ವಾಜಪೇಯಿ ಪ್ರಧಾನಿಯಾಗಿದ್ದ ಸಹಿ ಹಾಕಿದ್ದ ಒಪ್ಪಂದವನ್ನು ಭಾರತಕ್ಕೆ ನೆನಪಿಸಿದ ಚೀನಾ
ಬೀಜಿಂಗ್, ಡಿಸೆಂಬರ್ 31: ಸ್ವತಂತ್ರ ಟಿಬೆಟ್ ಕುರಿತು ಭಾರತ ಪ್ರತಿಪಾದಿಸಿರುವ ಬೆನ್ನಲ್ಲೇ, 2003ರಲ್ಲಿ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಚೀನಾ ಪ್ರಧಾನಿ ವೆನ್ ಜಿಯಾಬವೊ ಸಹಿ ಹಾಕಿದ್ದ ಘೋಷಣೆಯನ್ನು ಚೀನಾ ನೆನಪಿಸಿದೆ. ಟಿಬೆಟ್ ಸ್ವಾಯತ್ತ ಪ್ರದೇಶವು ಚೀನಾದ ಒಂದು ಭಾಗ ಎಂದು ಭಾರತ ಈಗಾಗಲೇ ಪರಿಗಣಿಸಿದೆ ಎಂದು ಅದು ಹೇಳಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಸಹಿ ಹಾಕಿರುವ ಟಿಬೆಟಿಯನ್ ನೀತಿ ಮತ್ತು ಬೆಂಬಲ ಕಾಯ್ದೆ (ಟಿಪಿಎಸ್ಎ) 2020ಯನ್ನು ಖಂಡಿಸಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಟಿಪಿಎಸ್ಎ 2020ಯನ್ನು ಈ ತಿಂಗಳ ಆರಂಭದಲ್ಲಿ ಅನುಮೋದಿಸಿದ್ದ ಅಮೆರಿಕ ಸಂಸತ್ತು, ಚೀನಾದ ಯಾವುದೇ ಹಸ್ತಕ್ಷೇಪವಿಲ್ಲದೆ ಟಿಬೆಟ್ನ ಬೌದ್ಧರಿಗೆ ಮುಂದಿನ ದಲೈಲಾಮಾ ಅವರನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದು ಹೇಳಿತ್ತು.
'2003ರಲ್ಲಿ ಭಾರತ ಮತ್ತು ಚೀನಾಗಳು ಪೀಪಲ್ಸ್ ರಿಪಬ್ಲಿಕನ್ ಆಫ್ ಚೀನಾ ಮತ್ತು ರಿಪಬ್ಲಿಕ್ ಆಫ್ ಇಂಡಿಯಾದ ನಡುವಿನ ಸಂಬಂಧಗಳ ತತ್ವಗಳು ಮತ್ತು ವಿಸ್ತೃತ ಸಹಕಾರ ಘೋಷಣೆಗಳಿಗೆ ಸಹಿ ಹಾಕಿದ್ದವು. ಇದರಲ್ಲಿ, ಕ್ಸಿಜಾಂಗ್ ಸ್ವಾಯತ್ತ ಪ್ರದೇಶವನ್ನು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಪ್ರದೇಶದ ಭಾಗ ಎಂದು ಭಾರತ ಪರಿಗಣಿಸಲಿದೆ ಮತ್ತು ಭಾರತದಲ್ಲಿ ಚೀನಾ ವಿರುದ್ಧ ರಾಜಕೀಯ ಚಟುವಟಿಕೆಗಳನ್ನು ನಡೆಲು ಟಿಬೆಟ್ಟಿಯನ್ನರಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಹೇಳಲಾಗಿತ್ತು' ಎಂಬುದಾಗಿ ನವದೆಹಲಿಯಲ್ಲಿನ ಚೀನಾ ರಾಯಭಾರ ಕಚೇರಿ ವಕ್ತಾರ ಜಿ ರಾಂಗ್ ಹೇಳಿದ್ದಾರೆ. ಮುಂದೆ ಓದಿ.

ಚೀನಾಕ್ಕೆ ವಾಜಪೇಯಿ ಪ್ರವಾಸ
ವಾಜಪೇಯಿ ಅವರು ವೆನ್ ಆಹ್ವಾನದ ಮೇರೆಗೆ 2003ರ ಜೂನ್ 22 ರಿಂದ 27ರವರೆಗೆ ಬೀಜಿಂಗ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಜೂನ್ 23ರಂದು ಇಬ್ಬರೂ ನಾಯಕರು ಈ ಘೋಷಣೆಗೆ ಸಹಿ ಹಾಕಿದ್ದರು. ಈ ಬದ್ಧತೆಯನ್ನು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದ ದಾಖಲೆಗಳಲ್ಲಿ ಪುನರುಚ್ಚರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ವತಂತ್ರ ಟಿಬೆಟ್ಗೆ ವಿರೋಧ
ಟಿಬೆಟ್ ಸ್ವಾಯತ್ತ ಪ್ರದೇಶವು ಚೀನಾ ಭೂಮಿಯ ಭಾಗ ಎಂದು ಭಾರತ ಅದರಲ್ಲಿ ಪರಿಗಣಿಸಿತ್ತು. ಅಲ್ಲದೆ, ಭಾರತದಲ್ಲಿ ಚೀನಾ ವಿರೋಧಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಟಿಬೆಟಿಯನ್ನರಿಗೆ ಅವಕಾಶ ನೀಡುವುದಿಲ್ಲ ಎಂದು ಮತ್ತೆ ಭರವಸೆ ನೀಡಿತ್ತು. ಈ ವಿಚಾರವಾಗಿ ಭಾರತದ ನಿಲುವನ್ನು ಚೀನಾ ಶ್ಲಾಘಿಸಿತ್ತು. ಚೀನಾವನ್ನು ವಿಭಜಿಸುವ ಮತ್ತು 'ಸ್ವತಂತ್ರ ಟಿಬೆಟ್' ರಚಿಸುವ ಪ್ರಯತ್ನ ಮತ್ತು ಕ್ರಮಗಳನ್ನು ಈ ಘೋಷಣೆಯಲ್ಲಿ ವಿರೋಧಿಸಲಾಗಿತ್ತು.

ಭಾರತ ನ್ಯಾಯೋಚಿತ ನಿಲುವು ಪಡೆಯಲಿ
'ಭಾರತವು ಚೀನಾದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯ ವಿಚಾರಕ್ಕೆ ಸಂಬಂಧಿಸಿದಂತೆ ವಸ್ತುಬದ್ಧ ಮತ್ತು ನ್ಯಾಯೋಚಿತ ನಿಲುವನ್ನು ತೆಗೆದುಕೊಳ್ಳಬೇಕು ಹಾಗೂ ಕ್ಸಿಜಾಂಗ್ (ಟಿಬೆಟ್) ಸಂಬಂಧಿಸಿದ ವಿಷಯಗಳ ಅತ್ಯಂತ ಸೂಕ್ಷ್ಮ ಸ್ವಭಾವವನ್ನು ಗ್ರಹಿಸಬೇಕು' ಎಂದು ಚೀನಾ ಬುಧವಾರ ಹೇಳಿದೆ.

ಭಾರತ-ಚೀನಾ ಸಂಬಂಧ ಹದಗೆಡಿಸುವುದು ಬೇಡ
'ಮಾಧ್ಯಮಗಳು ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ನಡೆದಿರುವ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗಳನ್ನು ಗಮನಿಸಬೇಕು ಹಾಗೂ ಚೀನಾದ ಆಂತರಿಕ ವ್ಯವಹಾರಗಳ ಮಧ್ಯೆ ಟಿಬೆಟ್ ಕಾರ್ಡ್ ಬಳಕೆಯ ಆಟವನ್ನು ಆಡುವುದರ ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹಾನಿ ಮಾಡುವ ಬದಲು ಚೀನಾ-ಭಾರತ ಸಂಬಂಧಗಳು ಮುಂದುವರಿಯಲು ಸಹಾಯ ಮಾಡಬೇಕು' ಎಂದು ತಿಳಿಸಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications