ಕೊರೊನಾ ಆಯ್ತು, ಈಗ ಚೀನಾ ಜನರಿಗೆ ಹಕ್ಕಿ ಜ್ವರದ ಕಾಟ
ಬೀಜಿಂಗ್, ಏಪ್ರಿಲ್ 27 : ಕೊರೊನಾ ಮೂಲ ಸ್ಥಾನ ಎನ್ನಲಾದ ಚೀನಾದಲ್ಲಿ ಈಗ ಮತ್ತೊಂದು ವೈರಸ್ನ ಭೀತಿ ಶುರುವಾಗಿದೆ. ಚೀನಾದಲ್ಲಿ ಇದೇ ಮೊದಲ ಬಾರಿಗೆ ಮಾನವರಲ್ಲಿ H3N8 ಹಕ್ಕಿಜ್ವರದ ಹರಡಿರುವ ಮೊದಲ ಪ್ರಕರಣ ದಾಖಲಾಗಿದೆ.
ಕೊರೊನಾದಿಂದಲೇ ತತ್ತರಿಸಿರುವ ಚೀನಾಗೆ ಈಗ ಹಕ್ಕಿ ಜ್ವರದ ಭೀತಿಯು ಶುರುವಾಗಿದೆ. ಈ ಸೋಂಕು ಕೇವಲ ಪಕ್ಷಿಗಳಲ್ಲಿ ಮಾತ್ರ ಕಂಡು ಬರುತ್ತಿತ್ತು. ಆದರೆ, ಇದೆ ಮೊದಲ ಬಾರಿಗೆ ಮನುಷ್ಯರಲ್ಲೂ H3N8 ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಚೀನಾ ದೃಢಪಡಿಸಿದೆ. ಸದ್ಯಕ್ಕೆ ಈ ಸೋಂಕು ಜನರಲ್ಲಿ ವ್ಯಾಪಕವಾಗಿ ಹರಡುವ ಅಪಾಯ ಕಡಿಮೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
H3N8 ಸೋಂಕು ಉತ್ತರ ಅಮೆರಿಕಾದ ಜಲಪಕ್ಷಿಗಳಲ್ಲಿ ಮೊದಲು ಕಾಣಿಸಿಕೊಂಡಿತ್ತು. ನಂತರ 2002 ರಿಂದ ಇದು ಪಕ್ಷಿಗಳು, ಕೋಳಿ, ಕುದುರೆ, ನಾಯಿ, ಸೀಲ್ ಗಳಲ್ಲಿ ಹೆಚ್ಚಾಗಿ ಹರಡಲು ಶುರುವಾಯಿತು. ಆದರೆ ಇದೇ ಮೊದಲ ಬಾರಿಗೆ ಮಾನವರಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಚೀನಾದ ಮಧ್ಯ ಹೆನಾನ್ ಪ್ರಾಂತ್ಯದಲ್ಲಿ ವಾಸಿಸುವ ನಾಲ್ಕು ವರ್ಷದ ಬಾಲಕನಿಗೆ ಜ್ವರ ಮತ್ತು ಇತರ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆ ಆಸ್ಪತ್ರೆ ದಾಖಲಿಸಲಾಗಿತ್ತು. ಈ ವೇಳೆ ತಪಾಸಣೆ ನಡೆಸಿದಾಗ ಬಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಸೋಂಕಿತ ಹುಡುಗನ ಕುಟುಂಬವು ಮನೆಯಲ್ಲಿ ಕೋಳಿ ಸಾಕಣೆ ಮಾಡುತ್ತಿತ್ತು ಮತ್ತು ಕಾಡು ಬಾತುಕೋಳಿಗಳು ವಾಸಿಸುವ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಹೀಗಾಗಿ ಹುಡುಗನಿಗೆ ನೇರವಾಗಿ ಪಕ್ಷಿಗಳಿಂದ ಸೋಂಕು ತಗುಲಿದೆ. ಆದರೆ, ಈ ಸೋಂಕು ಮನುಷ್ಯರ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಆಯೋಗವು ಮಾಹಿತಿ ನೀಡಿದೆ.
ಒಟ್ಟಿನಲ್ಲಿ ಅನಾರೋಗ್ಯ ಪಕ್ಷಿಗಳಿಂದ ದೂರವಿರುವುದು ಹಾಗೂ ಜ್ವರ ಅಥವಾ ಉಸಿರಾಟದ ಸಮಸ್ಯೆ ಕಂಡು ಬಂದರೆ, ಕೂಡಲೇ ಚಿಕಿತ್ಸೆಯನ್ನು ಪಡೆಯುವಂತೆ ಸಾರ್ವಜನಿಕರಿಗೆ ಆಯೋಗವು ಎಚ್ಚರಿಕೆ ನೀಡಿದೆ.

2012 ರಲ್ಲಿ ಪ್ರಾಣಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ನಂತರ ಯುನೈಟೆಡ್ ಸ್ಟೇಟ್ಸ್ ನ ಈಶಾನ್ಯ ಕರಾವಳಿಯಲ್ಲಿ 160 ಕ್ಕೂ ಹೆಚ್ಚು ಸೀಲ್ ಪ್ರಾಣಿಗಳ ಮಾರಣಹೋಮವಾಗಿತ್ತು 1997 ಮತ್ತು 2013 ರಲ್ಲಿ ಪತ್ತೆಯಾದ ಹಕ್ಕಿ ಜ್ವರದ H5N1 ಮತ್ತು H7N9 ತಳಿಗಳು ಏವಿಯನ್ ಇನ್ಫ್ಲುಯೆನ್ಜಾ ದಿಂದ ಮಾನವನ ಅನಾರೋಗ್ಯದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಗಿವೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ತಿಳಿಸಿದೆ. ಏವಿಯನ್ ಇನ್ಫ್ಲುಯೆನ್ಸ ಮುಖ್ಯವಾಗಿ ಕಾಡು ಪಕ್ಷಿಗಳು ಮತ್ತು ಕೋಳಿಗಳಲ್ಲಿ ಕಂಡುಬರುತ್ತದೆ. ಮನುಷ್ಯರ ನಡುವೆ ಹರಡುವ ಪ್ರಕರಣಗಳು ಅತ್ಯಂತ ವಿರಳ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications