ಭಾರತ ಗಡಿ ಸಮೀಪದ ಟಿಬೆಟಿಯನ್ ನಗರಕ್ಕೆ ಅಚ್ಚರಿಯ ಭೇಟಿ ನೀಡಿದ ಚೀನಾ ಅಧ್ಯಕ್ಷ
ಬೀಜಿಂಗ್, ಜು.23: ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ (ಟಿಎಆರ್) ಅಘೋಷಿತ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ತಿಳಿಸಿವೆ.
ಎರಡು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಸಿನೋ-ಇಂಡಿಯಾ ಗಡಿಯ ಸಮೀಪವಿರುವ ನೈಂಗ್ಚಿಯಲ್ಲಿ ಈ ಭೇಟಿ ನಡೆದಿದೆ ಎಂದು ಕೂಡಾ ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ಹೇಳಿದೆ.
ಬುಧವಾರ ನಿಂಗ್ಚಿಗೆ ಬಂದಿಳಿದ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಗುರುವಾರ ಲಾಸಾಗೆ ಭೇಟಿ ನೀಡಿದ್ದಾರೆ. ಚೀನಾದ ಅಧ್ಯಕ್ಷರು ಒಂದು ದಶಕಕ್ಕೂ ಅಧಿಕ ಸಮಯದ ನಂತರ ಟಿಬೆಟಿಯನ್ ರಾಜಧಾನಿಗೆ ಭೇಟಿ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಚೀನಾದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವಿಡಿಯೋ ತುಣುಕಿನಲ್ಲಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಪ್ರಧಾನ ಕಾರ್ಯದರ್ಶಿ ಕ್ಸಿ, ನೈಂಗ್ಚಿಯಲ್ಲಿನ ನಿವಾಸಿಗಳಿಗೆ ಟಿಬೆಟಿಯನ್ ಸಂಪ್ರದಾಯದಲ್ಲಿ ತಾಶಿ ಡೆಲೆಕ್ ಎಂದು ಶುಭಾಶಯ ಕೋರಿದ್ದಾರೆ. ಕ್ಸಿ ನಂತರ ಉತ್ತಮ ಭವಿಷ್ಯದ ಬಗ್ಗೆ ನಂಬಿಕೆ ಇಡಬೇಕೆಂದು ಕರೆ ನೀಡಿದ್ದಾರೆ.
ಅಧಿಕೃತ ಸುದ್ದಿ ಸಂಸ್ಥೆ ಕ್ಸಿನ್ಹುವಾ ಬಿಡುಗಡೆ ಮಾಡಿದ ಸಂಕ್ಷಿಪ್ತ ವರದಿಯ ಪ್ರಕಾರ, ಕ್ಸಿ ಬುಧವಾರ ನೈಂಗ್ಚಿ ಮೈನ್ಲಿಂಗ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸ್ಥಳೀಯ ಜನರು ಮತ್ತು ವಿವಿಧ ಜನಾಂಗದ ಅಧಿಕಾರಿಗಳು ಈ ಸಂದರ್ಭದಲ್ಲಿ ಕ್ಸಿ ಜಿನ್ಪಿಂಗ್ರನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ.
"ನಂತರ ಯಾರ್ಲುಂಗ್ ಜಾಂಗ್ಬೊ ನದಿ ಮತ್ತು ಅದರ ಉಪನದಿ ನ್ಯಾಂಗ್ ನದಿಯ ಜಲಾನಯನ ಪ್ರದೇಶದಲ್ಲಿನ ಪರಿಸರ ಸಂರಕ್ಷಣೆಯನ್ನು ಪರಿಶೀಲಿಸಲು ನ್ಯಾಂಗ್ ನದಿ ಸೇತುವೆಗೆ ಭೇಟಿ ನೀಡಿದರು," ಎಂದು ಕ್ಸಿನ್ಹುವಾ ವರದಿ ತಿಳಿಸಿದೆ.
"ಟಿಬೆಟ್ನ ಶಾಂತಿಯುತ ವಿಮೋಚನೆಯ" 60 ನೇ ವರ್ಷಾಚರಣೆಯ ನೆನಪಿಗಾಗಿ ಕ್ಸಿ ಜುಲೈ 18, 2011 ರಂದು ಚೀನಾದ ಅಂದಿನ ಉಪಾಧ್ಯಕ್ಷರಾಗಿ ಲಾಸಾಗೆ ಇದೇ ರೀತಿಯ ನಿಯೋಗದೊಂದಿಗೆ ಆಗಮಿಸಿದ್ದರು ಎಂದು ಹಾಂಗ್ ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.
ಒಂದು ದಶಕದ ಹಿಂದೆ ತನ್ನ ಭಾಷಣದಲ್ಲಿ, ದೇಶಭ್ರಷ್ಟ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಜೊತೆಗೆ ಸಂಬಂಧ ಹೊಂದಿರುವ "ಪ್ರತ್ಯೇಕತಾವಾದಿ ಚಟುವಟಿಕೆಗಳ" ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.
ಆಡಳಿತಾರೂಢ ಸಿಪಿಸಿ ತನ್ನ 100 ನೇ ವಾರ್ಷಿಕೋತ್ಸವವನ್ನು ಜುಲೈ 1 ರಂದು ಆಚರಿಸುವ ಒಂದು ವಾರದ ಮೊದಲು, ರಾಜಧಾನಿ ಲಾಸಾ ಮತ್ತು ನೈಂಗ್ಚಿ ನಗರದ ನಡುವೆ ಟಿಬೆಟ್ನಲ್ಲಿ ಚೀನಾ ತನ್ನ ಮೊದಲ ಎಲೆಕ್ಟ್ರಿಕ್ ರೈಲು ಸೇವೆಯನ್ನು ಉದ್ಘಾಟಿಸಿದೆ. ಇದಾದ ಒಂದು ತಿಂಗಳ ನಂತರ ಕ್ಸಿ ನೈಂಗ್ಚಿಗೆ ಭೇಟಿ ನೀಡಿದ್ದಾರೆ.
ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿನ ಮೊದಲ ವಿದ್ಯುದ್ದೀಕೃತ ರೈಲ್ವೆ ಲಾಸಾ ಮತ್ತು ನೈಂಗ್ಚಿಯನ್ನು ಸಂಪರ್ಕಿಸುವ ಬುಲೆಟ್ ರೈಲು ಮಾರ್ಗವಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್ ಹುವಾ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ನೈಂಗ್ಚಿ ಅರುಣಾಚಲ ಪ್ರದೇಶದ ಗಡಿಯ ಪಕ್ಕದಲ್ಲಿರುವ ಮೆಡೋಗ್ ಪ್ರಾಂತ್ಯದ ನಗರವಾಗಿದೆ. ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ನ ಭಾಗವೆಂದು ಚೀನಾ ಹೇಳಿಕೊಂಡಿದೆ. ಇದನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಭಾರತ-ಚೀನಾ ಗಡಿ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್ಎಸಿ) ಒಳಗೊಂಡಿದೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications