ಚೀನಾದಿಂದ ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣ: ಭಾರತಕ್ಕೆ ಆತಂಕ
ಬೀಜಿಂಗ್, ನವೆಂಬರ್ 30: ಗಡಿಯಲ್ಲಿ ಒಂದಿಲ್ಲೊಂದು ತಂಟೆ ಮಾಡುವ ಮೂಲಕ ಭಾರತದೊಂದಿಗೆ ಕಿರಿಕ್ ಮಾಡುತ್ತಿರುವ ಚೀನಾ, ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಉದ್ದೇಶಿಸಿದೆ. ಚೀನಾದ 14ನೇ ಪಂಚವಾರ್ಷಿಕ ಯೋಜನೆಯ ಭಾಗವಾಗಿ ಈ ಪ್ರಸ್ತಾಪವನ್ನು ಮುಂದಿರಿಸಲಾಗಿದ್ದು, ಮುಂದಿನ ವರ್ಷ ಅನುಷ್ಠಾನಕ್ಕೆ ಬರಲಿದೆ. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಟಿಬೆಟ್ನಲ್ಲಿ ಚೀನಾ ಬೃಹತ್ ಅಣೆಕಟ್ಟು ನಿರ್ಮಿಸಲಿದೆ.
ಯರ್ಲುಂಗ್ ಝಾಂಗ್ಬೊ ನದಿಯ (ಬ್ರಹ್ಮಪುತ್ರ ನದಿಗೆ ಟಿಬೆಟಿಯನ್ ಹೆಸರು) ಕೆಳಹರಿವಿನ ಪ್ರದೇಶವನ್ನು ಜಲವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಲು ಚೀನಾ ತೀರ್ಮಾನಿಸಿದೆ ಎಂದು ಚೀನಾದ ವಿದ್ಯುತ್ ಯೋಜನೆ ನಿರ್ಮಾಣ ಸಂಸ್ಥೆಯ ಅಧ್ಯಕ್ಷ ಯಾನ್ ಝಿಯಾಂಗ್ ಹೇಳಿದ್ದಾರೆ. ಈ ಯೋಜನೆಯು ಜಲ ಸಂಪನ್ಮೂಲಗಳ ನಿರ್ವಹಣೆ ಮತ್ತು ಆಂತರಿಕ ಭದ್ರತೆಗೆ ನೆರವಾಗಲಿದೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
ದೇಶದ 14ನೇ ಪಂಚವಾರ್ಷಿಕ ಯೋಜನೆಯ (2021-2025) ಭಾಗವಾಗಿ ಮತ್ತು ಆಡಳಿತಾರೂಢ ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಕೇಂದ್ರ ಸಮಿತಿಯು 2035ರವರೆಗೆ ರೂಪಿಸಿರುವ ದೀರ್ಘಾವಧಿ ಗುರಿಗಳ ಅಡಿಯಲ್ಲಿ ಈ ಪ್ರಸ್ತಾಪವನ್ನು ಸ್ಪಷ್ಟವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇತಿಹಾಸದಲ್ಲಿ ಇದಕ್ಕೆ ಸಮಾನಾಂತರವಾದದ್ದು ಯಾವುದೂ ಇಲ್ಲ. ಜಲವಿದ್ಯುತ್ ಕೈಗಾರಿಕೆಯಲ್ಲಿ ಚೀನಾಕ್ಕೆ ಇದು ಐತಿಹಾಸಿಕ ಅವಕಾಶ ಎಂದು ಹೈಡ್ರೋಪವರ್ ಎಂಜಿನಿಯರಿಂಗ್ನ ಚೀನಾ ಸೊಸೈಟಿ ಸ್ಥಾಪನೆಯ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಯಾನ್ ಝಿಯಾಂಗ್ ಹೇಳಿದ್ದಾರೆ.
ಚೀನಾವು ಬ್ರಹ್ಮಪುತ್ರ ನದಿಗೆ ನಿರ್ಮಿಸುವ ಅಣೆಕಟ್ಟುಗಳು ಭಾರತ ಮತ್ತು ಬಾಂಗ್ಲಾದೇಶಕ್ಕೆ ಕಳವಳ ಮೂಡಿಸಿದೆ. ಬಾಂಗ್ಲಾದೇಶದ ಅನೇಕ ನದಿ ತೀರದ ರಾಜ್ಯಗಳಿಗೆ ಇದು ಅಪಾಯವುಂಟುಮಾಡುವ ಸಾಧ್ಯತೆ ಇದೆ. ಆದರೆ ನೆರೆಯ ದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಯೋಜನೆ ರೂಪಿಸುತ್ತಿರುವುದಾಗಿ ಹೇಳಿರುವ ಚೀನಾ, ಈ ಬಗ್ಗೆ ಆತಂಕ ಬೇಡ ಎಂದಿದೆ.
ಭಾರತವು ತನ್ನ ಕೆಳಭಾಗದ ನದಿ ತೀರದ ರಾಜ್ಯಗಳಲ್ಲಿನ ಹಿತಾಸಕ್ತಿ ಕಾಪಾಡುವಂತೆ ಚೀನಾದ ಅಧಿಕಾರಿಗಳಿಗೆ ನಿರಂತರವಾಗಿ ಮನವರಿಕೆ ಮಾಡುತ್ತಾ ಬಂದಿದೆ. ಚೀನಾ ಈಗಾಗಲೇ ಟಬೆಟ್ನ ಅತಿ ದೊಡ್ಡ ಝ್ಯಾಮ್ ಹೈಡ್ರೋಪವರ್ ಸ್ಟೇಷನ್ನನ್ನು 1.5 ಬಿಲಿಯನ್ ಡಾಲರ್ ವೆಚ್ಚದಲ್ಲಿ 2015ರಿಂದ ಕಾರ್ಯಾಚರಣೆ ಮಾಡುತ್ತಿದೆ. ಇದಲ್ಲದೆ ಮೆಡೋಕ್ ಕೌಂಟಿಯಲ್ಲಿ ಚೀನಾ ಸೂಪರ್ ಹೈಡ್ರೋಪವರ್ ಸ್ಟೇಷನ್ ನಿರ್ಮಾಣ ಮಾಡಲು ಉದ್ದೇಶಿಸಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಟಿಬೆಟ್ನ ಗಡಿಯಲ್ಲಿರುವ ಮೆಡೋಕ್ ಕೌಂಟಿ ಅರುಣಾಚಲ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications