ಹಿಂದೂಗಳಿಗೆ ನೆರವು: ವಿಳಂಬವಾದರೂ ಒಳ್ಳೆ ನಿರ್ಧಾರ ಕೈಗೊಂಡ ಚೀನಾ
ನವದೆಹಲಿ, ಆಗಸ್ಟ್ 08: ಜಮ್ಮು ಮತ್ತು ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಅಧಿಕಾರ ರದ್ದುಗೊಳಿಸಿರುವುದು, ಲಡಾಕ್ ಪ್ರತ್ಯೇಕಿಸಿ ಕೇಂದ್ರಾಡಳಿತ ಪ್ರದೇಶ ಮಾಡಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನಕ್ಕೆ ಚೀನಾ ಬೆಂಬಲವೂ ಸಿಕ್ಕಿಲ್ಲ. ಅಲ್ಲದೆ, ಹಿಮಾಲಯದ ತಪ್ಪಲಿನ ಯಾತ್ರಾ ಸ್ಥಳಕ್ಕೆ ತೆರಳಲು ಚೀನಾ ವೀಸಾ ನೀಡುವುದು ಅನುಮಾನ ಎಂಬ ವರದಿಗೆ ವ್ಯತಿರಿಕ್ತವಾಗಿ ಚೀನಾ ನಡೆದುಕೊಂಡಿದೆ.
ವಿಳಂಬವಾದರೂ ಭಾರತೀಯ ಯಾತ್ರಾರ್ಥಿಗಳ ಗುಂಪೊಂದಕ್ಕೆ ಚೀನಾ ವೀಸಾ ನೀಡಿದೆ. ಹಿಂದೂಗಳ ಪವಿತ್ರ ಯಾತ್ರಾ ಸ್ಥಳಕ್ಕೆ ತೆರಳು ಇದ್ದ ಅಡ್ಡಿ, ಆತಂಕ ಸದ್ಯಕ್ಕೆ ದೂರಾಗಿದ್ದು, ಹಿಂದೂ ಯಾತ್ರಿಗಳ ಗುಂಪು ಈಗಾಗಲೇ ಕೈಲಾಸ ಪರ್ವತದ ಪರಿಕ್ರಮ ಯಾತ್ರೆ ಆರಂಭಿಸಿದೆ.

ಚೀನಾ ಗಡಿ ಪ್ರವೇಶಿಸಿ ಕೈಲಾಸ ಪರ್ವತದ ತಪ್ಪಲಿಗೆ ಹೋಗಬೇಕಾಗಿದ್ದು, ಪ್ರತಿ ವರ್ಷ ನೂರಾರು ಮಂದಿ ಯಾತ್ರಿಗಳು ಕೈಲಾಸ ಮಾನಸ ಸರೋವರ ಪರಿಕ್ರಮ ಯಾತ್ರೆ ಕೈಗೊಳ್ಳುತ್ತಾರೆ.
"ಆರ್ಟಿಕಲ್ 370 ರದ್ದು ಪಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕಿಸಿದ್ದು, ಲಡಾಕ್ ಮೇಲೆ ಕೇಂದ್ರ ಸರ್ಕಾರ ನೇರ ಅಧಿಕಾರ ಹೊಂದಿದ್ದರ ಬಗ್ಗೆ ಚೀನಾ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ, ಕೈಲಾಸ ಮಾನಸ ಸರೋವರ ಯಾತ್ರಿಗಳಿಗೆ ವೀಸಾ ದೊರೆಯುವುದು ಕಷ್ಟ" ಎಂಬ ಸುದ್ದಿ ಬಂದಿತ್ತು. ಆದರೆ, ಚೀನಾ ಇದಕ್ಕೆ ವಿರುದ್ಧವಾಗಿ ನಡೆದುಕೊಂಡು ಹಿಂದೂಗಳ ಯಾತ್ರೆಗೆ ನೆರವಾಗಿ ಅಚ್ಚರಿ ಮೂಡಿಸಿದೆ.
ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂದಿನ ವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದು, ಮೂರು ದಿನಗಳ ಕಾಲ ಚೀನಾದಲ್ಲಿ ಉಳಿಯಲಿದ್ದಾರೆ. ಭಾರತ ಹಾಗೂ ಚೀನಾ ನಡುವಿನ ಅನೌಪಚಾರಿಕ ದ್ವಿಪಕ್ಷೀಯ ಮಾತುಕತೆ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹಾಗೂ ಪ್ರಧಾನಿ ಮೋದಿ ನಡುವಿನ ಚರ್ಚೆ ಅಕ್ಟೋಬರ್ ತಿಂಗಳಿನಲ್ಲಿ ನಿಗದಿಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications