ಚೀನಾದಲ್ಲಿ ಒಂದೇ ದಿನಕ್ಕೆ 31,454 ಕೋವಿಡ್ ಪ್ರಕರಣ ಪತ್ತೆ
ನವದೆಹಲಿ, ನವೆಂಬರ್ 24: ಕೋವಿಡ್-19 ಸಾಕ್ರಾಮಿಕ ಸೋಂಕು ವಿಶ್ವದಲ್ಲಿ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡಿದೆ. ಚೀನಾ ದೇಶದಿಂದಲೇ ಆರಂಭವಾಗಿದ್ದ ಕೋವಿಡ್ ಪ್ರಕರಣಗಳು ಚೀನಾದಲ್ಲಿ ಮತ್ತೊಮ್ಮೆ ಹೆಚ್ಚಿವೆ. ಪ್ರತಿದಿನ ಕಾಣಿಸಿಕೊಳ್ಳುತ್ತಿರುವ ಹೊಸ ಕೋವಿಡ್ ಪ್ರಕರಣಗಳು ಚೀನಾದಲ್ಲಿ ಹಿಂದಿನ ದಾಖಲೆಗಳನ್ನು ಮುರಿದಿವೆ.
ಚೀನಾದ ರಾಷ್ಟ್ರೀಯ ಆರೋಗ್ಯ ಬ್ಯೂರೋ ಪ್ರಕಾರ, ನಿನ್ನೆ ಬುಧವಾರ ಒಂದೇ ದಿನಕ್ಕೆ 31,454 ಹೊಸ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಸೋಂಕನ್ನು ನಿಯಂತ್ರಿಸಲು ಲಾಕ್ಡೌನ್, ಸಾಮೂಹಿಕ ಪರೀಕ್ಷೆ ಮತ್ತು ಪ್ರಯಾಣಕ್ಕೆ ನಿರ್ಬಂಧಗಳನ್ನು ವಿಧಿಸಲಾಗಿದೆ.
ಚೀನಾ ಇಡೀ ದೇಶದಲ್ಲಿ ಝೀರೋ ಕೋವಿಡ್ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯ ಅಡಿಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಇಡೀ ನಗರವನ್ನು ಮುಚ್ಚಲಾಗುತ್ತದೆ ಮತ್ತು ಕೋವಿಡ್ ಸೋಂಕಿತ ಜನರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಚೀನಾ ಆಡಳಿತಗಾರರ ಈ ನೀತಿಯ ವಿರುದ್ಧ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಹಲವೆಡೆ ಪ್ರತಿಭಟನೆಯ ಸುದ್ದಿಯೂ ಹೊರಬೀಳುತ್ತಿದೆ. ಮುಂದಿನ ದಿನಗಳಲ್ಲಿ ಚೀನಾ ತನ್ನ ಕೋವಿಡ್ ನಿರ್ಬಂಧಗಳನ್ನು ಸಡಿಲಿಸದಿರಬಹುದು ಎಂದು ರೋಗ ತಜ್ಞರು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ.
ಬೀಜಿಂಗ್ನಲ್ಲಿ ನಿರ್ಬಂಧ
ಕೋವಿಡ್ ಸೋಂಕು ತಡೆಗಟ್ಟಲು ಅಧಿಕಾರಿಗಳು ನವೆಂಬರ್ 10ರಿಂದ ಬೀಜಿಂಗ್ನ ಕೆಲವು ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಬಿಗಿಗೊಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹಲವು ಪ್ರವಾಸಿ ಸ್ಥಳಗಳನ್ನು ಸರ್ಕಾರ ಮುಚ್ಚಿದೆ. ಅಧಿಕಾರಿಗಳು ಚಾಯಾಂಗ್ ಜಿಲ್ಲೆಯ ಹಲವಾರು ಪ್ರದೇಶಗಳನ್ನು ಹೆಚ್ಚಿನ ಅಥವಾ ಮಧ್ಯಮ-ಅಪಾಯದ ಪ್ರದೇಶಗಳಾಗಿ ಗೊತ್ತುಪಡಿಸಿದ್ದಾರೆ. ರಾಜಧಾನಿಯ ಇತರ ಭಾಗಗಳಲ್ಲಿ ಸೋಂಕು ಪತ್ತೆಯಾದ ವರದಿಯಾಗಿವೆ. ಹೆಚ್ಚಿನ ಅಪಾಯದ ಪ್ರದೇಶಗಳ ನಿವಾಸಿಗಳನ್ನು ತಮ್ಮ ಮನೆಗಳಲ್ಲಿ ಉಳಿಯಲು ಕೇಳಲಾಗಿದೆ ಮತ್ತು ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications