮೀಪದಲ್ಲಿಯೇ ಇದೆ. ಪಾಕಿಸ್ತಾನದ ಗ್ವಾದಾರ್ ಬಂದರನ್ನು 'ವಶಕ್ಕೆ' ಪಡೆದಿರುವ ಚೀನಾ ಅಲ್ಲಿಂದ ಅರ್ಥಾತ್ ಅರಬ್ಬಿ ಸಮುದ್ರದಿಂದ ಚೀನಾದ ಕ್ಸಿನ್ಜಿಯಾಂಗ್ ಪ್ರಾಂತ್ಯವನ್ನು ಸಂಪರ್ಕಿಸಲು ಯತ್ನಿಸುತ್ತಿದೆ.
ಇದಕ್ಕಾಗಿ ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ (CPEC) ಅಡಿಯಲ್ಲಿ 60 ಬಿಲಿಯನ್ ಅಮೆರಿಕನ್ ಡಾಲರ್ಗಳನ್ನು ಖರ್ಚು ಮಾಡುತ್ತಿದೆ. ಇದರ ಜೊತೆಗೆ ಶ್ರೀಲಂಕಾದ ಹಂಬನ್ತೋಟಾ ಬಂದರನ್ನು ಚೀನಾ 99 ವರ್ಷಗಳ ಅವಧಿಗೆ ಗುತ್ತಿಗೆ ಪಡೆದಿದ್ದು, ಇಲ್ಲಿಂದಲೂ ಹಿಂದೂ ಮಹಾಸಾಗರದ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದೆ.
ಪಾಕಿಸ್ತಾನಕ್ಕಾಗಿ ಚೀನಾ ಸಿದ್ಧಪಡಿಸುತ್ತಿರುವ 054 ಮಾದರಿಯ ನಾಲ್ಕು ಯುದ್ಧನೌಕೆಗಳಲ್ಲಿ ಇದು ಮೊದಲನೇಯದಾಗಿದ್ದು, ಇನ್ನೂ ನಾಲ್ಕು ನೌಕೆಗಳನ್ನು ಚೀನಾ ಸ್ಟೇಟ್ ಶಿಪ್ ಬಿಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್ ನಿರ್ಮಿಸಿ ಪಾಕಿಸ್ತಾನಕ್ಕೆ ಹಸ್ತಾಂತರ ಮಾಡಲಿದೆ.
ಈ ಯುದ್ಧನೌಕೆ ಈವರೆಗೆ ಚೀನಾ ರಫ್ತು ಮಾಡಿರುವ ಅತ್ಯಂತ ದೊಡ್ಡ ಮತ್ತು ಸುಧಾರಿತ ಯುದ್ಧ ನೌಕೆಯಾಗಿದೆ. ಈ ಯುದ್ಧ ನೌಕೆಯಲ್ಲಿ ಯುದ್ಧ ನಿರ್ವಹಣಾ ವ್ಯವಸ್ಥೆ, ಆಧುನಿಕ ಸ್ವರಕ್ಷಣಾ ಸಾಮರ್ಥ್ಯ, ಸತತವಾಗಿ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಾಮರ್ಥ್ಯ ಇದೆ ಎಂದು ಸಿಎಸ್ಎಸ್ಸಿ ಹೇಳಿದೆ.
ಇನ್ನು ಚೀನಾ ಪಾಕಿಸ್ತಾನಕ್ಕೆ ಅತಿ ದೊಡ್ಡ ಯುದ್ಧ ಸಾಮಗ್ರಿ ರಫ್ತು ಮಾಡುವ ದೇಶವಾಗಿದ್ದು, ಯುದ್ಧನೌಕೆ ಮಾತ್ರವಲ್ಲದೇ, ಪಾಕಿಸ್ತಾನ ವಾಯುಪಡೆಯ ಸಹಭಾಗಿತ್ವದಲ್ಲಿ ಜೆಎಫ್-17 ಥಂಡರ್ ಫೈಟರ್ ಏರ್ಕ್ರಾಫ್ಟ್ ಸಿದ್ಧಪಡಿಸುತ್ತಿದೆ. ಇನ್ನೂ ಹಲವು ತಂತ್ರಗಳ ಮೂಲಕ ಭಾರತವನ್ನೇ ಗುರಿಯಾಗಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.
ಅಫ್ಘಾನಿಸ್ತಾನ ಕುರಿತು ಚರ್ಚೆ ನಡೆಸಲು ಭಾರತ ಆಯೋಜಿಸಿದ್ದ ಸಭೆಯಿಂದ ಪಾಕಿಸ್ತಾನ ಹಾಗೂ ಚೀನಾ ಹಿಂದುಳಿದಿದೆ.
ಈ ಹಿನ್ನೆಲೆ ಸಭೆಗೆ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಉನ್ನತ ಭದ್ರತಾ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ಭಾರತ ಆಯೋಜಿಸಿದೆ. ಈ ಸಭೆ ಭಾರತದ ಎನ್ ಎಸ್ ಎ ಅಜಿತ್ ದೋವಲ್ ನೇತೃತ್ವದಲ್ಲಿ ನಡೆಯಲಿದ್ದು, ನಾಳೆ ಅಫ್ಘಾನಿಸ್ತಾನದ ಕುರಿತು ಪ್ರಾದೇಶಿಕ ಭದ್ರತಾ ಸಭೆ ನಡೆಯುತ್ತಿದೆ.
ರಷ್ಯಾ ಮತ್ತು ಇರಾನ್ ದೇಶದ ಪ್ರತಿನಿಧಿಗಳು ಸಹ ನಾಳೆಯ ಸಭೆಯಲ್ಲಿ ಭಾಗಿಯಾಗಲಿದ್ದು, ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಣೆ ಬೆದರಿಕೆಗಳನ್ನು ಎದುರಿಸುವ ಸಹಕಾರಕ್ಕಾಗಿ ಈ ಸಭೆಯನ್ನು ಕರೆಯಲಾಗಿದೆ. ಆದರೆ ಈ ಸಭೆಯಿಂದ ಚೀನಾ ಮತ್ತು ಪಾಕಿಸ್ತಾನ ಹೊರಗುಳಿದಿದೆ.
ಅಶಾಂತಿಯ ನೆಲೆಗೂಡಾಗಿರುವ ಅಫ್ಘಾನಿಸ್ತಾನದ ಕುರಿತು ಚರ್ಚಿಸಲು ಭಾರತ ಸಭೆಯೊಂದನ್ನು ಆಯೋಜಿಸಿದೆ. ಆದರೆ ಅಫ್ಘಾನಿಸ್ತಾನದ ಮಿತ್ರ ರಾಷ್ಟ್ರಗಳು ಎಂದು ಗುರುತಿಸಿಕೊಂಡಿರುವ ಚೀನಾ ಮತ್ತು ಪಾಕಿಸ್ತಾನ ಭಾರತದ ಸಭೆಯಿಂದ ಹೊರಗುಳಿದಿವೆ. ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ.
ಭಾರತದ NSA ಅಜಿತ್ ದೋವಲ್ ಸಭೆಯ ನೇತೃತ್ವ ವಹಿಸಿದ್ದಾರೆ. ತಾಲೀಬಾನ್ ಪ್ರೇರಿತ ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ಸಭೆ ಕರೆಯಲಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications